ಬಳ್ಳಾರಿಯಲ್ಲಿ ಇತ್ತೀಚೆಗೆ ನಡೆದ ಬ್ಯಾನರ್ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿದ್ದ 26 ಆರೋಪಿಗಳ ಪೈಕಿ 25 ಮಂದಿಗೆ ಜಾಮೀನು ಮಂಜೂರಾಗಿದೆ. ಪ್ರಕರಣದ ಪ್ರಮುಖ ಆರೋಪಿ, ಖಾಸಗಿ ಅಂಗರಕ್ಷಕ ಗುರುಚರಣ್ ಸಿಂಗ್ಗೆ ಮಾತ್ರ ನ್ಯಾಯಾಲಯ ಜಾಮೀನು ನಿರಾಕರಿಸಿದೆ. ಬೆಂಗಳೂರು ನಗರದ 42ನೇ ಹೆಚ್ಚುವರಿ ವಿಶೇಷ ನ್ಯಾಯಾಲಯವು ಬಂಧಿತ ಎರಡೂ ಗುಂಪಿನ ಆರೋಪಿಗಳಿಗೆ ಶುಕ್ರವಾರ ಜಾಮೀನು ನೀಡುವಂತೆ...
ರಾಜ್ಯದ ಮೂಲೆಮೂಲೆಯಲ್ಲಿರುವ ಸ್ತ್ರೀಶಕ್ತಿ ಗುಂಪುಗಳು ಹಾಗೂ ಮಹಿಳೆಯರು ತಯಾರಿಸುವ ಉತ್ಪನ್ನಗಳಿಗೆ ಮಾರುಕಟ್ಟೆ ಒದಗಿಸುವ ಉದ್ದೇಶದಿಂದ ರೂಪಿಸಲಾದ ‘ಗೃಹಲಕ್ಷ್ಮಿ ಡಿಜಿಟಲ್ ಮಾರ್ಕೆಟಿಂಗ್ ಆ್ಯಪ್’ ಅನ್ನು ಇಂದು ಅಧಿಕೃತವಾಗಿ ಲೋಕಾರ್ಪಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಗ್ರಾಮೀಣ ಮಹಿಳೆಯರು ತಯಾರಿಸುವ ವಸ್ತುಗಳು ಕೂಡ ಆನ್ಲೈನ್ ಮೂಲಕ ಗ್ರಾಹಕರಿಗೆ ಲಭ್ಯವಾಗಬೇಕೆಂಬ...
Mandya News: ಮಂಡ್ಯ: ಸಕ್ಕರೆನಾಡು ಮಂಡ್ಯದಲ್ಲಿ ಬ್ಲೇಡ್ ಫೈನಾನ್ಸ್ ಕಂಪನಿ ಜನರಿಗೆ ಕೋಟಿ ಕೋಟಿ ನಾಮ ಹಾಕಿದೆ. ಸಮಗ್ರ ಅಭಿವೃದ್ಧಿ ಮೈಕ್ರೋ ಫೈನಾನ್ಸ್ ಕಂಪನಿ ಹೆಸರಲ್ಲಿ ಮಂಡ್ಯದ ನಾಗಮಂಗಲ ತಾಲೂಕಿನ ಜನರಿಗೆ ಕೋಟಿ ಕೋಟಿ ರೂಪಾಯಿ ಉಂಡೇ ನಾಮ ಹಾಕಲಾಗಿದೆ.
ಇಲ್ಲಿನ ಪಿಗ್ಮಿ ಕಂಪನಿಯ``ಂದು ತಾಲೂಕಿನ ಸಾವಿರಾರು ಜನರ ಬಳಿ ಕೋಟಿ ಕೋಟಿ ಹಣ ಸಂಗ್ರಹ...
