Tuesday, December 23, 2025

ರಾಜ್ಯ

HDK ಜನ್ಮದಿನ ವಿಶೇಷ : JDS ಕಾರ್ಯಕರ್ತರಿಗೆ ಕರೆ

ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ, ತುರುವೇಕೆರೆ ತಾಲ್ಲೂಕಿನ ಜೆಡಿಎಸ್ ಕಾರ್ಯಕರ್ತರು, ಮುಖಂಡರು ಹಾಗೂ ಅಭಿಮಾನಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಎಂದು ಜೆಡಿಎಸ್ ತಾಲ್ಲೂಕು ಅಧ್ಯಕ್ಷ ದೊಡೇಗೌಡರು ಕರೆ ನೀಡಿದ್ದಾರೆ. ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹೆಚ್.ಡಿ. ಕುಮಾರಸ್ವಾಮಿ ಅವರ ಜನ್ಮದಿನದ ಅಂಗವಾಗಿ ನಾಳೆ ತುರುವೇಕೆರೆ...

ಶಾಮನೂರು ನಿಧನಕ್ಕೆ ಶ್ರದ್ಧಾಂಜಲಿ – ಮಠದಿಂದ ವಿಭೂತಿ ಗಟ್ಟಿ ರವಾನೆ

ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ಅವರ ನಿಧನದ ಹಿನ್ನೆಲೆಯಲ್ಲಿ, ಸಿದ್ದಗಂಗಾ ಮಠಾಧ್ಯಕ್ಷರಾದ ಸಿದ್ದಲಿಂಗ ಸ್ವಾಮಿಜಿಗಳು ದಾವಣಗೆರೆಯತ್ತ ಪ್ರಯಾಣ ಬೆಳೆಸಿದರು. ಶಾಮನೂರು ಶಿವಶಂಕರಪ್ಪ ಅವರ ಅಂತ್ಯಕ್ರಿಯೆ ಹಾಗೂ ಶ್ರದ್ಧಾಂಜಲಿ ಕಾರ್ಯಕ್ರಮಕ್ಕೆಂದು ಸಿದ್ದಗಂಗಾ ಮಠದಿಂದ ವಿಶೇಷವಾಗಿ ಸಿದ್ಧಪಡಿಸಿದ ವಿಭೂತಿ ಗಟ್ಟಿಯನ್ನು ದಾವಣಗೆರೆಗೆ ರವಾನೆ ಮಾಡಲಾಗಿದೆ. ಸಿದ್ದಗಂಗಾ ಮಠದಿಂದ ಸುಮಾರು ನೂರು ವಿಭೂತಿ ಗಟ್ಟಿಗಳನ್ನು ಸಿದ್ಧಪಡಿಸಲಾಗಿದ್ದು, ಅವುಗಳನ್ನು ಸಿದ್ದಗಂಗಾ ಮಠಾಧ್ಯಕ್ಷ...

ಕಲ್ಲುಗಣಿಗಾರಿಕೆಗೆ ರೊಚ್ಚಿಗೆದ್ದ ರೈತರು! ತಹಶೀಲ್ದಾರ್ ಕಚೇರಿಗೆ ಮುತ್ತಿಗೆ

ಕುಣಿಗಲ್ ತಾಲ್ಲೂಕಿನ ಹಿತ್ತಾಪುರ ಗ್ರಾಮದಲ್ಲಿ ಕಲ್ಲುಗಣಿಗಾರಿಕೆ ಅನುಮತಿ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಗ್ರಾಮಸ್ಥರು ಹಾಗೂ ರೈತರು ತೀವ್ರ ಆಕ್ರೋಶ ವ್ಯಕ್ತಪಡಿಸಿ ಕುಣಿಗಲ್ ತಹಶೀಲ್ದಾರ್ ಕಚೇರಿಗೆ ಮುತ್ತಿಗೆ ಹಾಕಿದರು. ಹಿತ್ತಾಪುರ ಗ್ರಾಮದ ಸರ್ವೆ ನಂಬರ್ 52ರಲ್ಲಿ ಕಲ್ಲುಗಣಿಗಾರಿಕೆಗೆ ತಾಲೂಕು ಆಡಳಿತ ಅನುಮತಿ ನೀಡಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಉಜಿನಿ ಚೌಡೇಶ್ವರಿ ದೇವಸ್ಥಾನಕ್ಕೆ ಸೇರಿದ ಬೆಟ್ಟ ಪ್ರದೇಶವಾಗಿರುವುದರಿಂದ...

ಶ್ರೀರಂಗಪಟ್ಟಣ ಆಸ್ಪತ್ರೆಯಲ್ಲಿ ಅವ್ಯವಸ್ಥೆ- ಉಗ್ರ ಪ್ರತಿಭಟನೆ

ಶ್ರೀರಂಗಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಅವ್ಯವಸ್ಥೆ ಮುಂದುವರಿದಿರುವುದನ್ನು ಖಂಡಿಸಿ ವಿವಿಧ ಸಂಘಟನೆಗಳು ಹಾಗೂ ಹೋರಾಟಗಾರರು ಇಂದು ಆಸ್ಪತ್ರೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ಆಸ್ಪತ್ರೆಯಲ್ಲಿ ರೋಗಿಗಳಿಗೆ ಸೂಕ್ತ ಚಿಕಿತ್ಸೆ ನೀಡಲಾಗುತ್ತಿಲ್ಲ, ವೈದ್ಯರು ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎಂಬ ಆರೋಪಗಳು ವ್ಯಕ್ತವಾದವು. ಪ್ರತಿಭಟನೆಯಲ್ಲಿ ಭಾಗವಹಿಸಿದವರು, ಆಸ್ಪತ್ರೆಯ ಕೆಲವು ವೈದ್ಯರು ಸಾರ್ವಜನಿಕರು ಹಾಗೂ ರೋಗಿಗಳೊಂದಿಗೆ ಸರಿಯಾಗಿ ಸ್ಪಂದಿಸುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು....

ಡಿ.ಕೆ. ಶಿವಕುಮಾರ್‌ಗೆ ಹೈಕಮಾಂಡ್ ಗ್ಯಾರಂಟಿ, 10 ನಿಮಿಷದ ಮೀಟಿಂಗ್ ಸೋನಿಯಾ ಮೆಸೇಜ್

Not all heroes wear capes ಅನ್ನೋ ಒಂದು ಮಾತಿದೆ. ಹೀಗಂದ್ರೆ ಎಲ್ಲಾ ಹೀರೋಗಳು ನಿಲುವಂಗಿ ತೊಡೋದಿಲ್ಲ ಅಂತ ಅರ್ಥ. ಇನ್ನೂ ಸಿಂಪಲ್ಲಾಗಿ ಹೇಳಬೇಕು ಎಂದರೇ ಯಶ್ ಸಿನಿಮಾ ಡೈಲಾಗ್ ನೆನಪಿಸಬಹುದು. ಅಣ್ತಮ್ಮ..! ಇಲ್ಲಿ ಯಾರು ಹೀರೊಗಳನ್ನ ಹುಟ್ಟಾಕಲ್ಲ.. ನಮಗ್ ನಾವೇ ಹೀರೋ ಆಗ್ಬೇಕು ಅನ್ನೋ ಮಾತು ನಿಜವಾಗುತ್ತಿದೆ. KPCC President, Deputy Chief...

ಕಡಿಮೆ ಆದಾಯದವರಿಗೆ ‘ಬಂಪರ್’ ಚಾನ್ಸ್!

