ಬೆಂಗಳೂರು: ವರಮಹಾಲಕ್ಷ್ಮಿ ಹಬ್ಬದ ಸಂಭ್ರಮದ ನಡುವೆ ಶಾಸಕ ಹಾಗೂ ಶ್ರೀ ಸಾಯಿ ಗೋಲ್ಡ್ ಪ್ಯಾಲೇಸ್ ವ್ಯವಸ್ಥಾಪಕ ನಿರ್ದೇಶಕ ಟಿ.ಎ. ಶರವಣ ಅವರ ನಿವಾಸದಲ್ಲಿ ಶುಕ್ರವಾರ ಭಕ್ತಿ ಹಾಗೂ ಸಂಪ್ರದಾಯದ ಸಮ್ಮಿಲನದಲ್ಲಿ ವರಮಹಾಲಕ್ಷ್ಮಿ ಪೂಜೆ ಅದ್ಧೂರಿಯಾಗಿ ನೆರವೇರಿತು.
ಸಾವಿರಾರು ಹೂವುಗಳಿಂದ ಅಲಂಕಾರಗೊಂಡ ಪೂಜಾ ಮಂಟಪ, ದೀಪಗಳ ಕಂಗೊಳ ಹಾಗೂ ಭಕ್ತಿಮಯ ವಾತಾವರಣದಲ್ಲಿ ತಾಯಿ ವರಮಹಾಲಕ್ಷ್ಮಿಗೆ ವಿಶೇಷ ಪೂಜೆ...
Hubli News: ಹುಬ್ಬಳ್ಳಿ-ಧಾರವಾಡ ಹಾಗೂ ಉತ್ತರ ಕರ್ನಾಟಕದ ಜನತೆಗೆ ಸಿಹಿ ಸುದ್ದಿ. ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ಮನವಿ ಮೇರೆಗೆ ಅಕ್ಟೋಬರ್ 1ರಿಂದ ದೆಹಲಿ–ಹುಬ್ಬಳ್ಳಿ ಹಾಗೂ ದೆಹಲಿ–ಬೆಳಗಾವಿ ನಡುವೆ ಪ್ರತಿದಿನ ನೇರ ವಿಮಾನ ಸೇವೆ ಆರಂಭವಾಗಲಿದೆ. ಪ್ರಯಾಣಿಕರ ಅನುಕೂಲ ಹಾಗೂ ಉತ್ತರ ಕರ್ನಾಟಕದ ಜನರ ಬೇಡಿಕೆಗೆ ಸ್ಪಂದಿಸಿರುವ ಇಂಡಿಗೋ ಸಂಸ್ಥೆ ದೈನಂದಿನ ವಿಮಾನ...
Haveri News: ಮಾಜಿ ಮುಖ್ಯಮಂತ್ರಿ ಹಾಗೂ ಹಿಂದುಳಿದ ವರ್ಗಗಳ ಹರಿಕಾರ ಎಂದೇ ಖ್ಯಾತರಾದ ದಿ. ಡಿ. ದೇವರಾಜ ಅರಸು ಅವರ ಜನ್ಮದಿನದ ಅಂಗವಾಗಿ ರಾಣೇಬೆನ್ನೂರು ನಗರದ ಬಸ್ ನಿಲ್ದಾಣದ ಬಳಿ ರೈತ ಮುಖಂಡ ಹನುಮಂತಪ್ಪ ಕಬ್ಬಾರ ಅವರು ಸಾರ್ವಜನಿಕರಿಗೆ ಹಾಗೂ ಶಾಲಾ ಮಕ್ಕಳಿಗೆ ಬಾಳೆಹಣ್ಣು ಹಾಗೂ ತಿಂಡಿ ವಿತರಿಸುವ ಮೂಲಕ ಅರ್ಥಪೂರ್ಣವಾಗಿ ಆಚರಿಸಿದರು.
ಈ ಸಂದರ್ಭದಲ್ಲಿ...