ಖಾಸಗಿ ಕ್ಷಣಗಳ ಬಯಕೆ ಈಡೇರಿಸಿಕೊಳ್ಳಲು ಹಾಗೂ ಸುಂದರಿಯರ ಜತೆ ಹರಟೆ ಹೊಡೆಯಲು ಡೇಟಿಂಗ್ ಆ್ಯಪ್ಗಳು ಮತ್ತು ಸಾಮಾಜಿಕ ಜಾಲತಾಣಗಳ ಮೊರೆ ಹೋಗುವ ಮುನ್ನ ಎಚ್ಚರ ಅಗತ್ಯವಾಗಿದೆ. ಏಕೆಂದರೆ, ಅಪರಿಚಿತ ಯುವತಿಯರ ಹೆಸರಿನಲ್ಲಿ ಸೈಬರ್ ವಂಚಕರು ಖಾಸಗಿ ದೃಶ್ಯಗಳನ್ನು ಪಡೆದು ಬ್ಲ್ಯಾಕ್ಮೇಲ್ ಮಾಡುವ ಪ್ರಕರಣಗಳು ಹೆಚ್ಚಾಗುತ್ತಿವೆ.
ಡೇಟಿಂಗ್ ಆ್ಯಪ್ಗಳು ಹಾಗೂ ಸಾಮಾಜಿಕ ಜಾಲತಾಣಗಳ ಮೂಲಕ ಪರಿಚಯವಾದ ಅಪರಿಚಿತ...
ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ಅನಧಿಕೃತ ಬಡಾವಣೆಗಳಲ್ಲಿನ ‘ಬಿ-ಖಾತಾ’ ನಿವೇಶನ, ಕಟ್ಟಡ, ಅಪಾರ್ಟ್ಮೆಂಟ್ ಹಾಗೂ ಫ್ಲಾಟ್ಗಳಿಗೆ ‘ಎ-ಖಾತಾ’ ನೀಡಲು ರಾಜ್ಯ ಸಚಿವ ಸಂಪುಟ ಮಹತ್ವದ ತೀರ್ಮಾನ ಕೈಗೊಂಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರಕ್ಕೆ ಅನುಮೋದನೆ ದೊರೆತಿದೆ.
ಅದರಂತೆ ಎಲ್ಲ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ...
ರಾಷ್ಟ್ರ ಮಟ್ಟದಲ್ಲಿ BJP ಯೊಂದಿಗೆ ಮೈತ್ರಿ ಮಾಡಿಕೊಳ್ಳುವ ನಿರ್ಧಾರವನ್ನು ವಿರೋಧಿಸಿ, JDS ಪಕ್ಷದ ಕೇರಳ ಘಟಕವು, ಹೊಸದಾಗಿ ಸ್ಥಾಪನೆ ಆಗಿರುವ ಭಾರತೀಯ ಸಮಾಜವಾದಿ ಜನತಾದಳದೊಂದಿಗೆ ವಿಲೀನಗೊಳ್ಳಲು ನಿರ್ಧರಿಸಿದೆ. ಆಡಳಿತಾರೂಢ LDF ಮೈತ್ರಿಯ ಭಾಗವಾಗಿರುವ JDS , ISJDಯೊಂದಿಗೆ ವಿಲೀನಗೊಳ್ಳುತ್ತಿರುವ ಕುರಿತು ಇಂಧನ ಸಚಿವ ಕೆ. ಕೃಷ್ಣನ್ ಕುಟ್ಟಿ ಸೇರಿದಂತೆ ಪಕ್ಷದ ಇಬ್ಬರು ಶಾಸಕರು ವಿಧಾನಸಭಾ...
ರಾಜ್ಯ ಸರ್ಕಾರದ ದುರಾಡಳಿತವನ್ನು ಜನರ ಗಮನಕ್ಕೆ ತಂದು, ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸುವತ್ತ ಬಿಜೆಪಿ ವಿಶೇಷ ಗಮನ ಹರಿಸಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.
ಬುಧವಾರ ಬಿಜೆಪಿ ರಾಜ್ಯ ಕಚೇರಿಯಲ್ಲಿ ಮಾತನಾಡಿದ ಅವರು,
ಸಂಘಟನೆ ಬಲಪಡಿಸುವ ಉದ್ದೇಶದಿಂದ ರಾಜ್ಯಾಧ್ಯಕ್ಷರು ಸೇರಿದಂತೆ ಪಕ್ಷದ ಎಲ್ಲಾ ಪ್ರಮುಖರು ಒಟ್ಟಾಗಿ ಪ್ರತಿ ಜಿಲ್ಲೆಗಳ ಪ್ರಮುಖ...
Tumakuru News: ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ಕಸಬಾ ಹೋಬಳಿಯಲ್ಲಿ ಅಪ್ರಾಪ್ತ ಬಾಲಕಿಯೊಬ್ಬಳು ಡೆತ್ ನೋಟ್ ಬರೆದು ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಂಗಳವಾರ ಬೆಳಕಿಗೆ ಬಂದಿದೆ. ತೀವ್ರ ಅಸ್ವಸ್ಥಗೊಂಡ ಬಾಲಕಿಯನ್ನು ಮೊದಲು ಚಿಕ್ಕನಾಯಕನಹಳ್ಳಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಬಳಿಕ ಹೆಚ್ಚಿನ ಚಿಕಿತ್ಸೆಗೆ ತುಮಕೂರು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.
ಬಾಲಕಿ ಬರೆದ ಡೆತ್ ನೋಟ್ನಲ್ಲಿ ತನ್ನ...
ಉದ್ಯಮಿಯ ಜತೆಯಲ್ಲೇ ಕೆಲಸ ಮಾಡುತ್ತಿದ್ದ ಕಾರು ಚಾಲಕನೇ ಸ್ನೇಹಿತರ ಸಹಾಯದಿಂದ ವಿಲ್ಲಾದಲ್ಲಿ ಭಾರಿ ಆಭರಣ ಕಳ್ಳತನ ಮಾಡಿಸಿರುವ ಪ್ರಕರಣವನ್ನು ವಿದ್ಯಾರಣ್ಯಪುರ ಠಾಣೆ ಪೊಲೀಸರು ಭೇದಿಸಿದ್ದಾರೆ. ಈ ಸಂಬಂಧ ಕಾರು ಚಾಲಕ ಸೇರಿದಂತೆ ನಾಲ್ವರನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಗಳನ್ನು ದೊಡ್ಡಬಳ್ಳಾಪುರದ ಚಂದನ್ (27), ಮಂಜುನಾಥ್ (36), ಎನ್. ನರೇಂದ್ರ (28) ಹಾಗೂ ಬಿಹಾರ ಮೂಲದ ಮಂಜಿತ್...
ಗ್ರಾಮೀಣ ಭಾಗಗಳ ಸಾರಿಗೆ ಸಂಪರ್ಕವನ್ನು ಬಲಪಡಿಸುವ ಉದ್ದೇಶದಿಂದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ 644 ಹೊಸ BS–6 ಡೀಸೆಲ್ ಚಾಲಿತ ಬಸ್ಗಳನ್ನು ಪರಿಚಯಿಸಲು ಮುಂದಾಗಿದೆ. ಸೀಮಿತ ಸಾರಿಗೆ ವ್ಯವಸ್ಥೆ ಹೊಂದಿರುವ ಗ್ರಾಮೀಣ ಪ್ರದೇಶಗಳಿಗೆ ಹೆಚ್ಚಿನ ಸಂಪರ್ಕ ಒದಗಿಸುವುದು ಈ ಯೋಜನೆಯ ಪ್ರಮುಖ ಗುರಿಯಾಗಿದೆ. ಕಳೆದ ಕೆಲ ವರ್ಷಗಳಿಂದ ಕೆಎಸ್ಆರ್ಟಿಸಿಯಲ್ಲಿ ಹೊಸ ಬಸ್ಗಳ ಸೇರ್ಪಡೆ...
ಹಾಸನ ಮಹಾನಗರಪಾಲಿಕೆಯ ಎಂಜಿನಿಯರ್ ಸತ್ಯನಾರಾಯಣ ಅವರ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ಗುರುವಾರ ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ.
ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಹಾಸನದ ರವೀಂದ್ರ...