ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಚಂಪೈ ಸೊರೆನ್ ಬಿಜೆಪಿ ಸೇರ್ಪಡೆಯಾಗ್ತಾರಾ? ..
ಯಸ್.. ಇಂತಹದೊಂದು ಪ್ರಶ್ನೆ ಹಾಗೂ ಅನುಮಾನ ದೇಶದ ಜನರನ್ನು ಕಾಡುತ್ತಿದೆ. ಯಾಕಂದ್ರೆ, ಕಳೆದೊಂದು ತಿಂಗಳಿನಿಂದ ಜಾರ್ಖಂಡ್ನಲ್ಲಿ ಆಗ್ತಿರೋ ಬೆಳವಣಿಗೆಗಳನ್ನು ನೋಡ್ತಿದ್ರೆ, ಚಂಪೈ ಸೊರೆನ್ ಬಿಜೆಪಿ ಸೇರ್ತಾರೆ ಅಂತಾ ಹೇಳಾಗ್ತಿದೆ.
ಇತ್ತೀಚಿಗೆ ಮಾತನಾಡಿದ್ದ ಚಂಪೈ ಸೊರೆನ್, ಜಾರ್ಖಂಡ್ ಚುನಾವಣೆ ಘೋಷಣೆ ಆಗೋವರೆಗೆ ಕಾಯಿರಿ. ನಾನು ಯಾವುದೇ ನಿರ್ಧಾರವನ್ನು ತೆಗೆದುಕೊಳ್ಳಬಹುದು ಎಂದು ಹೇಳಿದ್ರು. ಅಲ್ಲದೇ, ನಾನು ಸಿಎಂ ಆಗಿದ್ದಾಗ ಸಾಕಷ್ಟು ನೋವುಗಳನ್ನು ಅನುಭವಿಸಿದೆ. ನಾನು ಮುಖ್ಯಮಂತ್ರಿ ಆಗಿದ್ದಾಗ ಜಾರಿಗೊಳಿಸಿದ್ದ ಎಲ್ಲಾ ಕಾರ್ಯಕ್ರಮಗಳನ್ನು ನನಗೆ ತಿಳಿಸದೇ ರದ್ದುಗೊಳಿಸಲಾಗಿದೆ. ಪ್ರಜಾಪ್ರಭುತ್ವದಲ್ಲಿ ಮತ್ತೊಬ್ಬ ವ್ಯಕ್ತಿಯು ಮುಖ್ಯಮಂತ್ರಿಯ ಕಾರ್ಯಕ್ರಮಗಳನ್ನು ರದ್ದುಗೊಳಿಸುವುದಕ್ಕಿಂತ ಅಪಾಯಕಾರಿ ಮತ್ತೊಂದಿಲ್ಲ ಎಂದಿದ್ದರು. ಅಲ್ಲದೇ, ನಾನು ಸಿಎಂ ಆಗಿದ್ದಾಗ ಶಾಸಕಾಂಗ ಪಕ್ಷದ ಸಭೆಯನ್ನು ಕರೆಯೋದಕ್ಕೂ ನನಗೆ ಅವಕಾಶ ನೀಡಲಿಲ್ಲ ಎನ್ನುವ ಮೂಲಕ ಜೆಜೆಎಂ ಪಕ್ಷವನ್ನು ತೊರೆಯುವ ಸೂಚನೆಯನ್ನು ನೀಡಿದ್ರು.
ಈ ಎಲ್ಲಾ ಬೆಳವಣಿಗೆ ಬೆನ್ನಲ್ಲೇ ಚಂಪೈ ಸೊರೆನ್, ಕೇಂದ್ರ ಗೃಹ ಸಚಿವ ಅಮಿತ್ ಶಾ, ಕೇಂದ್ರ ಗೃಹ ಸಚಿವ ಶಿವರಾಜ್ ಚೌಹಾಣ್, ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ ಅವರೊಂದಿಗೆ ಸಂಪರ್ಕದಲ್ಲಿದ್ದಾರೆ ಎಂದು ಹೇಳಲಾಗಿತ್ತು. ಅಲ್ಲದೇ, ಅವರು ದೆಹಲಿಯಲ್ಲಿ ಅಮಿತ್ ಶಾ ಜೊತೆ ಮಾತುಕತೆ ನಡೆಸಲಿದ್ದಾರೆ ಎಂದು ವರದಿಯಾಗಿತ್ತು. ಆದ್ರೆ, ದೆಹಲಿಯಲ್ಲಿ ಮಾತನಾಡಿರುವ ಚಂಪೈ ಸೊರೆನ್, ನಾನು ಸದ್ಯಕ್ಕೆ ಜೆಜೆಎಂ ತೊರೆಯುವುದಿಲ್ಲ. ಇಂತಹ ಗಾಳಿ ಸುದ್ದಿಗಳನ್ನು ನಂಬಬೇಡಿ ಎಂದಿದ್ದಾರೆ.
ಭೂ ಹಗರಣಕ್ಕೆ ಸಂಬಂಧಿಸಿದಂತೆ ಜೆಜೆಎಂ ಹೇಮಂತ್ ಸೊರೆನ್ ಬಂಧನವಾಗಿದ್ರು. ನಂತರ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ರು. ಈ ವೇಳೆ ಚಂಪೈ ಸೊರೆನ್ ಜಾರ್ಖಂಡ್ ಮುಖ್ಯಮಂತ್ರಿಯಾಗಿದ್ರು. ಸುಪ್ರೀಂಕೋರ್ಟ್ನಿಂದ ಜಾಮೀನು ಪಡೆದು ಜೈಲಿನಿಂದ ಹೊರಬಂದ ನಂತರ ಹೇಮಂತ್ ಸೊರೆನ್ ಮತ್ತೆ ಸಿಎಂ ಆಗಿ ಪದಗ್ರಹಣ ಮಾಡಿದ್ರು.
ಜಾರ್ಖಂಡ್ ಮಾಜಿ ಸಿಎಂ ಬಿಜೆಪಿಗೆ? ಚುನಾವಣೆಗೆ ಮುನ್ನವೇ ಆಪರೇಷನ್?
- Advertisement -
- Advertisement -