Sunday, May 10, 2026

ರಾಜಕೀಯ

ಸಿದ್ದರಾಮಯ್ಯ ಇಲ್ಲದೆ ಕಾಂಗ್ರೆಸ್ ದುರ್ಬಲ?

ರಾಜ್ಯ ರಾಜಕೀಯದಲ್ಲಿ ಸದ್ಯ ನಾಯಕತ್ವ ಬದಲಾವಣೆಯದ್ದೇ ಚರ್ಚೆ. ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರಕ್ಕೆ ನವೆಂಬರ್ ತಿಂಗಳಲ್ಲಿ ಎರಡುವರೆ ವರ್ಷ ತುಂಬಲಿದೆ. ಇದೇ ಸಂದರ್ಭದಲ್ಲಿ ಸಿಎಂ ಸ್ಥಾನ ಬದಲಾವಣೆ ಆಗಲಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ಮತ್ತೊಂದು ಕಡೆ ಯಾತಿಂದ್ರ ಸಿದ್ದರಾಮಯ್ಯ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಭುಗಿಲೆದ್ದಿದೆ. ಯತೀಂದ್ರ ಅವರ ಈ ಹೇಳಿಕೆ ಕೇವಲ ವೈಯಕ್ತಿಕ ಅಭಿಪ್ರಾಯವಲ್ಲ, ಅದು...

ಕಾಂಗ್ರೆಸ್ ನಲ್ಲಿ ಘಟಾನುಘಟಿಗಳಿಲ್ಲವಾ? ಸತೀಶ್ ಜಾರಕಿಹೊಳಿ ಅವರೇ ಉತ್ತರಾಧಿಕಾರಿ ಯಾಕೆ?

ಕಾಂಗ್ರೆಸ್ ಪಕ್ಷದಲ್ಲಿ ಬೇರೆ ಘಟಾನುಘಟಿಗಳಿಲ್ಲವಾ? ಜಾರಕಿಹೊಳಿನೇ ಉತ್ತರಾಧಿಕಾರಿ ಯಾಕೆ? ಅನ್ನೋ ಪ್ರಶ್ನೆ ರಾಜ್ಯ ರಾಜಕೀಯದಲ್ಲಿ ಇದೀಗ ಗರಿಷ್ಠ ಮಟ್ಟಕ್ಕೆ ಚರ್ಚೆಯಾಗುತ್ತಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರವು ನವೆಂಬರ್‌ನಲ್ಲಿ ಎರಡುವರೆ ವರ್ಷ ಪೂರೈಸಲಿದೆ. ಇದೇ ವೇಳೆಗೆ ಸಿಎಂ ಸ್ಥಾನ ಬದಲಾವಣೆಯ ಸಾಧ್ಯತೆಗಳ ಕುರಿತ ಮಾತುಗಳು ವೇಗ ಪಡೆದಿವೆ. ಇದಕ್ಕೆ ತೀವ್ರತೆ ನೀಡಿದಂತಾಗಿದೆ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ...

ಸರ್ಕಾರಕ್ಕೆ ಹೈಕೋರ್ಟ್‌ನಲ್ಲಿ ಹಿನ್ನಡೆ : ಮೇಲ್ಮನವಿ ಸಲ್ಲಿಸುತ್ತೇವೆ ಎಂದ ಸಿದ್ದರಾಮಯ್ಯ

ರಾಜ್ಯ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ತಡೆ ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಸಭೆ, ಸಮಾರಂಭಗಳಿಗೆ ಅನುಮತಿ ಕಡ್ಡಾಯಗೊಳಿಸುವ ಸರ್ಕಾರದ ಆದೇಶಕ್ಕೆ ದೊಡ್ಡ ಹಿನ್ನಡೆ ಉಂಟಾಗಿದೆ. ಆರ್‌ಎಸ್‌ಎಸ್ ಪಥಸಂಚಲನಕ್ಕೆ ಅನುಮತಿ ನಿರಾಕರಿಸಿದ್ದ ಸರ್ಕಾರದ ಕ್ರಮದ ವಿರುದ್ಧ ಸಂಸ್ಥೆ ಸಲ್ಲಿಸಿದ್ದ ಮನವಿಯ ವಿಚಾರಣೆ ವೇಳೆ, ಹೈಕೋರ್ಟ್ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಪೀಠ ಮಧ್ಯಂತರ ತಡೆಯಾಜ್ಞೆ ನೀಡಿದೆ. ಸರ್ಕಾರ 10...

