Political News: ಬೆಂಗಳೂರಿನ ರಸ್ತೆ ಗುಂಡಿಗಳ ಸಮಸ್ಯೆಯನ್ನು ಬಗೆಹರಿಸಲು ನವೆಂಬರ್ ಒಳಗೆ ರಸ್ತೆ ಗುಂಡಿಗಳನ್ನು ಮುಚ್ಚುವಂತೆ ಗುತ್ತಿಗೆದಾರರಿಗೆ ಅಂತಿಮ ಗಡುವು ನೀಡಲಾಗಿದೆ. ಸ್ವಚ್ಛ ಬೆಂಗಳೂರು ಹಾಗೂ ಸುಗಮ ಸಂಚಾರವೇ ನಮ್ಮ ಗುರಿಯಾಗಿರುವುದರಿಂದ ಆದಷ್ಟು ಬೇಗ ರಸ್ತೆ ಗುಂಡಿಗಳಿಗೆ ಜಿಬಿಎ ಮುಕ್ತಿ ನೀಡಲಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಮ್ಮ ಎಕ್ಸ್ ಖಾತೆಯಲ್ಲಿ ತಿಳಿಸಿದ್ದಾರೆ.
ಈ ವಿಷಯಕ್ಕೆ ಸಂಬಂಧಿಸಿದಂತೆ...
ರಾಜ್ಯದಲ್ಲಿ ಜಾತಿ ಜಟಾಪಟಿ ಶುರುವಾಗಿದ್ದು, ರಾಜ್ಯಪಾಲರ ಅಂಗಳ ತಲುಪಿದೆ. ಮತಾಂತರಗೊಂಡವರ ಜಾತಿ ಉಲ್ಲೇಖ ವಿಚಾರವಾಗಿ, ವಿರೋಧ ಪಕ್ಷಗಳ ಕೆಂಗಣ್ಣಿಗೆ ರಾಜ್ಯ ಸರ್ಕಾರ ಗುರಿಯಾಗಿದೆ. ಮತ್ತೊಂದೆಡೆ ಲಿಂಗಾಯತ ಪ್ರತ್ಯೇಕ ಧರ್ಮ ವಿಚಾರವೂ ಮುನ್ನೆಲೆಗೆ ಬಂದಿದೆ. ಈ ಎಲ್ಲಾ ಬೆಳವಣಿಗೆಗಳ ಮಧ್ಯೆ, ರಾಜ್ಯದಲ್ಲಿ 1500ಕ್ಕೂ ಹೆಚ್ಚು ಜಾತಿ, ಉಪ ಜಾತಿಗಳು ಇರುವುದು ಬಹಿರಂಗವಾಗಿದೆ. ರಾಜ್ಯ ಸರ್ಕಾರ ಬಿಡುಗಡೆ...
Political News: "ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡೋರು ಸನಾತನ ಧರ್ಮದ ಮಹಿಳೆಯೇ ಆಗಿರಬೇಕು, ಸಾಮಾನ್ಯ ದಲಿತ ಮಹಿಳೆಗೂ ಹಾಕಲಿಕ್ಕೆ ಅಧಿಕಾರ ಇಲ್ಲ" ಎಂದು ಬಿಜೆಪಿ ಉಚ್ಛಾಟಿತ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.
ಈ ಹೇಳಿಕೆಗೆ ಸಚಿವ ಪ್ರಿಯಾಂಕ್ ಖರ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಮನುವಾದದ ಅಣಿಮುತ್ತುಗಳು ಯತ್ನಾಳರ ಬಾಯಿಯಿಂದ ಉದುರಿವೆ, ಇದು ಯತ್ನಾಳರ ಮಾತುಗಳಷ್ಟೇ ಅಲ್ಲ RSS...
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಕಳೆದ ವರ್ಷದಿಂದ ಅಕ್ರಮ ಸೈಟ್ ಹಂಚಿಕೆ ಪ್ರಕರಣದ ಆರೋಪಗಳಿಂದ ಸುದ್ದಿಯಲ್ಲೇ ಸಿಲುಕಿಕೊಂಡಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ತನಿಖೆಯನ್ನು ತೀವ್ರಗೊಳಿಸಿದ್ದು, ಮುಡಾದ ಮಾಜಿ ಆಯುಕ್ತ ಜಿ.ಟಿ. ದಿನೇಶ್ ಕುಮಾರ್ ಅವರನ್ನು ವಶಕ್ಕೆ ಪಡೆದುಕೊಂಡಿದೆ. ಸೆಪ್ಟೆಂಬರ್ 16 ರಂದು ಬೆಂಗಳೂರಿನ ಶಾಂತಿನಗರದಲ್ಲಿರುವ ಇಡಿ ಕಚೇರಿಗೆ ವಿಚಾರಣೆಗೆ ಹಾಜರಾದ ದಿನೇಶ್ ಅವರನ್ನು...