Hubli News: ಬಡವರ ಹಸಿವು ನೀಗಿಸಲು ಸರ್ಕಾರ ನೀಡುವ ಅನ್ನಭಾಗ್ಯದ ಜೋಳವೇ ಇದೀಗ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರಸ್ತೆ ಪಾಲಾಗಿದೆ. ಕುಂದಗೋಳ ತಾಲೂಕಿನ ಹಿರೇನರ್ತಿ–ಚಿಕ್ಕನೇರ್ತಿ ಮಾರ್ಗ ಮಧ್ಯೆ ಬರೋಬ್ಬರಿ 30 ಜೋಳದ ಚೀಲಗಳು ರಸ್ತೆ ಮೇಲೆ ಬಿದ್ದಿರುವ ಘಟನೆ ನಡೆದಿದೆ. ಬಡವರಿಗೆ ವಿತರಿಸಬೇಕಿದ್ದ ಆಹಾರ ಧಾನ್ಯಗಳ ಸಾಗಣೆಯಲ್ಲೇ ನಿರ್ಲಕ್ಷ್ಯ ತೋರಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಗ್ರಾಮಸ್ಥರು...
Dharwad News: ಧಾರವಾಡದಲ್ಲಿ ಭೀಕರ ಕೊಲೆ ನಡೆದಿದೆ. ವ್ಯಕ್ತಿಯೊಬ್ಬರ ಕತ್ತು ಸೀಳಿ ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ನಗರದ ಟೋಲ್ ನಾಕಾ ಬಳಿಯ ಐನಾಕ್ಸ್ ಸಮೀಪ ನಡೆದಿದೆ. ಲಕ್ಷ್ಮಿ ಸಿಂಗನಕೇರಿ ನಿವಾಸಿ 25 ವರ್ಷದ ಹನುಮಂತ ಅಣ್ಣಿಗೇರಿ ಕೊಲೆಯಾದ ವ್ಯಕ್ತಿ ಎಂದು ತಿಳಿದುಬಂದಿದೆ. ಘಟನೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.
ಟೋಲ್ ನಾಕಾ ಬಳಿಯ ಐನಾಕ್ಸ್ ಸಮೀಪ...
Hubli News: ಹುಬ್ಬಳ್ಳಿಯ ಪ್ರಿಯದರ್ಶಿನಿ ಕಾಲೋನಿಯಲ್ಲಿ ಸಾರ್ವಜನಿಕ ರಸ್ತೆ ಅತಿಕ್ರಮಣ ಮಾಡಿ ಕಚೇರಿ ನಿರ್ಮಾಣಕ್ಕೆ ಮುಂದಾಗಿದ್ದಾರೆ ಎಂಬ ಆರೋಪಕ್ಕೆ ಇದೀಗ ಕಾರ್ಪೊರೇಟರ್ ಸಂದಿಲ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಜಾಗ ಮೂಲ ಮಾಲೀಕರಿಗೆ ಸೇರಿದ್ದು, ಒಂದು ಗುಂಟೆ ಜಾಗವನ್ನು ದೇವಸ್ಥಾನಕ್ಕೆ ನೀಡಲಾಗಿದೆ. ಸ್ಥಳೀಯ ನಿವಾಸಿಗಳ ಮನವಿ ಮೇರೆಗೆ ತಾನು ಮಧ್ಯಸ್ಥಿಕೆ ವಹಿಸಿದ್ದೇನೆ ಹೊರತು, ವೈಯಕ್ತಿಕವಾಗಿ ಯಾವುದೇ...
ಬೆಂಗಳೂರು: ಪದ್ಮನಾಭನಗರ ವಿಧಾನಸಭಾ ಕ್ಷೇತ್ರದಲ್ಲಿ 2028ರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸುವುದು ಶತಸಿದ್ಧ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಗುರುಪ್ಪ ನಾಯ್ಡು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
1980ರಿಂದಲೂ ಕಾಂಗ್ರೆಸ್ ಪಕ್ಷದ ವಿದ್ಯಾರ್ಥಿ ನಾಯಕರಾಗಿ ಕೆಲಸ ಮಾಡುತ್ತಿದ್ದು, ಅಂದಿನ ವಿದ್ಯಾರ್ಥಿ ನಾಯಕರ ತಂಡದಲ್ಲೇ ಡಿ.ಕೆ. ಶಿವಕುಮಾರ್ ಇದ್ದರು. ಬಿ.ಕೆ. ಹರಿಪ್ರಸಾದ್ ಅವರು ನಮ್ಮ ನಾಯಕರಾಗಿದ್ದರು. ಅಂದು ಪಕ್ಷಕ್ಕಾಗಿ...
