ರಾಜ್ಯದಲ್ಲಿ ಹೊಸ ಪಡಿತರ ಚೀಟಿ ನಿರೀಕ್ಷೆಯಲ್ಲಿರುವವರಿಗೆ ರಾಜ್ಯ ಸರ್ಕಾರದಿಂದ ಸಿಹಿ ಸುದ್ದಿ ಸಿಕ್ಕಿದೆ. ಅನಧಿಕೃತ ಪಡಿತರ ಚೀಟಿದಾರರನ್ನು ಪತ್ತೆ ಹಚ್ಚಿಬೇಕು. ಅರ್ಹ ಕುಟುಂಬಗಳಿಗೆ ಶೀಘ್ರದಲ್ಲೇ ಹೊಸ ಪಡಿತರ ಚೀಟಿಗಳನ್ನು ವಿತರಿಸಲು ಸರ್ಕಾರ ಕ್ರಮ ಕೈಗೊಂಡಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್. ಮುನಿಯಪ್ಪ ತಿಳಿಸಿದ್ದಾರೆ.
ದಾವಣಗೆರೆಯಲ್ಲಿ ಜಿಲ್ಲಾಮಟ್ಟದ ಆಹಾರ ಇಲಾಖೆಯ ಅಧಿಕಾರಿಗಳೊಂದಿಗೆ ಪ್ರಗತಿ...
Hubli News: ಹುಬ್ಬಳ್ಳಿ: ಸಾಣೇಹಳ್ಳಿ ಶ್ರೀಗಳು ರಾಜ್ಯದಲ್ಲಿ ಜನ, ಜಾತಿ ಗಣತಿ ವಿಷಯ ಆರಂಭವಾದಾಗಿನಿಂದ ವೀರಶೈವ ಲಿಂಗಾಯತರಲ್ಲಿ ಗೊಂದಲವನ್ನುಂಟು ಮಾಡುತ್ತಿದ್ದಾರೆ. ಅವರು ತಮ್ಮ ಹಿರಿಯ ಶ್ರೀಗಳ ಮಾರ್ಗದರ್ಶನದಲ್ಲಿ ನಡೆಯಬೇಕಿತ್ತು. ಆದರೆ ನಿವೃತ್ತ ಐಎಎಸ್ ಅಧಿಕಾರಿಯ ಮಾರ್ಗದರ್ಶನದಲ್ಲಿ ನಡೆಯುತ್ತಿರುವುದು ದುರದೃಷ್ಟಕರ ಎಂದು ಶಿರಹಟ್ಟಿಯ ಫಕ್ಕೀರೇಶ್ವರ ಪೀಠದ ಶ್ರೀ ಫಕ್ಕೀರ ದಿಂಗಾಲೇಶ್ವರ ಸ್ವಾಮೀಜಿ ಟೀಕಿಸಿದರು.
ಶನಿವಾರ ಸುದ್ದಿಗೋಷ್ಠಿಯಲ್ಲಿ ಈ...
ಹಾಸನಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಬೈರೇಗೌಡ ಭೇಟಿ ಕೊಟ್ಟಿದ್ದಾರೆ. ಸಿಎಂ ಸಿದ್ದರಾಮಯ್ಯ ಸೂಚನೆ ಬೆನ್ನಲ್ಲೇ ನಗರಕ್ಕೆ ದೌಡಾಯಿಸಿದ್ದು, ಘಟನೆ ಸಂಬಂಧ ಸಂಪೂರ್ಣ ಮಾಹಿತಿ ಪಡೆದಿದ್ದಾರೆ. ಹಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವರನ್ನ ಭೇಟಿಯಾಗಿ, ಆರೋಗ್ಯ ವಿಚಾರಿಸಿದ್ರು. ಚಿಕಿತ್ಸಾ ವೆಚ್ಚವನ್ನ ಸಂಪೂರ್ಣವಾಗಿ ಸರ್ಕಾರವೇ ಭರಿಸಲಿದೆ ಅಂತಾ ಭರವಸೆ ನೀಡಿದ್ದಾರೆ.
ಇನ್ನು, ಶಾಂತಿಗ್ರಾಮದ ಸರ್ಕಾರಿ ಶಾಲೆಯಲ್ಲಿ, ಸಂಸದ ಶ್ರೇಯಸ್ ಪಟೇಲ್,...