ಕರ್ನಾಟಕ ಗೃಹ ಮಂಡಳಿಯು ರಾಜಧಾನಿಯಲ್ಲಿ ಅಭಿವೃದ್ಧಿಪಡಿಸಿರುವ ರಾಜಾಪುರ ಬಡಾವಣೆಯಲ್ಲಿನ 332 ನಿವೇಶನಗಳ ಹಂಚಿಕೆಗೆ ಮುಂದಾಗಿದೆ. ಅಲ್ಲದೆ, ಇಲ್ಲಿ ಆರ್ಥಿಕ ದುರ್ಬಲ ವರ್ಗದವರಿಗೆ ಶೇ.50ರ ರಿಯಾಯಿತಿ ದರದಲ್ಲಿ ನಿವೇಶನಗಳನ್ನು ನೀಡುತ್ತಿದೆ. ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲ್ಲೂಕು ವ್ಯಾಪ್ತಿಯಲ್ಲಿ ಕರ್ನಾಟಕ ಗೃಹ ಮಂಡಳಿ ‘ಸೂರ್ಯನಗರ’ ಯೋಜನೆಯಡಿ ಹಂತ ಹಂತವಾಗಿ ಬಡಾವಣೆಗಳನ್ನು ಅಭಿವೃದ್ಧಿಪಡಿಸಿದೆ. ಇಲ್ಲಿ ನಿವೇಶನಗಳ ಜೊತೆಗೆ ವಿವಿಧ...

ಮಾಜಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಸಂತಾಪ

ಶಾಮನೂರು ಶಿವಶಂಕರಪ್ಪ ನಿಧನಕ್ಕೆ ಮಾಜಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಸಂತಾಪ ಸೂಚಿಸಿದ್ದಾರೆ. ಹಿರಿಯ ಶಾಸಕರು ಹಾಗೂ ವೀರಶೈವ ಮಹಾಸಭಾ ಅಧ್ಯಕ್ಷರಾದ ಶಾಮನೂರ ಶಿವಶಂಕರಪ್ಪನವರು ನಿಧನರಾದ ವಿಷಯ ತಿಳಿದು ನನಗೆ ಅತ್ಯಂತ ದುಃಖವಾಗಿದೆ. ಸಾಮಾಜಿಕ, ರಾಜಕೀಯ, ಶೈಕ್ಷಣಿಕ, ಔದ್ಯೋಗಿಕ ಕ್ಷೇತ್ರಗಳೂ ಸೇರಿ ಇತರ ಕ್ಷೇತ್ರಗಳಲ್ಲಿ ಅನೇಕ ವರ್ಷಗಳಿಂದ ಸೇವೆ ಸಲ್ಲಿಸಿದ್ದರು. ಶಾಸಕರಾಗಿ, ರಾಜ್ಯದ ಸಚಿವರಾಗಿ ದಕ್ಷ...

ರೀಲ್ಸ್ ಪ್ರೇಮಕ್ಕೆ ಕರ್ತವ್ಯ ಮರೆತ ಪೊಲೀಸ್!

ಇನ್‌ಸ್ಟಾಗ್ರಾಂ ರೀಲ್ಸ್… ಒಂದು ಫ್ರೆಂಡ್ ರಿಕ್ವೆಸ್ಟ್… ಮತ್ತು ಪೊಲೀಸ್ ಇಲಾಖೆಗೆ ದೊಡ್ಡ ಶಾಕ್. ಹೌದು, ಎಚ್‌ಎಸ್‌ಆರ್ ಲೇಔಟ್ ಠಾಣೆಯ ಪೊಲೀಸ್ ಕಾನ್‌ಸ್ಟೇಬಲ್ ರಾಘವೇಂದ್ರ, ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಮೋನಿಕಾ ಎಂಬ ಮಹಿಳೆಯ ಜತೆ ಪರಾರಿಯಾಗಿರುವ ಘಟನೆ ಈಗ ಭಾರೀ ಸಂಚಲನ ಮೂಡಿಸಿದೆ. ಮೈಸೂರು ಮೂಲದ ಮೋನಿಕಾ, ಮಂಜುನಾಥ್ ಅವರ ಪತ್ನಿ. ದಂಪತಿಗೆ 12 ವರ್ಷದ ಮಗ....

ಶಿಲ್ಪಾ ಶೆಟ್ಟಿ ಪಬ್‌ನಲ್ಲಿ ಗಲಾಟೆ : ಆರೋಪಗಳ ನಡುವೆ ಸತ್ಯ ನಾಯ್ಡು ಸ್ಪಷ್ಟನೆ

ನಗರದ ಲ್ಯಾಂಗ್‌ಫೋರ್ಡ್ ರಸ್ತೆಯಲ್ಲಿರುವ ಶಿಲ್ಪಾ ಶೆಟ್ಟಿ ಒಡೆತನದ ‘ಬ್ಯಾಸ್ಟಿಯನ್’ ಪಬ್‌ನಲ್ಲಿ, ಮಧ್ಯರಾತ್ರಿ ಗಲಾಟೆ ನಡೆದಿದ್ದು, ಈ ಪ್ರಕರಣದಲ್ಲಿ ಮಾಜಿ ಬಿಗ್ ಬಾಸ್ ಸ್ಪರ್ಧಿ ಹಾಗೂ ನಿರೂಪಕಿಯ ಮಾಜಿ ಪತಿ, ಉದ್ಯಮಿ ಸತ್ಯ ನಾಯ್ಡು ಗಲಾಟೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಘಟನೆ ಕಳೆದ ಎರಡು ದಿನಗಳ ಹಿಂದೆ, ಮಧ್ಯರಾತ್ರಿ ಸುಮಾರು 1:30ರ ವೇಳೆಗೆ ನಡೆದಿದ್ದು, ಪಬ್...

ದಾವಣಗೆರೆ ದಣಿಗೆ ಅಂತಿಮ ವಿದಾಯ : ಹಿರಿಯ ಶಾಸಕ ಶಾಮನೂರು ನಿಧನ

ರಾಜ್ಯದ ಹಿರಿಯ ರಾಜಕಾರಣಿ, ಮಾಜಿ ಸಚಿವ ಹಾಗೂ ದಾವಣಗೆರೆ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ (95) ಅವರು ಇಂದು ವಯೋಸಹಜ ಕಾಯಿಲೆಯಿಂದ ನಿಧನರಾಗಿದ್ದಾರೆ. ಅವರ ನಿಧನದ ಸುದ್ದಿ ರಾಜ್ಯ ರಾಜಕೀಯ ವಲಯದಲ್ಲಿ ತೀವ್ರ ಸಂತಾಪ ಮೂಡಿಸಿದೆ. ಅಖಿಲ ಭಾರತ ವೀರಶೈವ–ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರಾಗಿದ್ದ ಶಾಮನೂರು ಶಿವಶಂಕರಪ್ಪ ಅವರು, ಕರ್ನಾಟಕ ರಾಜಕಾರಣದಲ್ಲಿ ಅಪರೂಪದ...
- Advertisement -spot_img

Latest News

ಅಭಿಮಾನಿಗಳ ಅತಿರೇಕಕ್ಕೆ ನಟಿ ”ಸಮಂತಾ” ಗಲಿಬಿಲಿ!

ಸಾರ್ವಜನಿಕ ಹಾಗೂ ಖಾಸಗಿ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ನಟಿಯರಿಗೆ ಅಭಿಮಾನಿಗಳಿಂದ ತೊಂದರೆಯಾಗುತ್ತಿರುವ ಘಟನೆಗಳು ಇತ್ತೀಚೆಗೆ ಹೆಚ್ಚಾಗುತ್ತಿವೆ. ಇತ್ತೀಚೆಗೆ ‘ದಿ ರಾಜಾಸಾಬ್’ ಚಿತ್ರದ ‘ಸಹನಾ ಸಹನಾ’ ಹಾಡು ಬಿಡುಗಡೆ...
- Advertisement -spot_img