ಬೆಂಗಳೂರಿನ ಸೌಲಭ್ಯಗಳ ಬಗ್ಗೆ ಅಸಮಾಧಾನವಿದ್ದರೆ ಕಂಪನಿಗಳು ಸ್ಥಳಾಂತರಗೊಳ್ಳಲು ಸ್ವತಂತ್ರರಾಗಿದ್ದಾರೆ. ಆದರೆ ಸರ್ಕಾರಕ್ಕೆ ಬೆದರಿಕೆ ಹಾಕಲು ಯಾರಿಗೂ ಅವಕಾಶವಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.
ರಾಷ್ಟ್ರೀಯ ಮಾಧ್ಯಮವೊಂದರ ಜೊತೆ ಮಾತನಾಡಿದ ಅವರು, ನಗರದ ಮೂಲಸೌಕರ್ಯಗಳನ್ನು ಸರಿಪಡಿಸಲು ಸರ್ಕಾರ ಬದ್ಧವಾಗಿದೆ. ರಸ್ತೆ ಗುಂಡಿಗಳನ್ನು ಮುಚ್ಚಲು ನವೆಂಬರ್ ಗಡುವು ನಿಗದಿ ಮಾಡಲಾಗಿದೆ. ಬೆಂಗಳೂರಿನ ಬೆಳವಣಿಗೆಯನ್ನು ಗಮನದಲ್ಲಿಟ್ಟುಕೊಂಡು ನಿರಂತರ ಅಭಿವೃದ್ಧಿ...
ಈ ಬಾರಿಯ ದಸರಾದಲ್ಲಿ ಬನ್ನಿಮಂಟಪದಲ್ಲಿ ವಾರಪೂರ್ತಿ ವಿವಿಧ ಕಾರ್ಯಕ್ರಮಗಳು ಜರುಗಲಿವೆ. ಆದರೆ ಜಿಲ್ಲಾಡಳಿತವು ಪ್ರತಿಯೊಂದು ಕಾರ್ಯಕ್ರಮಕ್ಕೂ ಪಾಸ್ ಕಡ್ಡಾಯಗೊಳಿಸಿರುವುದರಿಂದ ಸಾರ್ವಜನಿಕರಿಗೆ ಪ್ರವೇಶ ಸಿಗುವುದು ಕಷ್ಟ ಎನ್ನಲಾಗುತ್ತಿದೆ. ಈ ಬಾರಿ ನಾಲ್ಕು ದಿನ ಡ್ರೋನ್ ಶೋ, ಪಂಜಿನ ಕವಾಯತು ಹಾಗೂ ವೈಮಾನಿಕ ಪ್ರದರ್ಶನಗಳು ವಿಶೇಷ ಆಕರ್ಷಣೆ ಆಗಲಿವೆ.
ಇದುವರೆಗೆ ಪಂಜಿನ ಕವಾಯತು ಹೊರತುಪಡಿಸಿ ಇತರ ಕಾರ್ಯಕ್ರಮಗಳಿಗೆ ಉಚಿತ...
ನಾಡ ಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಕೆಲವೇ ದಿನಗಳು ಮಾತ್ರ ಬಾಕಿ ಇದೆ. ದಿನಗಣನೆ ಇರುವಂತೆ, ಸಿದ್ಧತೆಗಳು ಜೋರಾಗಿ ನಡೆಯುತ್ತಿವೆ. ಆದರೆ, ಉದ್ಘಾಟಕರಾಗಿ ಆಯ್ಕೆಯಾಗಿರುವ ಬೂಕರ್ ಪ್ರಶಸ್ತಿ ಪುರಸ್ಕೃತ ಲೇಖಕಿ ಬಾನು ಮುಷ್ತಾಕ್ ಕುರಿತು ವಿವಾದ ಮುಂದುವರಿದಿದೆ. ಈ ಹಿಂದೆ ಹೈಕೋರ್ಟ್ನಲ್ಲಿ ಈ ವಿಚಾರದ ಮೇಲೆ ಸಲ್ಲಿಸಲಾದ ಅರ್ಜಿಗಳನ್ನು ವಜಾಗೊಳಿಸಿ, ಸರ್ಕಾರದ ನಿರ್ಧಾರದಲ್ಲಿ ಯಾವುದೇ...