ಡಿಕೆ ವಿರುದ್ಧ ಸಿದ್ದು ಪ್ಲಾನ್‌ ವರ್ಕೌಟ್‌ ಆಗುತ್ತಾ?

ಕಾಂಗ್ರೆಸ್‌ನಲ್ಲಿ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್‌ ನಡುವಿನ ಕುರ್ಚಿ ಕಾಳಗ, ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಡಿಸಿಎಂ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಹುದ್ದೆ ಪಡೆಯುವ ಮಹಾತ್ವಕಾಂಕ್ಷೆಗೆ ಪೆಟ್ಟು ನೀಡಲು, ಹೈಕಮಾಂಡ್‌ ಭೇಟಿ ವೇಳೆ 2 ಡಿಸಿಎಂ ಹುದ್ದೆಗಳ ರಚನೆಯ ಬಗ್ಗೆ ಪ್ರಸ್ತಾಪಿಸಲು, ಸಿದ್ದರಾಮಯ್ಯ ತಂತ್ರ ರೂಪಿಸಿದ್ದಾರೆಂದು ವರದಿಯಾಗಿದೆ. ಬಿಹಾರ ಚುನಾವಣಾ ಫಲಿತಾಂಶ ಹೊರಬಂದ ನಂತರ, ನವೆಂಬರ್ 14ರಿಂದ...

12 ರಾಜ್ಯಗಳಲ್ಲಿ ವೋಟ್ ಚೋರಿ?

ಪ್ರಧಾನಿ ನರೇಂದ್ರ ಮೋದಿ ಮತ್ತು ಚುನಾವಣಾ ಆಯೋಗದ ಮೇಲೆ ಕಾಂಗ್ರೆಸ್‌ ಗಂಭೀರ ಆರೋಪ ಮಾಡಿದೆ. ಚುನಾವಣಾ ಆಯೋಗವು ಮೋದಿ ಸರ್ಕಾರದೊಂದಿಗೆ ಶಾಮೀಲಾಗಿ, ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ ಮಾಡಿದೆ. ದೇಶದ 12 ರಾಜ್ಯಗಳಲ್ಲಿ ʻವೋಟ್ ಚೋರಿʼ ನಡೆಸಲು ಸಂಚು ರೂಪಿಸಿದೆ ಎಂದು ವಾಗ್ದಾಳಿ ನಡೆಸಿದೆ. ಬಿಹಾರದಲ್ಲಿ ಈಗಾಗಲೇ 69 ಲಕ್ಷ ಮತದಾರರ ಹೆಸರನ್ನು ಪಟ್ಟಿಯಿಂದ...

ಕಲಬುರಗಿ ಶಾಂತಿ ಸಭೆಯಲ್ಲಿ ಅಶಾಂತಿ

ಚಿತ್ತಾಪುರಲ್ಲಿ RSS ಪಥಸಂಚಲನಕ್ಕೆ ಅನುಮತಿ ನೀಡುವ ವಿಚಾರ, ಇಡೀ ಕಲಬುರಗಿ ಜಿಲ್ಲೆಯಲ್ಲಿ ಉದ್ವಿಗ್ನತೆ ಉಂಟು ಮಾಡಿದೆ. ಈ ಕುರಿತು ಶಾಂತಿ ಕಾಪಾಡುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಾಂತಿ ಸಭೆ ಆಯೋಜಿಸಲಾಗಿತ್ತು. ಆ ವೇಳೆ ಸಂಘಟನೆಗಳಿಂದ ವಾಗ್ವಾದ ನಡೆದಿದೆ. ಸಭೆಯಲ್ಲಿ RSS, ಭೀಮ್ ಆರ್ಮಿ, ಭಾರತೀಯ ದಲಿತ ಪ್ಯಾಂಥರ್ ಹಾಗೂ ಛಲವಾದಿ ಮಹಾಸಭಾ ಸಂಘಟನೆಗಳ ಪ್ರತಿನಿಧಿಗಳನ್ನು ಆಹ್ವಾನಿಸಲಾಗಿತ್ತು....

DK ವಾಪಸ್ ಬರ್ತಿದ್ದಂತೆ ದೆಹಲಿಗೆ ಸಿದ್ದು ಆಪ್ತರು!

ರಾಜ್ಯ ಕಾಂಗ್ರೆಸ್‌ನಲ್ಲಿ ಕ್ಷಣಕ್ಷಣಕ್ಕೂ ನವೆಂಬರ್‌ ಕ್ರಾಂತಿಯ ಜ್ವಾಲೆ ಹೆಚ್ಚಾಗುತ್ತಿದೆ. ಕ್ರಾಂತಿ ಸಂಘರ್ಷ ಬೆನ್ನಲ್ಲೇ ಇಬ್ಬರು ಘಟಾನುಘಟಿ ನಾಯಕರು, ದಿಢೀರ್‌ ದೆಹಲಿ ಪ್ರವಾಸ ಕೈಗೊಂಡಿದ್ದಾರೆ. ಕಳೆದ ಭಾನುವಾರಷ್ಟೇ ಡಿಸಿಎಂ ಡಿ.ಕೆ. ಶಿವಕುಮಾರ್‌ ದೆಹಲಿಗೆ ಹೋಗಿದ್ರು. ಆದ್ರೆ ರಾಹುಲ್‌ ಗಾಂಧಿ ಭೇಟಿಗೆ ಅವಕಾಶ ಸಿಗದ ಕಾರಣಕ್ಕೆ ಬರಿಗೈಯಲ್ಲಿ ವಾಪಸ್ ಆಗಿದ್ರು. ಸಿಎಂ ಸಿದ್ದರಾಮಯ್ಯ ಅವರ ಆಪ್ತರು ಮತ್ತು ಸಚಿವರಾದ...

ನವೆಂಬರ್ ಕ್ರಾಂತಿಗೆ ಹೊಸ ಮಸಾಲೆ : ಜಾರಕಿಹೊಳಿ ಸ್ಪೋಟಕ ಹೇಳಿಕೆ

ರಾಜ್ಯ ರಾಜಕೀಯದಲ್ಲಿ ಈಗ ನವೆಂಬರ್‌ ಕ್ರಾಂತಿ ಚರ್ಚೆ ಬಿಸಿಯಾಗುತ್ತಿದೆ. ಪ್ರತಿ ದಿನ ಹೊಸ ಹೇಳಿಕೆ, ಹೊಸ ರಾಜಕೀಯ ಸಂಕೇತಗಳು ಗಮನ ಸೆಳೆಯುತ್ತಿವೆ. ಇತ್ತೀಚೆಗೆ 5 ವರ್ಷ ಸಿಎಂ ನಾನೇ ಎಂದು ಖಚಿತವಾಗಿ ಹೇಳುತ್ತಿದ್ದ ಸಿದ್ದರಾಮಯ್ಯ, ಈಗ ಹೈಕಮಾಂಡ್‌ ಏನು ಹೇಳುತ್ತದೋ ಅದಕ್ಕೆ ಅನುಗುಣವಾಗಿ ನಡೆದುಕೊಳ್ಳುತ್ತೇನೆ ಎಂದು ಹೇಳಿರುವುದು ಹೊಸ ಕುತೂಹಲಕ್ಕೆ ಕಾರಣವಾಗಿದೆ. ಇತ್ತ ಉಪ ಮುಖ್ಯಮಂತ್ರಿ...

ಟನಲ್ ರೋಡ್ ಬಿಡಿ ಸ್ವಾಮಿ ಪಾಲಿಕೆ ಶಿಕ್ಷಕರಿಗೆ ಸಂಬಳ ಕೊಡಿ – ಆರ್. ಅಶೋಕ್ ವ್ಯಂಗ್ಯ

ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯ ಶಾಲಾ ಮತ್ತು ಕಾಲೇಜುಗಳ ಶಿಕ್ಷಕರು ಕಳೆದ ನಾಲ್ಕು ತಿಂಗಳಿನಿಂದ ಸಂಬಳವಿಲ್ಲದೆ ಪರದಾಡುತ್ತಿರುವುದು ಬೆಳಕಿಗೆ ಬಂದಿದೆ. ಈ ವಿಚಾರವನ್ನು ಉಲ್ಲೇಖಿಸಿ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ತೀವ್ರ ಟೀಕೆ ಮಾಡಿದ್ದಾರೆ. ಟ್ವೀಟ್‌ನಲ್ಲಿ ಆರ್. ಅಶೋಕ್ ವ್ಯಂಗ್ಯವಾಗಿ ಬರೆದುಕೊಂಡಿದ್ದು, ಟನಲ್ ರೋಡ್ ಬಿಡಿ...

ಪ್ರಿಯಾಂಕ್‌ ಖರ್ಗೆಗೆ ಹಲೋ ಟೆಡ್ಡಿ ಬಾಯ್ ಎಂದ ಬಿಜೆಪಿ

ಸೆಮಿಕಂಡಕ್ಟರ್ ಕೈಗಾರಿಕೆಗಳ ಕುರಿತ ಹೇಳಿಕೆಯನ್ನು ಅಸ್ಸಾಂ ಸಿಎಂ ತಿರುಚಿದ್ದಾರೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ರು. ಇದಕ್ಕೆ ಅಸ್ಸಾಂ ಬಿಜೆಪಿ ತಿರುಗೇಟು ನೀಡಿದೆ. ಪ್ರಿಯಾಂಕ್ ಖರ್ಗೆ ಟ್ವೀಟ್‌ ಸಂದೇಶಕ್ಕೆ ಟ್ವೀಟ್‌ ಮೂಲಕವೇ ಚಾಟಿ ಬೀಸಿದೆ. ‘ಹಲೋ ಟೆಡ್ಡಿ ಬಾಯ್.. ಎಕ್ಸ್‌ನಲ್ಲಿ ಸುದೀರ್ಘ ಪ್ರಬಂಧ ಬರೆಯುವುದರಿಂದ ನೀವು ಸೆಮಿಕಂಡಕ್ಟರ್ ತಜ್ಞ ಆಗಲಾರಿರಿ. ಅಸ್ಸಾಂ ಬಗ್ಗೆ ಉಪನ್ಯಾಸ ನೀಡುವ...
- Advertisement -spot_img

Latest News

Political News: ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದ ಸಚಿವ ಡಿ.ಸುಧಾಕರ್(65) ಚಿಕಿತ್ಸೆ ಫಲಿಸದೇ ನಿಧನ

Political News: ಡಿ.ಸುಧಾಕರ್(65) ಕಳೆದ 1 ತಿಂಗಳನಿಂದ ಅನಾರೋಗ್ಯದಿಂದ ಬಳಲಿ ಆಸ್ಪತ್ರೆ ಸೇರಿದ್ದರು. ಮೊಣಕಾಲು ನೋವು ಎಂದು ಆಸ್ಪತ್ರೆ ಸೇರಿದ್ದು, ಇನ್‌ಫೆಕ್ಷನ್‌ ಆಗಿ ಐಸಿಯುನಲ್ಲಿದ್ದರು. ಕೆಲ...
- Advertisement -spot_img