ಬಿಜೆಪಿ ಪಕ್ಷದಿಂದ ಉಚ್ಚಾಟನೆ ಬಳಿಕ, ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಖತ್ ಆಕ್ಟೀವ್ ಆಗಿದ್ದಾರೆ. ಇಷ್ಟು ದಿನ ಉತ್ತರ ಕರ್ನಾಟಕಕ್ಕೆ ಸೀಮಿತವಾಗಿದ್ದ ಪ್ರವಾಸ, ಮದ್ದೂರು ಘಟನೆ ಬಳಿಕ ದಕ್ಷಿಣ ಕರ್ನಾಟಕಕ್ಕೂ ವಿಸ್ತರಿಸಿದೆ. ಹಿಂದೂ ಫೈರ್ ಬ್ರ್ಯಾಂಡ್ ಎಂದೇ ಹೆಸರುವಾಸಿಯಾಗಿರುವ ಯತ್ನಾಳ್, ಹಿಂದೂ ಸಂಘಟನೆಗಳು ಕರೆದಲ್ಲೆಲ್ಲಾ ಹಾಜರ್ ಆಗ್ತಿದ್ದಾರೆ.
ಆಗಸ್ಟ್ 27ರ ಬಳಿಕ ಕರ್ನಾಟಕ ರಾಜ್ಯದ...
ಶಿಕ್ಷಕಿಯ ಮೇಲೆ ಪೋಷಕರೊಬ್ಬರು ಥಳಿಸಿರುವ ಘಟನೆ, ಕೋಲಾರ ಜಿಲ್ಲೆ ಮಾಲೂರು ತಾಲೂಕಿನ ಕ್ಷೇತ್ರನಹಳ್ಳಿ ಗ್ರಾಮದಲ್ಲಿ ನಡೆದಿದೆ. ಘಟನೆ ಸಂಬಂಧ ಮಾಸ್ತಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಶಿಕ್ಷಕಿ ಮಂಜುಳಾ ಬಂಗಾರಪೇಟೆ ತಾಲೂಕಿನ ಪಲವತಿಮ್ಮನಹಳ್ಳಿ ಗ್ರಾಮದ ನಿವಾಸಿ. ಕ್ಷೇತ್ರನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕೆಲಸ ಮಾಡ್ತಿದ್ರು.
ಸೆಪ್ಟೆಂಬರ್ 11ರಂದು ಎಂದಿನಂತೆ, 6ನೇ ತರಗತಿ ಕೊಠಡಿಗೆ ಮಂಜುಳಾ...
ವಿಕೇಂಡ್ನಲ್ಲಿ ಸಿಲಿಕಾನ್ ಸಿಟಿ ಜನತೆಗೆ ಡಬಲ್ ಶಾಕ್ ಎದುರಾಗಲಿದೆ. ಕಾವೇರಿ ನೀರಿನ ಸರಬರಾಜು ಸ್ಥಗಿತ ಮತ್ತು ವಿದ್ಯುತ್ ವ್ಯತ್ಯಯದಿಂದ ನಾಗರಿಕರು ತೊಂದರೆ ಅನುಭವಿಸಬೇಕಿದೆ. ಬೆಸ್ಕಾಂ ಮತ್ತು ಕರ್ನಾಟಕ ಕೆಪಿಟಿಸಿಎಲ್ ತುರ್ತು ನಿರ್ವಹಣಾ ಕಾಮಗಾರಿಯ ಕಾರಣವಾಗಿ ಸೆಪ್ಟೆಂಬರ್ 13 ಮತ್ತು 14ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಪೂರೈಕೆ ಸ್ಥಗಿತಗೊಳ್ಳಲಿದೆ.
220/66/11 ಕೆವಿ...
ವಿಶ್ವ ಪ್ರಸಿದ್ಧ ಮೈಸೂರು ದಸರಾ ಹಬ್ಬಕ್ಕೆ ದಿನಗಣನೆ ಆರಂಭವಾಗಿದೆ. ಈ ಸಂದರ್ಭದಲ್ಲಿ ಮೈಸೂರು ರಾಜಮನೆತನದವರಿಂದ ಅರಮನೆಯಲ್ಲಿ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಮತ್ತು ಪ್ರವಾಸಿಗರಿಗೆ ಕೆಲವು ದಿನಗಳಲ್ಲಿ ಪ್ರವೇಶ ನಿರ್ಬಂಧಿಸಲಾಗಿದೆ.
ಸೆಪ್ಟೆಂಬರ್ 16ರಂದು ಸಿಂಹಾಸನ ಜೋಡಣೆ ಪ್ರಯುಕ್ತ ಬೆಳಿಗ್ಗೆ 10ರಿಂದ ಸಂಜೆ 6ರವರೆಗೆ ಪ್ರವೇಶ ಇರುವುದಿಲ್ಲ. ಸೆಪ್ಟೆಂಬರ್ 22ರಂದು ಖಾಸಗಿ ದರ್ಬಾರ್ ಪೂಜಾ...
ಹಾಸನದಲ್ಲಿ ನಡೆದಿರುವ ಭೀಕರ ದುರಂತ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ. ಟ್ರಕ್ ಡಿಕ್ಕಿಯಿಂದ 9 ಮಂದಿ ಪ್ರಾಣ ಬಿಟ್ಟಿದ್ದಾರೆ. ಈ ದುರಂತಕ್ಕೆ ಕಾರಣನಾದ ಚಾಲಕ ಭುವನೇಶ್ ಕಂಡಾಗ ಜನರ ರಕ್ತ ಕುದ್ದು, ಭಾರೀ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳೀಯರು ಚಾಲಕನನ್ನು ಹಿಡಿದು ಹಿಗ್ಗಾ ಮುಗ್ಗಾ ಥಳಿಸಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಪ್ರತ್ಯಕ್ಷದರ್ಶಿಗಳ ಪ್ರಕಾರ ಅಪಘಾತದ ಸಮಯದಲ್ಲಿ...
ಹಾಸನದಲ್ಲಿ 9 ಅಮಾಯಕ ಜೀವಗಳ ಸಾವಿಗೆ ಕಾರಣನಾದ ಟ್ರಕ್ ಚಾಲಕ ಭುವನೇಶ್, ಸದ್ಯ ಎಲ್ಲಿದ್ದಾನೋ ಗೊತ್ತಿಲ್ಲ. ಪೊಲೀಸರು ಈ ಬಗ್ಗೆ ಸುಳಿವು ಬಿಟ್ಟು ಕೊಡ್ತಿಲ್ಲ. ಸೆಪ್ಟೆಂಬರ್ 12ರಂದು ಮೊಸಳೆ ಹೊಸಹಳ್ಳಿ ಬಳಿ, ಗಣೇಶ ಮೆರವಣಿಗೆ ವಿಸರ್ಜನಾ ಮೆರವಣಿಗೆ ಮೇಲೆ ಭುವನೇಶ್ ಟ್ರಕ್ ಹರಿಸಿದ್ದ. ಸದ್ಯ ಹಾಸನ, ಹೊಳೆನರಸೀಪುರ ನಗರ ವ್ಯಾಪ್ತಿಯಲ್ಲಿ, ಪರಿಸ್ಥಿತಿ ಬೂದಿ ಮುಚ್ಚಿದ...
ಹಾಸನ ಜಿಲ್ಲೆಯಲ್ಲಿ ನಡೆದ ಭೀಕರ ದುರಂತದ ಘಟನೆಯೂ ಯಾರು ಮರೆಯಲು ಸಾಧ್ಯವಾಗುತ್ತಿಲ್ಲ. 9 ಮಂದಿ ಬಲಿಯಾಗಿರುವ ಕರಾಳ ದೃಶ್ಯದ ಮಧ್ಯೆ ಬೆಂಗಳೂರಲ್ಲೂ ಜವರಾಯ ಅಟ್ಟಹಾಸ ಮೆರೆದಿದ್ದಾನೆ. ಬೆಳ್ಳಂಬೆಳಗ್ಗೆ ನಡೆದ ಅಪಘಾತದಲ್ಲಿ, ಮೂವರು ಪ್ರಾಣ ಕಳೆದುಕೊಂಡಿದ್ದಾರೆ. ಕಾಮಾಕ್ಷಿಪಾಳ್ಯ ಮುಖ್ಯ ರಸ್ತೆಯಲ್ಲಿ ಈ ದುರ್ಘಟನೆ ಸಂಭವಿಸಿದೆ.
ನಾಗರಬಾವಿ ಕಡೆಯಿಂದ ಬರುತ್ತಿದ್ದ ಲಾರಿ, ಸುಮ್ಮನಹಳ್ಳಿ ರಸ್ತೆ ಬಳಿ ನಿಯಂತ್ರಣ ತಪ್ಪಿದ್ದು,...
ತುಮಕೂರು ನಗರದಲ್ಲಿ ಮೇ 10ರಂದು ವಿದ್ಯುತ್ ಸರಬರಾಜಿನಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಪ್ರಕಟಿಸಿದೆ. ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ...