Thursday, July 23, 2026

ರಾಜ್ಯ ಸರ್ಕಾರ

ಜಾತಿಗಣತಿಗೆ ತಾಂತ್ರಿಕ ದೋಷ CM ತವರಲ್ಲೇ ಕಳಪೆ ಸಾಧನೆ!

ಮೈಸೂರಿನಲ್ಲಿ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಶುಕ್ರವಾರ ಐದನೇ ದಿನಕ್ಕೆ ಕಾಲಿಟ್ಟಿತು. ನಗರ ಮತ್ತು ತಾಲ್ಲೂಕು ಕೇಂದ್ರಗಳಲ್ಲಿ ಸಮೀಕ್ಷೆ ಆರಂಭವಾದರೂ, ತಾಂತ್ರಿಕ ಸಮಸ್ಯೆಗಳು ಅಡ್ಡಿಯಾಗುತ್ತಿದ್ದವು. ಉಳಿದ ತಾಲ್ಲೂಕು ಕೇಂದ್ರಗಳಲ್ಲಿ ಮೊದಲ ದಿನದಿಂದಲೇ ನೆಟ್‌ವರ್ಕ್ ಸಮಸ್ಯೆ ತಲೆದೋರಿದ್ದರೆ, ನಗರ ಪ್ರದೇಶದಲ್ಲಿ ಆ್ಯಪ್‌ ಸರ್ವರ್ ಸ್ಪಂದಿಸದಿರುವುದೇ ದೊಡ್ಡ ತೊಂದರೆಯಾಯಿತು. ಪರಿಣಾಮವಾಗಿ, ಸಮೀಕ್ಷೆದಾರರು ಒಂದು ಮನೆಯಲ್ಲೇ ಗಂಟೆಗಳ...

BPL ಅನರ್ಹರೇ ಹುಷಾರ್‌.. ಹುಷಾರ್‌

ಇಡೀ ರಾಜ್ಯ ಜಾತಿಗಣತಿ ಗುಂಗಲ್ಲಿ ಇರುವಾಗಲೇ, ಆಪರೇಷನ್‌ ಬಿಪಿಎಲ್‌ ಕಾರ್ಡ್‌ ಶುರುವಾಗಿದೆ. ರಾಜ್ಯದಲ್ಲಿ 13 ಲಕ್ಷ ಅನರ್ಹ ಬಿಪಿಎಲ್‌ ಕಾರ್ಡ್‌ಗಳಿವೆಯಂತೆ. ಹೀಗಂತ ಉಡುಪಿಯಲ್ಲಿ ಆಹಾರ ಸಚಿವ ಕೆ.ಹೆಚ್‌. ಮುನಿಯಪ್ಪ ಹೇಳಿದ್ದಾರೆ. ಕೇಂದ್ರ ಸರ್ಕಾರ ನೀಡಿದ ಅಂಕಿ ಅಂಶ ಮತ್ತು ರಾಜ್ಯ ಸರ್ಕಾರವೇ ಕಲೆ ಹಾಕಿರುವ ಅಂಕಿ ಅಂಶಗಳನ್ನ ಇಟ್ಕೊಂಡು, ಪಡಿತರ ಕಾರ್ಡ್‌ ಪರಿಷ್ಕರಣೆ ಮಾಡಲಾಗುತ್ತಿದೆ. ಕರ್ನಾಟಕದಲ್ಲಿ...

DCM ಡಿ.ಕೆ. ಶಿವಕುಮಾರ್‌ ಖಾತೆಯಲ್ಲಿ ಬದಲಾವಣೆ

ಡಿಸಿಎಂ ಡಿ.ಕೆ. ಶಿವಕುಮಾರ್ ಹಾಗೂ ಪೌರಾಡಳಿತ ಸಚಿವ ರಹೀಂ ಖಾನ್‌ ಖಾತೆಯಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದೆ. ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್ ಈ ಸಂಬಂಧ‌ ಅಧಿಸೂಚನೆ ಹೊರಡಿಸಿದ್ದಾರೆ. ಈ ಮೊದಲು ಡಿ.ಕೆ. ಶಿವಕುಮಾರ್‌ಗೆ ಬೃಹತ್ ಮತ್ತು ಮಧ್ಯಮ ನೀರಾವರಿ, ಬಿಬಿಎಂಪಿ, ಬಿಡಿಎ, ಬಿಡಬ್ಲ್ಯುಎಸ್ಎಸ್‌ಬಿ, ಬಿಎಂಆರ್‌ಡಿಎ, ಬಿಎಂಆರ್‌ಸಿಎಲ್ ಸೇರಿದಂತೆ, ಬೆಂಗಳೂರು ನಗರ ಅಭಿವೃದ್ಧಿ ಜವಾಬ್ದಾರಿ ನೀಡಲಾಗಿತ್ತು. ಇದೀಗ...

