ಬೆಂಗಳೂರು: ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಭಾಸ್ಕರ್ ರಾವ್ ರವರು ಇಂದು ತಮ್ಮ ನಾಮಪತ್ರ ಸಲ್ಲಿಸಿದರು.
ಬೆಳಿಗ್ಗೆ ಸಂಗಮ್ ವೃತ್ತದಿಂದ (ಜೆಜೆನಗರ ಪೆÇೀಲಿಸ್ ಠಾಣೆ ಮುಂಭಾಗ) ಅಪಾರ ಜನಸ್ತೋಮದೊಂದಿಗೆ, ಮೆರವಣಿಗೆ ಮೂಲಕ ತೆರಳಿ ಗೂಡ್ ಶೆಡ್ ರಸ್ತೆಯಲ್ಲಿರುವ ಮತದಾರರ ನೋಂದಣಿ ಅಧಿಕಾರಿಗಳ ಕಚೇರಿಯಲ್ಲಿ ತಮ್ಮ ನಾಮಪತ್ರವನ್ನು ಸಲ್ಲಿಸಿದರು.
ಈ ಸಂದರ್ಭದಲ್ಲಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ಸಂಸದರಾದ ಪಿ.ಸಿ.ಮೋಹನ್, ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷ ಮಂಜುನಾಥ್, ಮಂಡಲ ಅಧ್ಯಕ್ಷ ಚನ್ನಕೇಶವ, ಕಾರ್ಯದರ್ಶಿ ಸುನಿಲ್ ವೆಂಕಟೇಶ್ ಹಾಗೂ ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದ ಪದಾಧಿಕಾರಿಗಳು ಇದ್ದರು. ಬಿಬಿಎಂಪಿ ಮಾಜಿ ಸದಸ್ಯರು ಭಾಗವಹಿಸಿದ್ದರು. ಮೆರವಣಿಗೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಪಾಲ್ಗೊಂಡಿದ್ದರು.
ಅತೀಕ್ ಅಹಮದ್ಗೆ ಭಾರತ ರತ್ನ ನೀಡಬೇಕು ಎಂದವನನ್ನ ಪಕ್ಷದಿಂದ ಉಚ್ಛಾಟಿಸಿದ ಕಾಂಗ್ರೆಸ್..
ಕಾಂಗ್ರೆಸ್ 5ನೇ ಪಟ್ಟಿ ರಿಲೀಸ್: ಸಿಎಂ ಕ್ಷೇತ್ರದಲ್ಲಿ ಕ್ಯಾಂಡಿಡೇಟ್ ಬದಲಾವಣೆ..