ಸಾಹಸಸಿಂಹ, ನಟರತ್ನ ಡಾ. ವಿಷ್ಣುವರ್ಧನ್ ಅವರ 75ನೇ ಜನ್ಮದಿನದ ಅಂಗವಾಗಿ, ಉಳ್ಳೂರು ಗೇಟ್ ಬಳಿ ನಿರ್ಮಿಸಲಾದ ವಿಷ್ಣು ಸ್ಮಾರಕದಲ್ಲಿ ವಿಶೇಷ ಕಾರ್ಯಕ್ರಮಗಳು ಜರುಗಿದವು. ವಿಷ್ಣುವರ್ಧನ್ ಅವರ ಪತ್ನಿ ಭಾರತಿ ವಿಷ್ಣುವರ್ಧನ್, ಮಗಳು ಕೀರ್ತಿ ವಿಷ್ಣುವರ್ಧನ್, ಅಳಿಯ ಅನಿರುದ್ಧ ಹಾಗೂ ನೂರಾರು ಅಭಿಮಾನಿಗಳು ಸ್ಮಾರಕಕ್ಕೆ ಆಗಮಿಸಿ, ಪ್ರತಿಮೆಗೆ ಮಾಲಾರ್ಪಣೆ ಮಾಡಿ ಪೂಜೆ ಸಲ್ಲಿಸಿದರು.
ಗುರುವಾರ ಬೆಳಗಿನ ಜಾವದಿಂದಲೇ...
ಧರ್ಮಸ್ಥಳದ ಬುರುಡೆ ಪ್ರಕರಣ ಸಕತ್ ಸದ್ದು ಮಾಡಿತ್ತು. ಈಗ ಧರ್ಮಸ್ಥಳದ ಬಂಗ್ಲೆಗುಡ್ಡದಲ್ಲಿ ಮಾನವನ ಅವಶೇಷಗಳು ಪತ್ತೆಯಾಗಿವೆ. ಸದ್ಯ ಇದು ರಾಜ್ಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿವೆ. ಈಗ ಲಭ್ಯವಾಗಿರುವ ಪ್ರಾಥಮಿಕ ಮಾಹಿತಿಯಂತೆ ಪತ್ತೆಯಾದ ತಲೆಬುರುಡೆಗಳು ಇತ್ತೀಚಿನವು ಅನ್ನೊದಾಗಿ ಗೊತ್ತಾಗಿವೆ. ಅವು ಬಹುತೇಕ ಪುರುಷರದ್ದು ಅಂತ ಎಸ್ಐಟಿ ಮೂಲಗಳು ಶಂಕೆ ವ್ಯಕ್ತಪಡಿಸಿವೆ.
ಬಂಗ್ಲೆಗುಡ್ಡ ಮೀಸಲು ಅರಣ್ಯ ಪ್ರದೇಶದಲ್ಲಿ ಎಸ್ಐಟಿ...
ಬಿಗ್ ಬಾಸ್ ಮನೆಯಲ್ಲಿ ರಂಜಿತ್, ಲಾಯರ್ ಜಗದೀಶ್ ಮಧ್ಯೆ ಗಲಾಟೆ ನಡೆದು, ಇಬ್ಬರೂ ಶೋನಿಂದ ಔಟ್ ಆದರು. ಬಿಗ್ಬಾಸ್ ಖ್ಯಾತಿಯ ನಟ ರಂಜಿತ್, ಕೌಟುಂಬಿಕ ಗಲಾಟೆಯಿಂದ ಮತ್ತೆ ಸುದ್ದಿಯಲ್ಲಿದ್ದಾರೆ. ರಂಜಿತ್ ಹಾಗೂ ಅಕ್ಕನ ಆಸ್ತಿ ಜಗಳ ಪೊಲೀಸ್ ಠಾಣೆ ಮೆಟ್ಟಿಲೇರಿದೆ. ರಂಜಿತ್ ಭಾವ ಜಗದೀಶ್, ಜೀವ ಬೆದರಿಕೆ ಆರೋಪದಡಿ ದೂರು ದಾಖಲಿಸಿದ್ದಾರೆ.
2018ರಿಂದ ಅಮೃತಹಳ್ಳಿಯ ಫ್ಲಾಟ್ನಲ್ಲಿ,...
ತುಮಕೂರು-ಬೆಂಗಳೂರು ಪ್ರಯಾಣಿಕರಿಗೆ ಗುಡ್ ನ್ಯೂಸ್ ಸಿಕ್ಕಿದೆ. ಇನ್ಮುಂದೆ ತುಮಕೂರು-ಬೆಂಗಳೂರು ನಡುವಿನ ಸಂಚಾರ, ತೀರಾ ಸುಲಭವಾಗಲಿದೆ. ಯಾಕಂದ್ರೆ, ಶೀಘ್ರವೇ 4 ಪಥದ ರೈಲು ಮಾರ್ಗ ನಿರ್ಮಾಣವಾಗಲಿದೆ. ಬರೋಬ್ಬರಿ 90 ಕೋಟಿ ವೆಚ್ಚದಲ್ಲಿ ತುಮಕೂರು ರೈಲು ನಿಲ್ದಾಣವನ್ನು ಅಭಿವೃದ್ಧಿಪಡಿಸಲಾಗುವುದು ಅಂತಾ, ಕೇಂದ್ರ ಸಚಿವ ವಿ. ಸೋಮಣ್ಣ ಹೇಳಿದ್ದಾರೆ.
ತುಮಕೂರು-ಬೆಂಗಳೂರು ನಡುವೆ 4 ಪಥದ ರೈಲು ಮಾರ್ಗ ನಿರ್ಮಾಣ ಮಾಡಿ,...
ಸೆಪ್ಟೆಂಬರ್ 22ರಿಂದ ರಾಜ್ಯದಲ್ಲಿ ಜಾತಿ ಗಣತಿ ಶುರುವಾಗ್ತಿದೆ. ಆದ್ರೀಗ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಹೊಸ ತಲೆ ನೋವು ಶುರುವಾಗಿದೆ. ಜಾತಿಗಣತಿಗೆ ಭಾರೀ ವಿರೋಧ ವ್ಯಕ್ತವಾಗ್ತಿದ್ದು, ನ್ಯಾಯಾಲಯದ ಮೆಟ್ಟಿಲೇರಿದೆ. ಹೊಸ ಉಪಜಾತಿಗಳ ಸೃಷ್ಟಿ ಆರೋಪ ಬೆನ್ನಲ್ಲೇ, ಹೈಕೋರ್ಟ್ಗೆ 2 ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳು ದಾಖಲಾಗಿವೆ. ರಾಜ್ಯದಲ್ಲಿ ಜಾತಿ ಗಣತಿಯನ್ನೇ ರದ್ದುಪಡಿಸುವಂತೆ ಕೋರಲಾಗಿದೆ.
ವಕೀಲ ಕೆ.ಎನ್. ಸುಬ್ಬಾರೆಡ್ಡಿ ಸೇರಿ...
ಹಾಸನ ಮಹಾನಗರ ಪಾಲಿಕೆಯ ನೂತನ ಮೇಯರ್ ಆಗಿ, 8ನೇ ವಾರ್ಡ್ನ ಜೆಡಿಎಸ್ ಸದಸ್ಯ ಗಿರೀಶ್ ಚನ್ನವೀರಪ್ಪ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಹಿಂದೆ ಮೇಯರ್ ಆಗಿದ್ದ ಎಂ. ಚಂದ್ರೇಗೌಡರ ಸದಸ್ಯತ್ವ ಅನರ್ಹಗೊಂಡ ನಂತರ, ಮೇಯರ್ ಸ್ಥಾನ ಖಾಲಿಯಾಗಿತ್ತು. ಮೇಯರ್ ಸ್ಥಾನಕ್ಕೆ ಸೆಪ್ಟೆಂಬರ್ 10ರಂದು ಚುನಾವಣೆ ನಿಗದಿಯಾಗಿತ್ತು. ಆದ್ರೆ, ಮೈಸೂರು ಪ್ರಾದೇಶಿಕ ಆಯುಕ್ತರು ವರ್ಗಾವಣೆಗೊಂಡ ಹಿನ್ನೆಲೆ, ಮುಂದೂಡಲಾಗಿತ್ತು.
ಮೇಯರ್...
ಈ ಕಾರ್ಯಾಗಾರದಲ್ಲಿ ಕೇಂದ್ರ ಸಚಿವರು ಧರ್ಮೇಂದ್ರ ಪ್ರದಾನ್, ಪ್ರಹ್ಲಾದ್ ಜೋಶಿ ಮತ್ತು ರಾಷ್ಟ್ರೀಯ ನಾಯಕ ಬಿಎಲ್ ಸಂತೋಷ್ ಸೇರಿದಂತೆ ಹಲವು ಹಿರಿಯ ನಾಯಕರು ಭಾಗವಹಿಸಲಿದ್ದಾರೆ. ಈ ಬಗ್ಗೆ ಮಾತನಾಡಲಿದ್ದಾರೆ. ಬಿಜೆಪಿ ರಾಜ್ಯ ಘಟಕದ ಮುಖ್ಯಸ್ಥರು ಮತ್ತು ವಿವಿಧ ಜಿಲ್ಲೆಗಳ ಪ್ರಮುಖ ಮುಖಂಡರೂ ಸಹ ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ.
ಬಿಜೆಪಿಯ ಹಿರಿಯ ನಾಯಕ ಹಾಗೂ ವಿಧಾನಪರಿಷತ್ ಸದಸ್ಯ ಎನ್....
ತುಮಕೂರು ನಗರದಲ್ಲಿ ಮೇ 10ರಂದು ವಿದ್ಯುತ್ ಸರಬರಾಜಿನಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಪ್ರಕಟಿಸಿದೆ. ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ...