Sunday, September 20, 2026

ಜಿಲ್ಲಾ ಸುದ್ದಿಗಳು

ಒಂದೇ ಕ್ಲಿಕ್.. 44 ಲಕ್ಷ ಖಾಲಿ! ಮೈಸೂರಲ್ಲಿ ಮೆಗಾ ಸ್ಕ್ಯಾಮ್!

ಮೈಸೂರಿನಲ್ಲಿ ಮತ್ತೊಂದು ದೊಡ್ಡ ಸೈಬರ್ ವಂಚನೆ ಪ್ರಕರಣ ಬೆಳಕಿಗೆ ಬಂದಿದೆ, APK ಫೈಲ್ ಲಿಂಕ್ ಮೂಲಕ ಇಬ್ಬರು ಹಿರಿಯ ನಾಗರಿಕರಿಂದ ಒಟ್ಟು ₹44 ಲಕ್ಷಕ್ಕೂ ಹೆಚ್ಚು ಹಣವನ್ನು ದೋಚಿರುವ ಘಟನೆ ನಡೆದಿದೆ. ಈ ಘಟನೆ ನಗರದಲ್ಲಿ ಆತಂಕ ಹೆಚ್ಚಿಸಿದ್ದು, ಸೈಬರ್ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಮಾಹಿತಿಯ ಪ್ರಕಾರ, ಅನಾಮಿಕ ಸಂಖ್ಯೆಯಿಂದ ಬಂದಿದ್ದ APK ಫೈಲ್ ಅನ್ನು...

ಅಲ್ಪಸಂಖ್ಯಾತ ಹೆಣ್ಣುಮಕ್ಕಳ ಹೈಯರ್ ಎಜುಕೇಶನ್‌ಗೆ ಮಸ್ತ್ ಪ್ಲಾನ್ ರೆಡಿ ಮಾಡಿದ ಸರ್ಕಾರ!

ಮೈಸೂರಿನಲ್ಲಿ ಅಲ್ಪಸಂಖ್ಯಾತ ಸಮುದಾಯದ ಹೆಣ್ಣುಮಕ್ಕಳ ಶಿಕ್ಷಣಕ್ಕೆ ಹೊಸ ದಿಕ್ಕು ನೀಡುವ ಉದ್ದೇಶದಿಂದ ಸರ್ಕಾರವು ನೂತನ ಮಹಿಳಾ ಪದವಿ ಪೂರ್ವ ಕಾಲೇಜನ್ನು ಆರಂಭಿಸಿದೆ. ಪ್ರಸಕ್ತ ಸಾಲಿನಿಂದಲೇ ಆರಂಭವಾಗುತ್ತಿರುವ ಈ ಕಾಲೇಜಿನಲ್ಲಿ ವಿಜ್ಞಾನ, ವಾಣಿಜ್ಯ ಮತ್ತು ಕಲಾ ವಿಭಾಗಗಳಲ್ಲಿ ಒಟ್ಟು 180 ಸೀಟುಗಳನ್ನು ಮೀಸಲಿಡಲಾಗಿದೆ. ಪ್ರತಿ ವಿಭಾಗಕ್ಕೂ 60 ಸೀಟುಗಳಂತೆ ಅವಕಾಶ ಕಲ್ಪಿಸಲಾಗಿದ್ದು, ಎಸ್‌ಎಸ್‌ಎಲ್‌ಸಿ ಉತ್ತೀರ್ಣರಾದ ವಿದ್ಯಾರ್ಥಿನಿಯರು...

ಮಂಡ್ಯದಲ್ಲಿ ಮಿಸ್ಸಿಂಗ್ ಕೇಸ್‌ಗಳಿಗೆ ಬಿತ್ತು ಬ್ರೇಕ್! ಖಾಕಿ ಪಡೆಯ ಸಿಂಗಂ ಸ್ಟೈಲ್ ಬೇಟೆ!

ಮಂಡ್ಯ ಜಿಲ್ಲೆಯಲ್ಲಿ ಹಲವು ದಿನಗಳಿಂದ ಆತಂಕಕ್ಕೆ ಕಾರಣವಾಗಿದ್ದ ಕಾಣೆಯಾದ ಮಕ್ಕಳ ಪ್ರಕರಣಗಳಿಗೆ ಪೊಲೀಸರು ಯಶಸ್ವಿ ಅಂತ್ಯ ಕಂಡುಕೊಂಡಿದ್ದಾರೆ. ವಿವಿಧ ಸಂದರ್ಭಗಳಲ್ಲಿ ನಾಪತ್ತೆಯಾಗಿದ್ದ ಮಕ್ಕಳನ್ನು ಪತ್ತೆಹಚ್ಚಿ ಕುಟುಂಬಗಳಿಗೆ ಹಸ್ತಾಂತರಿಸುವ ಮೂಲಕ ಮಂಡ್ಯ ಪೊಲೀಸರು ಮಹತ್ವದ ಸಾಧನೆ ಮಾಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಾಣೆಯಾದ ಮಕ್ಕಳು ಕೆಲ ಪ್ರಕರಣಗಳಲ್ಲಿ ಮನೆ ಪರಿಸರದಲ್ಲೇ ಸುರಕ್ಷಿತವಾಗಿ ಪತ್ತೆಯಾಗಿದ್ದರೆ, ಕೆಲವು ಪ್ರಕರಣಗಳಲ್ಲಿ...

ಹಾವೇರಿಯಲ್ಲಿ ಅಲೆಮಾರಿಗಳ ಗೋಳು ಕೇಳೋರಿಲ್ಲ: ಸೂರಿಲ್ಲದೆ ರಸ್ತೆ ಪಾಲಾದ ಕುಟುಂಬಗಳು.

ಹಾವೇರಿ ಜಿಲ್ಲೆಯಲ್ಲಿ ನಿನ್ನೆ ರಾತ್ರಿ ಬಿರುಗಾಳಿ ಸಹಿತ ಮಳೆಯ ಅಬ್ಬರದಿಂದ ಹಲವು ಪ್ರದೇಶಗಳಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಹಾವೇರಿ ನಗರದ ಹೊರವಲಯದ ಇಜಾರಿಲಕಮಾಪುರ ಗ್ರಾಮದ ಬಳಿ ಗಾಳಿ-ಮಳೆಯ ತೀವ್ರತೆ ಹೆಚ್ಚಾಗಿ ಅಲೇಮಾರಿ ಸಮುದಾಯದ ಗುಡಿಸಲುಗಳು ಹಾನಿಗೊಳಗಾಗಿವೆ. ತೀವ್ರ ಗಾಳಿಗೆ ಹಲವಾರು ಗುಡಿಸಲುಗಳು ಹಾರಿ ಹೋಗಿದ್ದು, ಕೆಲವು ಸಂಪೂರ್ಣವಾಗಿ ಕುಸಿದು ಬಿದ್ದಿವೆ ಎಂದು ಸ್ಥಳೀಯರು ತಿಳಿಸಿದ್ದಾರೆ. ರಾತ್ರಿ...

ಹೈದರಾಬಾದ್ ತಲುಪಲು 2 ಗಂಟೆ ಸಾಕು! ಕರ್ನಾಟಕದಲ್ಲಿ ಹೈ-ಸ್ಪೀಡ್ ರೈಲು ಕ್ರಾಂತಿ !

ಕರ್ನಾಟಕ ಸರ್ಕಾರವು ದೇಶದ ಸಾರಿಗೆ ಕ್ಷೇತ್ರದಲ್ಲಿ ಮಹತ್ವದ ಹೆಜ್ಜೆಯನ್ನಿರಿದೆ, ಬೆಂಗಳೂರು–ಹೈದರಾಬಾದ್ ಹಾಗೂ ಬೆಂಗಳೂರು–ಚೆನ್ನೈ–ಮೈಸೂರು ಹೈ-ಸ್ಪೀಡ್ ರೈಲು ಕಾರಿಡಾರ್‌ಗಳಿಗೆ ಅಧಿಕೃತ ಅನುಮೋದನೆ ನೀಡಿದೆ. 320 ರಿಂದ 350 ಕಿ.ಮೀ ವೇಗದಲ್ಲಿ ಸಂಚರಿಸುವ ಈ ಬುಲೆಟ್ ಟ್ರೇನ್ ಯೋಜನೆಗಳು ದಕ್ಷಿಣ ಭಾರತದ ಸಂಪರ್ಕವನ್ನು ಸಂಪೂರ್ಣವಾಗಿ ಬದಲಿಸುವ ನಿರೀಕ್ಷೆ ಮೂಡಿಸಿವೆ. ಈ ಯೋಜನೆಯಿಂದ ಬೆಂಗಳೂರು–ಹೈದರಾಬಾದ್ ಪ್ರಯಾಣವು ಕೇವಲ ಎರಡು...

NEET ಹಗರಣ ಖಂಡಿಸಿ ಹಾವೇರಿಯಲ್ಲಿ ರಸ್ತೆಗಿಳಿದ ಕಾರ್ಯಕರ್ತರು.

ಹಾವೇರಿ ನಗರದ ಪಿ.ಬಿ ರಸ್ತೆಯಲ್ಲಿರುವ ಸಂಸದ ಬಸವರಾಜ್ ಬೊಮ್ಮಾಯಿ ಅವರ ಕಚೇರಿ ಎದುರು ಜಮಾಯಿಸಿದ ಯೂತ್ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನೀಟ್ ಪರೀಕ್ಷೆಯಲ್ಲಿ ನಡೆದಿರುವ ಅವ್ಯವಸ್ಥೆ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯಕ್ಕೆ ಧಕ್ಕೆ ತಂದಿದೆ ಎಂದು ಆರೋಪಿಸಿದ ಪ್ರತಿಭಟನಾಕಾರರು, ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣವನ್ನು ಗಂಭೀರವಾಗಿ...

ಅಕ್ರಮ ಮದ್ಯಕ್ಕೆ ಬ್ರೇಕ್ ಹಾಕಿ! ಕೊಪ್ಪಳದಲ್ಲಿ ‘ಕರ್ನಾಟಕ ಸೇನೆ’ ರಣಕಹಳೆ!

ಕೊಪ್ಪಳ ಜಿಲ್ಲೆಯಲ್ಲಿ ಧಾರ್ಮಿಕ ಸ್ಥಳಗಳು, ಶಾಲೆ-ಕಾಲೇಜುಗಳು ಹಾಗೂ ಬಸ್ ನಿಲ್ದಾಣಗಳ ಸಮೀಪದಲ್ಲೇ ಕಾರ್ಯನಿರ್ವಹಿಸುತ್ತಿರುವ ಬಾರ್ ಮತ್ತು ವೈನ್ ಶಾಪ್‌ಗಳನ್ನು ತಕ್ಷಣ ಬಂದ್ ಮಾಡಬೇಕು ಎಂದು ನಮ್ಮ ಕರ್ನಾಟಕ ಸೇನೆ ಆಗ್ರಹಿಸಿದೆ. ಈ ಸಂಬಂಧ ಕೊಪ್ಪಳ ಅಪರ ಜಿಲ್ಲಾಧಿಕಾರಿ ಸಿದ್ದೇಶ್ವರ ಅವರ ಮುಖಾಂತರ ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಿದ ಸಂಘಟನೆ, ಜಿಲ್ಲೆಯಲ್ಲಿ ಮದ್ಯದ ಅಂಗಡಿಗಳು ನಿಯಮ ಉಲ್ಲಂಘನೆ...

4 ವರ್ಷ ಕಳೆದರೂ ಮುಗಿಯದ 320 ಕೋಟಿಯ ಕಾಮಗಾರಿ!

