ಬೆಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಮೀನುಗಾರಿಕೆ ಹಾಗೂ ಪಶುಸಂಗೋಪನೆಯನ್ನು ಕೃಷಿಗೆ ಪೂರಕ ಚಟುವಟಿಕೆಗಳೆಂದು ಗುರುತಿಸಿ, ಕಿಸಾನ್ ಕ್ರೆಡಿಟ್ ಕಾರ್ಡ್ ಸೌಲಭ್ಯವನ್ನು ಅವರಿಗೂ ವಿಸ್ತರಿಸಿದ್ದಾರೆ. ರಾಜ್ಯದಲ್ಲಿ ಮೀನುಗಾರರಿಗೆ ಆದ್ಯತೆಯ ಮೇರೆಗೆ ಕಿಸಾನ್ ಕ್ರೆಡಿಟ್ ಕಾರ್ಡ್ ಸೌಲಭ್ಯವನ್ನು ಒದಗಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ರಾಜ್ಯಮಟ್ಟದ...
Manglore News:
ಸರಕಾರ ರಾತ್ರಿವೇಳೆಯಲ್ಲಿ ಧ್ವನಿವರ್ಧಕಗಳ ಮೇಲೆ ನಿರ್ಬಂಧ ಹೇರಿದ ಹಿನ್ನೆಲೆಯಲ್ಲಿ ಕಟೀಲು ಕ್ಷೇತ್ರದ ಯಕ್ಷಗಾನ ಮೇಳಗಳ ಯಕ್ಷ ಪ್ರದರ್ಶನದ ಸಮಯವನ್ನು ಬದಲಾವಣೆಗೊಳಿಸಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿದು ಬಂದಿದೆ. ಪುರಾಣ ಪ್ರಸಿದ್ಧ ಐತಿಹಾಸಿಕ ಕ್ಷೇತ್ರಗಳಲ್ಲಿ ಒಂದಾದ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಳದಿಂದ ನಡೆಸಲ್ಪಡುವ 6 ಯಕ್ಷಗಾನ ಮೇಳಗಳ ಪ್ರದರ್ಶನವನ್ನು ಮುಂದಿನ ತಿರುಗಾಟದಿಂದ ಕಾಲಮಿತಿಗೆ ತರಲು...
ನವದೆಹಲಿ: ಕೇಂದ್ರ ಸರ್ಕಾರದ ಸಾಹಿತ್ಯ ಅಕಾಡೆಮಿಯಿಂದ ಕೊಡ ಮಾಡುವಂತ 2022ನೇ ಸಾಲಿನ ಯುವ ಸಾಹಿತ್ಯ ಪ್ರಶಸ್ತಿ ಹಾಗೂ ಬಾಲ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯನ್ನು ಪ್ರಕಟಿಸಲಾಗಿದೆ. ಕರ್ನಾಟಕದ ಇಬ್ಬರು ಸಾಹಿತಿಗಳು ಈ ಬಾರಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
2022ನೇ ಸಾಲಿನ ಪ್ರಶಸ್ತಿಯನ್ನು ಪ್ರಕಟಿಸಲಾಗಿದ್ದು, ಯುವ ಸಾಹಿತ್ಯ ಪ್ರಶಸ್ತಿಯನ್ನು ದಾದಾಪೀರ್ ಜೈಮನ್ ಅವರ ನೀಲಕುರಿಂಜಿ ಕಥಾ ಸಂಕಲನಕ್ಕೆ ನೀಡಲಾಗಿದೆ. ಬಾಲ...
Banglore News:
ರಾಜ್ಯದಲ್ಲಿ ಗುತ್ತಿಗೆದಾರರ ಅಧ್ಯಕ್ಷ ಕೆಂಪಣ್ಣ ಹಾಕಿದ 40% ಕಮಿಷನ್ ಆರೋಪದ ಹೊಸ ಬಾಂಬ್ ರಾಜ್ಯದಲ್ಲಿ ಇದೀಗ ಸಿಡಿದೆದ್ದಿದೆ. 40% ಕಮಿಷನ್ ಆರೋಪವನ್ನು ರಾಜ್ಯ ಸರ್ಕಾರ ನ್ಯಾಯಾಂಗ ತನಿಖೆಗೆ ನೀಡಲಿ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಗ್ರಹ ಮಾಡಿದ್ದಾರೆ.
ಬೆಂಗಳೂರಿನ ತಮ್ಮ ನಿವಾಸದಲ್ಲಿ ಬುಧವಾರ ಮಾತನಾಡಿದ ಅವರು, ಕೆಂಪಣ್ಣ ಮಾಡಿರುವ ಭ್ರಷ್ಟಾಚಾರದ ಆರೋಪದ ಬಗ್ಗೆ...
Ballari News:
ಬಳ್ಳಾರಿಯಲ್ಲೊಂದು ಗಂಭೀರ ಅಪಘಾತ ನಡೆದಿದೆ. ಅಪಘಾತದಲ್ಲಿ ತಂದೆ ತಾಯಿ ಸಾವನ್ನಪ್ಪಿದ್ದು ಮಗುವಿನ ಪರಿಸ್ಥಿತಿ ಗಂಭೀರವಾಘಿದೆ. ದಂಪತಿ ಹಾಗು ಮಗು ಬೈಕ್ನಲ್ಲಿ ತೆರಳುತ್ತಿದ್ದಾಗ ಲಾರಿ ಡಿಕ್ಕಿಯಾಗಿ ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಕೌಲ್ಬಜಾರ್ ಫ್ಲೈಓವರ್ ಮೇಲೆ ಸಂಭವಿಸಿದೆ. ಬೈಕ್ನಲ್ಲಿ ತೆರಳುತ್ತಿದ್ದ ದಂಪತಿ ವೀರೇಶ್, ಅಂಜಲಿ ಹಾಗೂ ದಿನೇಶ್ ದುರ್ಮರಣ ಹೊಂದಿದ್ದಾರೆ. ಹನಿ ಎಂಬ ಮಗುವಿನ ಸ್ಥಿತಿ...
Bigboss News:
ಬಿಗ್ ಬಾಸ್ ಓಟಿಟಿಯಲ್ಲಿ ಪ್ರೀತಿ ಸಂಬಂಧ ಗಲಾಟೆಗಳ ಅಧ್ಯಾಯ ಮುಗಿಯಿತು ಈಗ ಹೊಸ ಆಟ ಶುರುವಾಗಿದೆ. ಒಬ್ಬೊಬ್ಬರನ್ನು ಮನೆಯಿಂದ ಹೊರ ನಡೆಸಲು ಒಳ ಸಂಚು ಶುರುವಾಗಿದೆ.
ರೂಪೇಶ್ ಶೆಟ್ಟಿ ಅವರು ‘ಬಿಗ್ ಬಾಸ್ ಒಟಿಟಿ’ಯಲ್ಲಿ ಎಲ್ಲರ ಗಮನ ಸೆಳೆಯುತ್ತಿದ್ದಾರೆ. ಅವರ ಅಭಿಮಾನಿ ವರ್ಗ ದಿನ ಕಳೆದಂತೆ ಹೆಚ್ಚುತ್ತಿದೆ. ಅವರ ವ್ಯಕ್ತಿತ್ವ ಅನೇಕರಿಗೆ ಇಷ್ಟವಾಗುತ್ತಿದೆ. ಮನೆಯಿಂದ ಅವರನ್ನು...
Crime News:
ಜೋಳಿಗೆಯಲ್ಲಿ ಮಲಗಿಸಿದ್ದ ಮಗುವನ್ನು ಕಿಡಿಗೇಡಿಗಳು ಕಿಡ್ನಾಪ್ ಮಾಡಿರೋ ಸುದ್ದಿ ಬೆಳಕಿಗೆ ಬಂದಿದೆ.ತಾಯಿ ಕೂಲಿ ಕೆಲಸಕ್ಕೆ ತೆರಳಿದ್ದ ವೇಳೆ ಜೋಳಿಗೆಯಲ್ಲಿ ಮಲಗಿಸಿದ್ದ 9 ತಿಂಗಳ ಮಗು ನಾಪತ್ತೆಯಾದ ಘಟನೆ ಯಡ್ರಾಮಿ ತಾಲೂಕಿನ ಮಳ್ಳಿ ಗ್ರಾಮದಲ್ಲಿ ನಡೆದಿದೆ.
ಬೀರಪ್ಪ (9 ತಿಂಗಳು) ನಾಪತ್ತೆಯಾದ ಮಗು. ಗೌಡಪ್ಪ ವಕ್ರಾಣಿ ಎಂಬವರ ಪತ್ನಿ ಶಾಂತಮ್ಮ ಮರಕ್ಕೆ ಕಟ್ಟಿದ ಜೋಳಿಗೆಯಲ್ಲಿ ಮಗುವನ್ನು...
Crime News:
ಬೆಂಗಳೂರಿನಲ್ಲಿ ಅನೈತಿಕ ಸಂಬಂಧದ ಅನುಮಾನದಿಂದ ಪತ್ನಿಯನ್ನೇ ಕೊಲೆ ಮಾಡಿರೋ ವಿಚಾರ ಬೆಳಕಿಗೆ ಬಂದಿದೆ.
ಅನೈತಿಕ ಸಂಬಂಧ ಅನುಮಾನದಿಂದ ಪತ್ನಿಯನ್ನು ಕೊಂದಿದ್ದ ಪತಿಯನ್ನು ಕೆ.ಆರ್ ಪುರಂ ಪೊಲೀಸರು ಬಂಧಸಿದ್ದಾರೆ. ಜಾನ್ ಸುಪ್ರಿತ್ (34) ಬಂಧಿತ ಆರೋಪಿ. ನ್ಯಾನ್ಸಿ ಫ್ಲೋರಾ ಕೊಲೆಯಾಗಿದ್ದ ಮಹಿಳೆ. ಶಾಮಿಯಾನ ಬ್ಯುಸಿನೆಸ್ ಮಾಡಿಕೊಂಡಿದ್ದ ಆರೋಪಿ ಪತ್ನಿಯ ಮೇಲೆ ಅನುಮಾನದಿಂದ ಕೆ ಆರ್.ಪುರಂನ ಟಿಸಿ...
ಬೆಂಗಳೂರು: ‘ಹೇಳಿಕೊಳ್ಳಲು ಯಾವುದೇ ಜನಪರ ಸಾಧನೆಗಳನ್ನು ಮಾಡದ ಬಿಜೆಪಿ ಸರ್ಕಾರ ಜನೋತ್ಸವ ಬದಲಿಗೆ, ತಮ್ಮ ವೈಫಲ್ಯ ಮುಚ್ಚಿಕೊಳ್ಳಲು ಸಾರ್ವಕರ್ ಉತ್ಸವವನ್ನು ಮಾಡುತ್ತಿದೆ’ ಎಂದು ಕೆಪಿಸಿಸಿ ಸಂವಹನ ವಿಭಾಗದ ಮುಖ್ಯಸ್ಥ ಪ್ರಿಯಾಂಕ್ ಖರ್ಗೆ ಅವರು ವಾಗ್ದಾಳಿ ನಡೆಸಿದ್ದಾರೆ.
ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಬುಧವಾರ ಮಾಧ್ಯಮಗೋಷ್ಠಿ ನಡೆಸಿದ ಅವರು ಸಾರ್ವಕರ್ ಅವರ ವಿಚಾರಧಾರೆಗಳನ್ನು ಮುಂದಿಟ್ಟು ಬಿಜೆಪಿಗೆ ಪಂಚ...
Technology News:
ಡಿಜಿಟಲ್ ಸ್ಮಾರ್ಟ್ವಾಚ್ ಗಳ ಜನಪ್ರಿಯ ಬ್ರ್ಯಾಂಡ್ ಭಾರತೀಯ ಎಲೆಕ್ಟ್ರಾನಿಕ್ ಬ್ರ್ಯಾಂಡ್ Noise ದೇಶದಲ್ಲಿ ತನ್ನ ವಿನೂತನ NoiseFit Core 2 ಸ್ಮಾರ್ಟ್ವಾಚ್ ಅನ್ನು ಪರಿಚಯಿಸಿದೆ. ಫಿಟ್ನೆಸ್ ಮತ್ತು ಔಟ್ಡೋರ್ ಎರಡಕ್ಕೂ ವಿಶೇಷವಾಗಿ ವಿನ್ಯಾಸಗೊಳಿಸಿರುವ ಸ್ಮಾರ್ಟ್ವಾಚ್ ಇದಾಗಿದ್ದು, 1.28-ಇಂಚಿನ ಸ್ಕ್ರಾಚ್-ರೆಸಿಸ್ಟೆಂಟ್ ಡಿಸ್ಪ್ಲೇ, ಹೃದಯ ಬಡಿತ ಮತ್ತು SpO2 ರಕ್ತದ ಆಮ್ಲಜನಕ ಸಂವೇದಕಗಳು ಹಾಗೂ ಅಂತರ್ನಿರ್ಮಿತ...