Wednesday, June 24, 2026

ರಾಜ್ಯ

Hubli News: ಶಾಲಾ ವಾಹನಗಳ ತಪಾಸಣೆ; ಮಕ್ಕಳ ಸುರಕ್ಷತೆಗೆ ಟ್ರಾಫಿಕ್ ಪೊಲೀಸರ ಒತ್ತು

Hubli News: ಶಾಲಾ ಮಕ್ಕಳ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಿರುವ ಹುಬ್ಬಳ್ಳಿ ಟ್ರಾಫಿಕ್ ಪೊಲೀಸರು, ಶಾಲಾ ವಾಹನಗಳ ಚಾಲಕರ ತಪಾಸಣೆ ನಡೆಸಿದ್ದಾರೆ. ಖಾಸಗಿ ಶಾಲೆಗಳಿಗೆ ಮಕ್ಕಳನ್ನು ಕರೆದೊಯ್ಯುವ ಆಟೋ, ವ್ಯಾನ್ ಹಾಗೂ ಬಸ್‌ಗಳ ದಾಖಲೆಗಳನ್ನು ಪರಿಶೀಲಿಸಿ ಸುರಕ್ಷಿತ ಸಂಚಾರಕ್ಕೆ ಒತ್ತು ನೀಡಿದ್ದಾರೆ. ಹುಬ್ಬಳ್ಳಿಯ ಉತ್ತರ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶಾಲಾ ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ...

Hubli Crime News: ಗೋಕುಲಧಾಮ ಖಾಲಿ ಜಾಗದಲ್ಲಿ ಶವ ಪತ್ತೆ; ಕೊ*ಲೆ ಶಂಕೆ

Hubli Crime News: ಹುಬ್ಬಳ್ಳಿಯಲ್ಲಿ ಕಸ ಕಂಟಿಗಳಿಂದ ಆವರಿಸಿಕೊಂಡಿದ್ದ ಖಾಲಿ ಜಾಗದಲ್ಲಿ ವ್ಯಕ್ತಿಯ ಶವ ಪತ್ತೆಯಾಗಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ. ಈ ಘಟನೆ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಗೋಕುಲಧಾಮ ಪ್ರದೇಶದ ಖಾಲಿ ಜಾಗದಲ್ಲಿ ಇಂದು ಬೆಳಗ್ಗೆ ಸ್ಥಳೀಯರು ಶವವನ್ನು ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ಪಡೆದ ಹಳೇ ಹುಬ್ಬಳ್ಳಿ ಪೊಲೀಸರು ತಕ್ಷಣ...

News: ಹುಬ್ಬಳ್ಳಿ–ಚಿಕ್ಕಮಗಳೂರು ವಿಶೇಷ ಎಕ್ಸ್‌ಪ್ರೆಸ್ ರೈಲು ಸೇವೆ ಆರಂಭ

News: ಹುಬ್ಬಳ್ಳಿಯಿಂದ ಚಿಕ್ಕಮಗಳೂರಿಗೆ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಯಂತ್ರಿಸಲು ನೈಋತ್ಯ ರೈಲ್ವೆ ಇಲಾಖೆ ವಿಶೇಷ ಎಕ್ಸ್‌ಪ್ರೆಸ್ ರೈಲು ಸೇವೆಯನ್ನು ಆರಂಭಿಸಿದೆ. ರೈಲು ಸಂಖ್ಯೆ 07341 ಹುಬ್ಬಳ್ಳಿಯಿಂದ ಜೂನ್ 20 ಮತ್ತು 21 ರಂದು ಬೆಳಿಗ್ಗೆ 5 ಗಂಟೆಗೆ ಹೊರಟು ಮಧ್ಯಾಹ್ನ 11.15 ಕ್ಕೆ ಚಿಕ್ಕಮಗಳೂರಿಗೆ ತಲುಪಲಿದೆ. ಮರುಪ್ರಯಾಣದಲ್ಲಿ 07342 ರೈಲು ಚಿಕ್ಕಮಗಳೂರಿನಿಂದ ಸಂಜೆ 5.30 ಕ್ಕೆ ಹೊರಟು...

Hubli News: ಆಂಬ್ಯುಲೆನ್ಸ್ ವಿಳಂಬ; ಬಡವರ ಜೀವದ ಜೊತೆ ಚೆಲ್ಲಾಟ?

Hubli News: ಶಿರಗುಪ್ಪಿ, ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ಜನರು ಆಂಬ್ಯುಲೆನ್ಸ್ ಕೊರತೆಯಿಂದ ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ. ತುರ್ತು ಸಂದರ್ಭದಲ್ಲಿ ಸಮಯಕ್ಕೆ ಸರಿಯಾಗಿ ಆಂಬ್ಯುಲೆನ್ಸ್ ಸಿಗದ ಕಾರಣ ಬಡ ಕುಟುಂಬಗಳು ಜೀವಭಯದಲ್ಲಿ ದಿನ ಕಳೆಯುವಂತಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಶಿರಗುಪ್ಪಿ, ಮನಕವಾಡ, ಮಂಟೂರು, ಬಂಡಿವಾಡ, ನಾಗರಹಳ್ಳಿ, ಇಂಗಳಹಳ್ಳಿ, ನೆಲವಡಿ, ಉಮಚಗಿ ಸೇರಿದಂತೆ ಹತ್ತುಕ್ಕೂ ಹೆಚ್ಚು ಗ್ರಾಮಗಳ ಜನರು...

Hubli News: ಪ್ರಣವಾನಂದ ಸ್ವಾಮೀಜಿ ವಿರುದ್ಧ ಕುರುಬ ಸಮಾಜದ ಆಕ್ರೋಶ

Hubli News: ಪ್ರಣವಾನಂದ ಸ್ವಾಮೀಜಿ ಅವರು ಕುರುಬ ಸಮಾಜಕ್ಕೆ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿ ಹುಬ್ಬಳ್ಳಿಯಲ್ಲಿ ಕುರುಬ ಸಮಾಜ ಹಾಗೂ ಅಹಿಂದ ವರ್ಗದ ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು. ಸ್ವಾಮೀಜಿ ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದರು. ಪ್ರಣವಾನಂದ ಸ್ವಾಮೀಜಿ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಓಲೈಕೆ ಮಾಡುವ ಭರದಲ್ಲಿ ಕುರುಬ ಸಮಾಜ ಹಾಗೂ ಅಹಿಂದ ವರ್ಗದ...

Hubli News: ಪೇಂಟ್ ಬಕೇಟ್ ಸ್ಟಾಕ್ ಕಡಿಮೆ ಮಾಡಿ ಮೋಸ; ನಾಲ್ವರ ವಿರುದ್ಧ ದೂರು

Hubli News: ಸುಮಾರು 10 ಲಕ್ಷ ರೂಪಾಯಿ ಮೌಲ್ಯದ 153 ಪೇಂಟ್ ಬಕೇಟ್‌ಗಳ ಸ್ಟಾಕ್‌ನಲ್ಲಿ ವ್ಯತ್ಯಾಸ ಕಂಡುಬಂದ ಹಿನ್ನೆಲೆ ಬರ್ಜರ್ ಪೇಂಟ್ಸ್ ಕಂಪನಿಯ ಮ್ಯಾನೇಜರ್ ಸೇರಿದಂತೆ ನಾಲ್ವರ ವಿರುದ್ಧ ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹುಬ್ಬಳ್ಳಿ ತಾಲೂಕಿನ ಕೊಟಗೊಂಡಹುಣಸಿ ಗ್ರಾಮದ ವ್ಯಾಪ್ತಿಯ ಕುಂದಗೋಳ ಕ್ರಾಸ್ ಸಮೀಪದ ಎಟಿಸಿ ಗೋಡೌನ್ ಹಿಂಭಾಗದಲ್ಲಿರುವ ಬರ್ಜರ್ ಪೇಂಟ್ಸ್...

Hubli News: ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಕುರಿತು ಜಾಗೃತಿ

Hubli News: ರಾಜ್ಯ ಸರ್ಕಾರದ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಯೋಜನೆ ಕುರಿತು ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ವಿದ್ಯಾನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ವಿವಿಧ ಕಾಲೇಜುಗಳಲ್ಲಿ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಯೋಜನೆಯ ಸದುಪಯೋಗ ಪಡೆದುಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಲಾಯಿತು. ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಯೋಜನೆ ಕುರಿತು...

Sirsi News: ಸರ್ಕಾರಿ ಹಾಸ್ಟೆಲ್ ನಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿ, ಕಿಟಕಿಯಿಂದ ಎಸೆದ ಬಾಲಕಿ: ಶಿಶು ಸಾ*ವು

Sirsi News: ಸರ್ಕಾರಿ ಹಾಸ್ಟೆಲ್ ನಲ್ಲೇ ಹೆರಿಗೆ ಮಾಡಿಕೊಂಡು, 15 ವರ್ಷದ ಬಾಲಕಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ತೋಡದಗದ್ದೆ ಬಳಿ ನಡೆದಿದೆ. ಬಾಲಕಿ ಹಾಸ್ಟಲ್ ನ ಟಾಯ್ಲೆಟ್ ನಲ್ಲಿ ತಾನೇ ಹೆರಿಗೆ ಮಾಡಿಕೊಂಡು ಮಗುವನ್ನ ಕಿಟಿಕಿಯಿಂದ ಹೊರಗೆ ಎಸೆದಿದ್ದಾಳೆ. ಕಿಟಕಿಯಿಂದ ನವಜಾತ ಶಿಶು ಎಸೆದ ಹಿನ್ನೆಲೆ ಹೆಣ್ಣು ಶಿಶು ಸಾವನ್ನಪ್ಪಿದೆ....