ಹುಬ್ಬಳ್ಳಿ ನಗರದ ಪ್ರಮುಖ ಸಂಪರ್ಕ ಕೇಂದ್ರವಾದ ಚನ್ನಮ್ಮ ವೃತ್ತದ ಫ್ಲೈಓವರ್ ಕಾಮಗಾರಿ ಮತ್ತೆ ವಿಳಂಬವಾಗುತ್ತಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಹಲವು ಬಾರಿ ಗಡುವು ನೀಡಿದರೂ ಕಾಮಗಾರಿ ಪೂರ್ಣಗೊಳ್ಳದ ಹಿನ್ನೆಲೆ, ಇದೀಗ ಆಗಸ್ಟ್ ಒಳಗೂ ಕಾಮಗಾರಿ ಮುಗಿಯುವುದು ಅನುಮಾನ ಎನ್ನುವ ಸ್ಥಿತಿ ನಿರ್ಮಾಣವಾಗಿದೆ. 320 ಕೋಟಿ ರೂಪಾಯಿ ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗಿರುವ ಈ ಫ್ಲೈಓವರ್ ಕಾಮಗಾರಿ 2020ರಿಂದಲೇ...

ಚಿಕ್ಕಮಗಳೂರಿನಲ್ಲಿ ಮಾನವೀಯತೆ ಮರೆತ ಮಹಿಳೆ!

ಚಿಕ್ಕಮಗಳೂರು ಜಿಲ್ಲೆ ಎನ್.ಆರ್.ಪುರ ತಾಲೂಕಿನಲ್ಲಿ ಮಾನವೀಯತೆ ಮರೆಸುವಂತಹ ಘಟನೆ ನಡೆದಿದೆ. KSRTC ಬಸ್‌ನಲ್ಲಿ ಸೀಟ್ ವಿಚಾರವಾಗಿ ನಡೆದ ವಾಗ್ವಾದ ಹಲ್ಲೆಗೆ ತಿರುಗಿದೆ. 70 ವರ್ಷದ ವೃದ್ಧನ ಮೇಲೆ ಮಹಿಳೆ ಹಲ್ಲೆ ನಡೆಸಿದ ಘಟನೆ ವರದಿಯಾಗಿದೆ. ಶೃಂಗೇರಿಯಿಂದ ಎನ್.ಆರ್.ಪುರ ಮಾರ್ಗವಾಗಿ ಶಿವಮೊಗ್ಗ ಕಡೆಗೆ ತೆರಳುತ್ತಿದ್ದ KSRTC ಬಸ್‌ನಲ್ಲಿ ಈ ಘಟನೆ ನಡೆದಿದೆ. ಮಾಹಿತಿ ಪ್ರಕಾರ, ಹಿರಿಯ ನಾಗರಿಕರಿಗಾಗಿ...

ಬೆಂಗಳೂರಿಗರಿಗೆ ಬಿಗ್ ಶಾಕ್! ಬೆಲೆ ಏರಿಕೆಗೆ ಕಾರಣ ಇಲ್ಲಿದೆ!

ಬೆಂಗಳೂರಿನ ಸಾಮಾನ್ಯ ಜನರಿಗೆ ಬೆಲೆ ಏರಿಕೆಯ ಬಿಸಿ ತಟ್ಟುತ್ತಿದೆ. ಕಳೆದ ವಾರವಷ್ಟೇ ಅಡುಗೆ ಎಣ್ಣೆಯ ಬೆಲೆ ಏರಿಕೆಯಾಗಿತ್ತು, ಅದರ ಬೆನ್ನಲ್ಲೇ ಈಗ ಅಕ್ಕಿ ದರವೂ ಗಗನಕ್ಕೇರಲು ಸಜ್ಜಾಗಿದೆ. ಕಚ್ಚಾ ವಸ್ತುಗಳ ಕೊರತೆ ಹಾಗೂ ರಫ್ತು ಪ್ರಮಾಣದಲ್ಲಿನ ಏರಿಕೆಯಿಂದಾಗಿ ಸಿಲಿಕಾನ್ ಸಿಟಿಯಲ್ಲಿ ಅಕ್ಕಿ ಬೆಲೆ ಏರಿಕೆಯಾಗಲಿದೆ ಎಂದು ವ್ಯಾಪಾರಿಗಳು ಮುನ್ಸೂಚನೆ ನೀಡಿದ್ದಾರೆ. ಇದರೊಂದಿಗೆ ಇಂಧನ, ಆಟೋ...
- Advertisement -spot_img

Latest News

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ – ಸೆ.24ರವರೆಗೆ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

ಕರ್ನಾಟಕದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆಯಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ...
- Advertisement -spot_img