ಮೈಸೂರು ದಸರಾ ಜಂಬೂಸವಾರಿಗೆ ಕ್ಷಣಗಣನೆ ಆರಂಭವಾಗಿದೆ. 22 ರಂದು ದಸರಾಗೆ ವಿದ್ಯುಕ್ತ ಚಾಲನೆ ಕೂಡ ಕೊಡಲಾಗಿದೆ. ಬೆಟ್ಟದಲ್ಲಿ ಸೂತಕದ ಛಾಯೆಯಂತೆ ಇಂದು ಚಾಮುಂಡಿಬೆಟ್ಟದ ಚಾಮುಂಡೇಶ್ವರಿದೇಗುಲದ ಅರ್ಚಕ ರಾಜು ಹೃದಯಾಘಾತದಿಂದ ನಿಧನರಾಗಿದ್ದಾರೆ. ಅರ್ಚಕ ರಾಜು ನಿಧನದ ಕಾರಣದಿಂದ ಸದ್ಯ ಚಾಮುಂಡೇಶ್ವರಿ ದೇಗುಲದ ಗರ್ಭಗುಡಿಗೆ ತೆರೆ ಎಳೆಯಲಾಗಿದೆ. ರಾತ್ರಿವರೆಗೂ ಮೂಲ ವಿಗ್ರಹದ ದರ್ಶನ ಇರುವುದಿಲ್ಲ.
ದಸರಾಗೆ ಚಾಲನೆ ದೊರೆತ ಮರುದಿನವೇ ಅರ್ಚಕರ ನಿಧನವಾಗಿರುವುದರಿಂದ ಧಾರ್ಮಿಕ ಕಾರ್ಯಕ್ರಮಗಳಳಿಗೆ ಅಡಚೆಣೆ ಉಂಟಾಗಿದೆ ಮತ್ತು ಚಾಮುಂಡಿ ಬೆಟ್ಟದಲ್ಲಿ ಸೂತಕದ ಛಾಯೆ ಆವರಿಸಿದೆ. ಇನ್ನು ದಸರಾ ಉತ್ಸವಕ್ಕೆ ಇದರಿಂದ ಯಾವುದೇ ಅಡಚಣೆ ಆಗುವುದಿಲ್ಲ. ವಿಧಿವಿಧಾನಗಳ ನಂತರ ಗರ್ಭಗುಡಿ ಬಾಗಿಲು ತೆರೆಯಲಿದೆ. ನವರಾತ್ರಿ ಪೂಜೆಗಳು ಮಾಮೂಲಿಯಂತೇ ನಡೆಯಲಿವೆ ಎಂದು ದೇಗುಲದ ಮೂಲಗಳು ತಿಳಿಸಿವೆ.
ದಸರಾಗೆ ಚಾಲನೆ ದೊರೆತ ಮರುದಿನವೇ ಚಾಮುಂಡೇಶ್ವರಿ ದೇಗುಲದ ಅರ್ಚಕರು ನಿಧನರಾಗಿರುವ ಬಗ್ಗೆ ಇದೀಗ ಸಾಮಾಜಿಕ ಮಾಧ್ಯಮಗಳಲ್ಲೂ ವಿವಿಧ ರೀತಿಯ ಚರ್ಚೆ ಆರಂಭವಾಗಿದೆ. ನಿಧನಾಗಿರುವ ಅರ್ಚಕ ರಾಜು, ಕೆಲ ವರ್ಷಗಳಿಂದ ದೇಚಸ್ಥಾನದಲ್ಲಿ ಶಿವನ ಅರ್ಚಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ರಾಜು ಅವರ ಅಂತ್ಯ ಸಂಸ್ಕಾರದ ನಂತರ ಸಾರ್ವಜನಿಕರಿಗೆ ದೇವಿ ದರ್ಶನಕ್ಕೆ ಅನುವು ಮಾಡಿಕೊಡಲಾಗುತ್ತದೆ ಎಂದು ದೇವಸ್ಥಾನದ ಆಡಳಿತ ಮಂಡಳಿ ತಿಳಿಸಿದೆ.
ವರದಿ: ರಂಜಿತ ರೇವಣ್ಣ ನಾಟನಹಳ್ಳಿ