Hubli News: ಗಡಿ ವಿಸ್ತರಣೆಯಲ್ಲಿ ಹುಡಾ ಸಕ್ರಿಯ, ಪಾಲಿಕೆ ನಿಷ್ಕ್ರಿಯ?

Hubli News: ಹುಬ್ಬಳ್ಳಿ-ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರ ತನ್ನ ವ್ಯಾಪ್ತಿಯನ್ನು ವಿಸ್ತರಿಸಿಕೊಂಡು ಅಭಿವೃದ್ಧಿಯ ಹೊಸ ಯೋಜನೆಗಳಿಗೆ ಮುಂದಾಗಿರುವ ವೇಳೆ, ಮಹಾನಗರ ಪಾಲಿಕೆ ಮಾತ್ರ ಗಡಿ ಗುರುತು ಮತ್ತು ವ್ಯಾಪ್ತಿ ವಿಸ್ತರಣೆ ವಿಚಾರದಲ್ಲಿ ನಿರ್ಲಕ್ಷ್ಯ ತೋರಿದೆ ಎಂಬ ಆರೋಪಗಳು ಕೇಳಿಬಂದಿವೆ. ಇದರಿಂದ ಪಾಲಿಕೆಗೆ ಬರಬೇಕಾದ ಆದಾಯಕ್ಕೂ ಹೊಡೆತ ಬೀಳುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ರಾಜ್ಯದ ಅತಿವೇಗವಾಗಿ ಬೆಳೆಯುತ್ತಿರುವ ನಗರಗಳಲ್ಲಿ...

Hubli News: ಕೃಷಿ ಜಮೀನುಗಳಿಗೆ ಹೋಗಿ ಬರುವ ಟ್ರ್ಯಾಕ್ಟರ್‌ಗಳಿಗೆ ದಂಡ ಹಾಕಬೇಡಿ; ರೈತರ ಮನವಿ

Hubli News: ಟ್ರ್ಯಾಕ್ಟರ್‌ಗಳಿಗೆ ದಂಡ ವಿಧಿಸುವ ಕ್ರಮವನ್ನು ಕೈಬಿಡುವಂತೆ ಆಗ್ರಹಿಸಿ ರೈತ ಸಂಘಟನೆಗಳ ಮುಖಂಡರು ಪ್ರಾದೇಶಿಕ ಸಾರಿಗೆ ಅಧಿಕಾರಿಗೆ ಮನವಿ ಸಲ್ಲಿಸಿದರು. ಕೃಷಿ ಚಟುವಟಿಕೆಗಳಿಗೆ ಬಳಸುವ ಟ್ರ್ಯಾಕ್ಟರ್‌ಗಳಿಗೆ ಅನಗತ್ಯ ದಂಡ ವಿಧಿಸಲಾಗುತ್ತಿದೆ ಎಂದು ರೈತರು ಆರೋಪಿಸಿದರು. ಕೃಷಿ ಜಮೀನುಗಳಿಗೆ ಹೋಗಿ ಬರುವ ಟ್ರ್ಯಾಕ್ಟರ್‌ಗಳಿಗೆ ದಂಡ ವಿಧಿಸುವ ಕ್ರಮವನ್ನು ತಕ್ಷಣ ನಿಲ್ಲಿಸುವಂತೆ ಆಗ್ರಹಿಸಿ ರೈತ ಸಂಘಟನೆಗಳ ಮುಖಂಡರು...
- Advertisement -spot_img

Latest News

Yallapura News: ಕೆ.ಎಸ್.ಈಶ್ವರಪ್ಪ ಹೇಳಿಕೆಗೆ ತಿರುಗೇಟು ನೀಡಿದ ಶಾಸಕ ಶಿವರಾಮ್ ಹೆಬ್ಬಾರ್

Yallapura News: ಯಲ್ಲಾಪುರ: ತಮ್ಮ ರಾಜಕೀಯ ಅಸ್ತಿತ್ವವನ್ನು ಉಳಿಸಿಕೊಳ್ಳಲು ಹೆಣಗಾಡುತ್ತಿರುವ, ವಿವಾದಾತ್ಮಕ ಹಾಗೂ ಬೇಜವಾಬ್ದಾರಿ ಹೇಳಿಕೆಗಳಿಂದಲೇ ಗುರುತಿಸಿಕೊಂಡಿರುವ ಕೆ.ಎಸ್. ಈಶ್ವರಪ್ಪ ಅವರು ಸಂಪೂರ್ಣ ರಾಜಕೀಯ ದಿವಾಳಿತನಕ್ಕೆ...
- Advertisement -spot_img