ಸಿಎಂ ಸಿದ್ದರಾಮಯ್ಯ ಅವರು, ಕಲ್ಯಾಣ ಕರ್ನಾಟಕಕ್ಕೆ ಭರ್ಜರಿ ಗಿಫ್ಟ್ ನೀಡಿದ್ದಾರೆ. ಕಲಬುರಗಿಯಲ್ಲಿ ನಡೆದ ಕಲ್ಯಾಣ ಕರ್ನಾಟಕ ಉತ್ಸವದಲ್ಲಿ ಅವರು ಭಾಗಿಯಾಗಿದ್ದಾರೆ. ಈ ವೇಳೆ ಮಾತನಾಡಿದ ಅವರು, ನೀರಾವರಿ ಯೋಜನೆಗಳಿಗೆ 7,000 ಕೋಟಿ ರೂ. ಅನುದಾನ ನೀಡಲಾಗುವುದು ಎಂದು ಘೋಷಿಸಿದರು.
ಹೈದರಾಬಾದ್-ಕರ್ನಾಟಕವನ್ನು ನಿಜಾಮನ ಆಳ್ವಿಕೆಯಿಂದ ವಿಮುಕ್ತಗೊಳಿಸಲು ಹೋರಾಡಿದ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗಗಳನ್ನು ಸಿಎಂ ಸಿದ್ದರಾಮಯ್ಯ ನೆನಪಿಸಿಕೊಂಡರು. ರಾಜ್ಯದಲ್ಲಿ...
ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಒಂದಿಲ್ಲೊಂದು ವಿವಾದಗಳಿಂದ ಸದಾ ಸುದ್ದಿಯಲ್ಲಿ ಇರ್ತಾರೆ. ಸದ್ಯ, ಯತ್ನಾಳ್ ವಿರುದ್ಧ 72ನೇ ಎಫ್ಐಆರ್ ದಾಖಲಾಗಿದ್ದು, ದಲಿತ ಮಹಿಳೆಗೆ ಅವಮಾನ ಆರೋಪ ಎದುರಿಸುತ್ತಿದ್ದಾರೆ. ದಲಿತ ಮಹಿಳೆಯರ ಬಗ್ಗೆ ಅವಹೇಳನಕಾರಿ ಮಾತನಾಡಿದ್ದಾರೆಂದು, ಕೊಪ್ಪಳ ನಗರದ ದಲಿತ ಸಂಘಟನೆಯ ಯುವ ಮುಖಂಡ, ಮಲ್ಲಿಕಾರ್ಜುನ್ ಪೂಜಾರ ದೂರು ದಾಖಲಿಸಿದ್ದಾರೆ. ಯತ್ನಾಳ್ ವಿರುದ್ಧ ಕಾನೂನು...
ಜಾತಿಗಣತಿ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ವ್ಯಾಪಕ ಟೀಕೆಗಳು ವ್ಯಕ್ತವಾಗ್ತಿವೆ. ಇದು ಕಾಂಗ್ರೆಸ್ ವಿರುದ್ಧ ಹೋರಾಡುತ್ತಿರುವ ಬಿಜೆಪಿಗರಿಗೆ ಮತ್ತೊಂದು ಅಸ್ತ್ರ ಕೊಟ್ಟಂತಾಗಿದೆ. ಇದೇ ವಿಚಾರವಾಗಿ ಸಂಸದ ಡಾ. ಕೆ. ಸುಧಾಕರ್ ಗುಡುಗಿದ್ದು, ದೇಶವನ್ನು ಇಷ್ಟು ವರ್ಷ ಒಡೆದಿದ್ದು ಸಾಕಾಗಲಿಲ್ವಾ? ಈಗ ಕರ್ನಾಟಕದಲ್ಲಿ ಜಾತಿ, ಉಪಜಾತಿಗಳನ್ನು ಕಾಂಗ್ರೆಸ್ ಒಡೆಯುತ್ತಿದೆ ಅಂತಾ ಗಂಭೀರ ಆರೋಪ ಮಾಡಿದ್ದಾರೆ.
ಚಿಕ್ಕಬಳ್ಳಾಪುರ...
ತುಮಕೂರು ಜಿಲ್ಲಾ ಬಿಜೆಪಿಯಲ್ಲಿ, ಬಣ ರಾಜಕೀಯ ತೀವ್ರ ಸ್ವರೂಪ ಪಡೆದುಕೊಳ್ತಿದೆ. ನಾಯಕರ ನಡುವೆ, ಒಬ್ಬರ ಮುಖವನ್ನು ಮತ್ತೊಬ್ಬರು ನೋಡಿಕೊಳ್ಳದಷ್ಟು, ಕಂದಕ ಸೃಷ್ಟಿಯಾಗಿದೆ. ನಾಯಕರ ನಡುವಿನ ಪ್ರತಿಷ್ಠೆಯಿಂದಾಗಿ ಕಾರ್ಯಕರ್ತರು ಹತಾಶರಾಗಿದ್ದು, ಯಾವ ಗುಂಪಿನಲ್ಲಿ ಗುರುತಿಸಿಕೊಳ್ಳಬೇಕೆಂಬ, ಗೊಂದಲಕ್ಕೆ ಸಿಲುಕಿದ್ದಾರೆ. ಒಂದು ಗುಂಪಿನಲ್ಲಿ ಗುರುತಿಸಿಕೊಂಡ್ರೆ, ಮತ್ತೊಬ್ಬರಿಗೆ ಸಿಟ್ಟು ಬರುತ್ತದೆ. ಇದೇ ರೀತಿ ಗೊಂದಲದ ಪರಿಸ್ಥಿತಿ ಮುಂದುವರೆದ್ರೆ, ಮುಂದಿನ ದಿನಗಳಲ್ಲಿ...
ಮುಂಬರುವ ಬಿಹಾರ ವಿಧಾನಸಭೆ ಚುನಾವಣೆಯಲ್ಲಿ AIMIM ಪಕ್ಷ ಇಂಡಿಯಾ ಮೈತ್ರಿಕೂಟಕ್ಕೆ ಬೆಂಬಲ ನೀಡೋಕೆ ಸಿದ್ಧವಿದೆ. ಹೀಗಂತ ಪಕ್ಷದ ಮುಖ್ಯಸ್ಥ ಮತ್ತು ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ತಿಳಿಸಿದ್ದಾರೆ. ಆದರೆ, ಪಕ್ಷಕ್ಕೆ ಕನಿಷ್ಠ 6 ಸ್ಥಾನಗಳನ್ನು ಬಿಟ್ಟುಕೊಡಬೇಕು ಎಂಬ ಶರತ್ತನ್ನು ಅವರು ಮುಂದಿಟ್ಟಿದ್ದಾರೆ.
ನಾವು ಇಂಡಿಯಾ ಮೈತ್ರಿಕೂಟ ಸೇರಲು ಸಿದ್ಧವಿದ್ದೇವೆ. ಬಿಹಾರದಲ್ಲಿ ಸ್ಪರ್ಧಿಸಲು ನಮಗೆ 6 ಕ್ಷೇತ್ರಗಳನ್ನು...
Hubli News: ಹುಬ್ಬಳ್ಳಿ: ಪ್ರಧಾನಿ ಮೋದಿ ಅವರಿಗೆ 75 ನೇ ಜನ್ಮದಿನದ ಶುಭಾಶಯಗಳು. ಅವರ ನಾಯಕತ್ವದಲ್ಲಿ ದೇಶದಲ್ಲಿ ದೊಡ್ಡ ಮಟ್ಟದ ಅಭಿವೃದ್ದಿಯಾಗುತ್ತಿದೆ. ಇನ್ನು ದೇಶ ಅಭಿವೃದ್ಧಿ ಮೋದಿ ಅವರು ಅಧಿಕಾರಕ್ಕೆ ಬಂದಮೇಲೆ ಚಲ್ತಾ ಹೈ ಅಟಿಟ್ಯೂಡ್ ಗೆ ಅವಕಾಶ ಇಲ್ಲಾ ಎಂದು ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದರು.
ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ...
ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಮೂರು ದಿನಗಳ ಕಾಲ ನಡೆದ ‘ನಮ್ಮೂರ ಐಪಿಎಲ್’ ಸೀಸನ್–2 ಕ್ರಿಕೆಟ್ ಲೀಗ್ ಭರ್ಜರಿ ಯಶಸ್ಸಿನೊಂದಿಗೆ ಅಂತ್ಯಗೊಂಡಿತು. ರಾಜರಾಜೇಶ್ವರಿ ನಗರ ಕ್ರೀಡೆ ಮತ್ತು...