ಆ 3 ಕಾರಣದಿಂದ ಜಾತಿಗಣತಿಗೆ ಸಿದ್ದರಾಮಯ್ಯ ಓಕೆ ಅಂದ್ರಾ?

ಸ್ವಪಕ್ಷದವರ ವಿರೋಧ ಎದುರಾದ್ರೂ, ಸಿಎಂ ಸಿದ್ದರಾಮಯ್ಯ ಮಾತ್ರ ಜಾತಿಗಣತಿಗೆ ಗ್ರೀನ್‌ ಸಿಗ್ನಲ್‌ ಕೊಟ್ಟಿದ್ದಾರೆ. ಸಿದ್ದರಾಮಯ್ಯರ ಇಂಥದ್ದೊಂದು ನಿಲುವಿನ ಬಗ್ಗೆ ಭಾರೀ ಚರ್ಚೆಯಾಗ್ತಿದೆ. ಈ ಮಧ್ಯೆ, ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಗಂಭೀರ ಆರೋಪ ಮಾಡಿದ್ದಾರೆ. ಸಿಎಂ ಸಿದ್ದರಾಮಯ್ಯ ಸರ್ಕಾರದ ಜಾತಿಗಣತಿ ಹಿಂದೆ ಮೂರು ಕಾರಣಗಳು ಇವೆಯಂತೆ. ನಂಬರ್.1 ಆಡಳಿತ ವೈಫಲ್ಯ, ನಂಬರ್ 2. ಒಳಜಗಳ...

ಅಧಿಕಾರಿಗಳ ಸಭೆಯಲ್ಲಿ ಸಿದ್ದು ಗರಂ ಆಗಿದ್ದೇಕೆ?

ಜಾತಿಗಣತಿಗೆ ಸಿಎಂ ಸಿದ್ದರಾಮಯ್ಯ, ಟಾರ್ಗೆಟ್‌ ಮತ್ತು ಡೆಡ್‌ಲೈನ್ ಫಿಕ್ಸ್‌ ಮಾಡಿದ್ದಾರೆ. ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಗುರುತಿಸಿರುವ ಒಟ್ಟು ಮನೆಗಳಲ್ಲಿ, ಪ್ರತಿ ದಿನ ಶೇಕಡ 10ರಷ್ಟು ಗುರಿ ಸಾಧಿಸಬೇಕು. ಅಕ್ಟೋಬರ್‌ 7ರೊಳಗೆ ಸಮೀಕ್ಷೆ ಪೂರ್ಣಗೊಳಿಸಬೇಕು. ಅವಧಿ ವಿಸ್ತರಣೆ ಮಾಡುವುದಿಲ್ಲ. ಗೈರಾಗುವ ಅಥವಾ ನಿರ್ಲಕ್ಷ್ಯ ತೋರುವ ಅಧಿಕಾರಿ, ಸಿಬ್ಬಂದಿ ಮೇಲೆ ಶಿಸ್ತು ಕ್ರಮ ಕೈಗೊಳ್ಳಬೇಕೆಂದು ಸಿಎಂ...

ಕಾವೇರಿ ಆರತಿಯಲ್ಲಿ ಡಿಕೆಶಿ ಶಪಥ

ಗಂಗಾರತಿ ಮಾದರಿಯಲ್ಲಿ ದಕ್ಷಿಣ ಭಾರತದಲ್ಲಿ ಮೊದಲ ಬಾರಿಗೆ, ಕರ್ನಾಟಕದ ಶ್ರೀರಂಗಪಟ್ಟಣದಲ್ಲಿ ಕಾವೇರಿ ಆರತಿ ವಿಜೃಂಬಣೆಯಿಂದ ನೆರವೇರಿದೆ. ಈ ಮೂಲಕ ಹೊಸ ಸಂಪ್ರದಾಯಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್‌ ಮುನ್ನುಡಿ ಬರೆದಿದ್ದಾರೆ. ಕೆಆರ್‌ಎಸ್‌ ಅಣೆಕಟ್ಟೆ ಬಳಿ ದೋಣಿ ವಿಹಾರ ಸ್ಥಳದಲ್ಲಿ ಪ್ರತಿಷ್ಠಾಪಿಸಲಾಗಿದ್ದ ಕಾವೇರಿ ಮೂರ್ತಿಗೆ, ಡಿಕೆಶಿ ಆರತಿ ಬೆಳಗೆ ಚಾಲನೆ ನೀಡಿದ್ರು. ಭಾನುಪ್ರಕಾಶ್‌ ಶರ್ಮಾ ನೇತೃತ್ವದಲ್ಲಿ 50ಕ್ಕೂ ಹೆಚ್ಚು...

ಜಾತಿಗಣತಿ ಎಷ್ಟು ಸಮೀಕ್ಷೆಯಾಗಿದೆ? ಎಷ್ಟು ಆಗ್ಬೇಕು? ಸಂಪೂರ್ಣ ವಿವರ

ಕರ್ನಾಟಕದಲ್ಲಿ ನಡೆಯುತ್ತಿರುವ ಜಾತಿಗಣತಿ ಸಮೀಕ್ಷೆ ಇಂದು ಐದನೇ ದಿನಕ್ಕೆ ಕಾಲಿಟ್ಟಿದೆ. ನಿಯೋಜಿತ ಶಿಕ್ಷಕರು ಮನೆಮನೆಗೆ ತೆರಳಿ ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಕೆಲವು ಕಡೆ ಇಂಟರ್‌ನೆಟ್ ಮತ್ತು ಸರ್ವರ್ ಸಮಸ್ಯೆಗಳಿಂದಾಗಿ ಕಾರ್ಯ ಕುಂಠಿತವಾಗಿದ್ದರೂ, ಶಿಕ್ಷಕರು ಬಗೆಬಗೆಯ ಪ್ರಯತ್ನ ಮಾಡಿ ಸಮೀಕ್ಷೆ ಮುಂದುವರೆಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಎಲ್ಲಾ ಜಿಲ್ಲಾಧಿಕಾರಿಗಳೊಂದಿಗೆ ಸಭೆ ನಡೆಸಿ ಹಲವು...

ಜಾತಿಗಣತಿ ಮಂದಗತಿ ಸಿದ್ದು ಖಡಕ್‌ ಸೂಚನೆ : ಸಭೆಯಲ್ಲಿ ಏನೆಲ್ಲಾ ಆಯ್ತು?

ಜಾತಿಜನಗಣತಿ ಸಮೀಕ್ಷೆ ರಾಜ್ಯಾದ್ಯಾಂತ ಶುರುವಾಗಿದೆ. ಸಮೀಕ್ಷೆ ಮಾಡಲು ತೆರಳಿದ ಶಿಕ್ಷಕರಿಗೆ ಒಂದಲ್ಲ, ಎರಡಲ್ಲ ಸಾಕಷ್ಟು ಸಮಸ್ಯೆಗಳು ಎದುರಾಗುತ್ತಿದ್ದವು. ಸರ್ವರ್‌ ಸಮಸ್ಯೆ, ನೆಟ್‌ವರ್ಕ್‌ ಸಮಸ್ಯೆ ಹೀಗೆ ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದ್ದರು. ಅಷ್ಟೆ ಅಲ್ಲದೆ ಶಿಕ್ಷಕರು ರಜಾ ಸಿಗುತ್ತಿಲ್ಲ ಎಂದು ಗೋಳಾಡುತ್ತಿದ್ದರು. ಜಾತಿಗಣತಿ ಸಮೀಕ್ಷೆ ಮಂದಗತಿಯಲಿ ಸಾಗುತ್ತಿದೆ ಎಂಬ ಆರೋಪಗಳು ಕೂಡ ಕೇಳಿಬಂದಿದ್ದವು. ಇದೀಗ ಸಾಮಾಜಿಕ ಮತ್ತು ಶೈಕ್ಷಣಿಕ...

ಹೊಸ ಮನೆ ಕಟ್ಟಿದವರಿಗೆ OC ವಿನಾಯಿತಿ

ಸ್ವಂತ ಮನೆ ಕಟ್ಟುವ ಕನಸು ಕಂಡವರಿಗೆ, ರಾಜ್ಯ ಸರ್ಕಾರ ಗುಡ್‌ ನ್ಯೂಸ್‌ ನೀಡಿದೆ. ಗ್ರೇಟರ್‌ ಬೆಂಗಳೂರು ವ್ಯಾಪ್ತಿಯಲ್ಲಿನ 1200 ಚದರಡಿ ವಿಸ್ತೀರ್ಣದವರೆಗಿನ ನಿವೇಶನಗಳಿಗೆ, ಒಸಿಯಿಂದ ವಿನಾಯಿತಿ ಕೊಡಲಾಗಿದೆ. ನಕ್ಷೆ ಮಂಜೂರಾತಿ ಪಡೆದು ನಿರ್ದಿಷ್ಟ ಮಹಡಿವರೆಗಿನ ಮಿತಿಯಲ್ಲಿ ನಿರ್ಮಾಣಗೊಂಡಿರುವ ಹಾಗೂ ಹೊಸದಾಗಿ ನಿರ್ಮಿಸುವ ವಾಸದ ಕಟ್ಟಡಗಳಿಗೆ, ವಿನಾಯಿತಿ ನೀಡುವ ತೀರ್ಮಾನ ಸಚಿವ ಸಂಪುಟ ಸಭೆಯಲ್ಲಿ ಕೈಗೊಳ್ಳಲಾಗಿದೆ. ಒಸಿಗೆ ವಿನಾಯಿತಿ...

ಶಾಸಕರ ವಿರುದ್ಧ ತೆರಿಗೆ ವಂಚನೆ ಆರೋಪ!

ಹಣ ಉಳಿಸೋಕೆ ಐಡಿಯಾ ಮಾಡಿದ ಕಾಂಗ್ರೆಸ್‌ ಶಾಸಕರೊಬ್ರು, ಪುದುಚೇರಿಯಲ್ಲಿ ಕಾರು ನೋಂದಣಿ ಮಾಡಿಸಿ ಸಿಕ್ಕಿಬಿದ್ದಿದ್ದಾರೆ. ನಾಗಠಾಣ ಮೀಸಲು ಕ್ಷೇತ್ರದ ಶಾಸಕ ವಿಠ್ಠಲ ಕಟಕದೊಂಡ ವಿರುದ್ಧ ಸರ್ಕಾರಕ್ಕೆ ತೆರಿಗೆ ಕಟ್ಟದ ಆರೋಪ ಕೇಳಿ ಬಂದಿದೆ. ಶಾಸಕ ವಿಠ್ಠಲ ಕಟಕದೊಂಡ ಬಳಸುತ್ತಿರುವ ಕಾರು, ಪುದುಚೇರಿಯ ವಿಲ್ಲೈನೂರ್‌ ಆರ್‌ಟಿಒ ಕಚೇರಿಯಲ್ಲಿ ನೋಂದಣಿಯಾಗಿದೆ. 2024ರ ಜುಲೈ 17ರಂದು ಖರೀದಿಸಿರುವ PY05 VE9836...
- Advertisement -spot_img

Latest News

Bantwala News: ಶಾಲಾ ಬಸ್ ಮೇಲೆ ಉರುಳಿ ಬಿದ್ದ ಮರ: 6 ವರ್ಷದ ಬಾಲಕಿ ಚಿರನ್ವಿ ಸಾ*

Mangaluru News: ಮಂಗಳೂರಿನ ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದ ಕಲ್ಲೆಟ್ಟಿ ದೈವಸ್ಥಾನದ ಬಳಿ ಅಪಘಾತ ಸಂಭವಿಸಿದ್ದು, 6 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ. ಶಾಲೆಯಿಂದ ಮನೆಗೆ ತೆರಳುತ್ತಿದ್ದ ಶಾಲಾ...
- Advertisement -spot_img