www.karnatakatv.net – chamarajanagar : ಕೇರಳ ರಾಜ್ಯದಲ್ಲಿ ಹೆಚ್ಚಾಗುತ್ತಿರುವ ಕೋವಿಡ್ ಸೋಂಕು ಹಾಗೂ ಡೆಲ್ಟ್ರಾ ವೈರಸ್ ಹಿನ್ನಲೆಯಲ್ಲಿ ಅಂತರಾಜ್ಯ ಗಡಿಯಲ್ಲಿ ತಪಾಸಣಾ ಕಾರ್ಯದ ಬಗ್ಗೆ ಜಿಲ್ಲಾಧಿಕಾರಿಗಳು ಖುದ್ದಾಗಿ ಶನಿವಾರ ವೀಕ್ಷಿಸಿದರು.
ಚಾಮರಾಜನಗರ ಜಿಲ್ಲಾಧಿಕಾರಿ ಡಾ.ಎಂ.ಆರ್. ರವಿ ಶನಿವಾರ ಬೆಳಗ್ಗೆ ಕರ್ನಾಟಕ ಕೇರಳ ಗಡಿ ಭಾಗ ಮೂಲೆಹೊಳೆ ಚಕ್ ಪೋಸ್ಟ್ ಗೆ ಬೇಟಿ ಕೊಟ್ಟು, ಅಲ್ಲಿ ಕೇರಳದಿಂದ ಬರುವ ವಾಹನಗಳ ತಪಾಸಣೆ ಮತ್ತು ಕೋವಿಡ್ ನೆಗಟಿವ್ ವರದಿ ತಪಾಸಣೆ ನಡೆಸುವ ಬಗ್ಗೆ ಆರೋಗ್ಯ ಇಲಾಖೆಯ ಸಿಬ್ಬಂದಿಗಳೊಂದಿಗೆ ವೀಕ್ಷಿಸಿದರು.
ಯಾವುದೇ ಕಾರಣಕ್ಕೂ ಕೋವಿಡ್ ನೆಗಟೀವ್ ವರದಿ ಇಲ್ಲದೆ ಯಾರನ್ನು ರಾಜ್ಯದೊಳಗೆ ಬಿಡದಂತೆ ಕಟ್ಟಪ್ಪಣೆ ಮಾಡಿದ ಜಿಲ್ಲಾಧಿಕಾರಿ ಡಾ.ಎಂ.ಆರ್. ರವಿ ಕೇರಳದಲ್ಲಿ ಕೋವಿಡ್ ಎರಡನೇ ಅಲೆ ಹೆಚ್ಚಾಗಿದ್ದು, ಅದರಲ್ಲೂ ಡೆಲ್ಟ್ರಾ ವೈರಸ್ ಕಾಣಿಸಿಕೊಂಡಿದ್ದರಿಂದ ಜಿಲ್ಲಾಡಳಿತದಿಂದ ಕಟ್ಟೆಚ್ಚರ ವಹಿಸಲಾಗಿದೆ ಈ ಹಿನ್ನಲೆಯಲ್ಲಿ ಮೂಲೆ ಹೊಳೆ ಚೆಕ್ ಪೋಸ್ಟ್ ನಲ್ಲಿ ಕರ್ತವ್ಯ ನಿರ್ವಹಿಸುವ ಸಿಬ್ಬಂದಿಗಳು ಎಚ್ಚರಿಕೆಯಿಂದ ಕಾರ್ಯ ನಿರ್ವಹಿಸಲು ಸೂಚಿಸಿದರು.
ಜಿಲ್ಲಾ ಆರೋಗ್ಯಾಧಿಕಾರಿ, ಗುಂಡ್ಲುಪೇಟೆ ತಹಸೀಲ್ದಾರ್ ರವಿಶಂಕರ್, ಪೊಲೀಸ್ ಇನ್ಸ್ ಪೆಕ್ಟರ್ ಮಹದೇವಸ್ವಾಮಿ ಮತ್ತು ಅರಣ್ಯ ಸಿಬ್ಬಂದಿಗಳಿದ್ದರು.