ಬೆಂಗಳೂರು: ಪದ್ಮನಾಭನಗರ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದೊಳಗೆ ಯಾವುದೇ ಗೊಂದಲ ಅಥವಾ ಭಿನ್ನಾಭಿಪ್ರಾಯವಿಲ್ಲ. ಎಲ್ಲಾ ಮುಖಂಡರು ಒಗ್ಗಟ್ಟಿನಿಂದ ಕೆಲಸ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ಸಂಯೋಜಕ ಹಾಗೂ ಚಲನಚಿತ್ರ ನಿರ್ಮಾಪಕ ಸಂಜಯ್ ಗೌಡ ಹೇಳಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಪದ್ಮನಾಭನಗರದಲ್ಲಿ ಕಾಂಗ್ರೆಸ್ ಸಂಘಟನೆ ಬಲಿಷ್ಠವಾಗಿದ್ದು, ಮುಂದಿನ ದಿನಗಳಲ್ಲಿ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರು ಒಗ್ಗಟ್ಟಿನಿಂದ...
Hubli News: ಹುಬ್ಬಳ್ಳಿಯಲ್ಲಿ ಖಾಸಗಿ ಆಸ್ಪತ್ರೆಗಳ ಪಾರ್ಕಿಂಗ್ ಅವ್ಯವಸ್ಥೆ ಸಾರ್ವಜನಿಕರಿಗೆ ನಿತ್ಯ ಕಿರಿಕಿರಿ ತಂದಿದೆ. ಗೋಕುಲ್ ರಸ್ತೆಯ ಕೆಎಸ್ಆರ್ಟಿಸಿ ಬಸ್ ಡಿಪೋ ಮುಂಭಾಗ, ಹೊಸ ಕೋರ್ಟ್ ಕಡೆಗೆ ಹೋಗುವ ರಸ್ತೆ ಹಾಗೂ ವಿದ್ಯಾನಗರ ಸಂಪರ್ಕಿಸುವ ರಸ್ತೆಯಲ್ಲಿ ಆಸ್ಪತ್ರೆಗಳಿಗೆ ಬರುವ ವಾಹನಗಳು ರಸ್ತೆ ಬದಿಯಲ್ಲೇ ನಿಲ್ಲುತ್ತಿರುವುದು ಸಾಮಾನ್ಯವಾಗಿದೆ. ಒಂದೆಡೆ ಪಾರ್ಕಿಂಗ್ ವ್ಯವಸ್ಥೆಯೇ ಇಲ್ಲ… ಮತ್ತೊಂದೆಡೆ ಪಾರ್ಕಿಂಗ್...
ಬೆಂಗಳೂರು: ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿ ಬಳಿಕ ಬಿಜೆಪಿ ಸೇರಿರುವ ಕೆಲ ನಾಯಕರ ಪಕ್ಷಾಂತರದ ಕುರಿತು ಜಿಬಿಎ ಗ್ಯಾರಂಟಿ ಸಮಿತಿ ಅಧ್ಯಕ್ಷ ಕೃಷ್ಣಪ್ಪ ಪ್ರತಿಕ್ರಿಯಿಸಿದ್ದಾರೆ. ಕಾಂಗ್ರೆಸ್ ಪಕ್ಷವು ವೈಯಕ್ತಿಕ ಸ್ವಾರ್ಥಕ್ಕೆ ಮಣಿಯದ ಕಾರಣ ಕೆಲವರು ಪಕ್ಷ ತೊರೆದಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಕೃಷ್ಣಪ್ಪ, ಪ್ರಮೋದ್ ಶ್ರೀನಿವಾಸ್ ಸೇರಿದಂತೆ ಕೆಲ ನಾಯಕರು...