Sunday, September 8, 2024

Latest Posts

Charanjeet Singh : ಪ್ರಧಾನ ಮಂತ್ರಿಯ ರಕ್ಷಣೆಗಾಗಿ ನನ್ನ ಪ್ರಾಣವನ್ನೇ ಕೊಡುತ್ತೇನೆ

- Advertisement -

ಚಂಡೀಗಢ, ಜನವರಿ 06: ಭದ್ರತಾ ಲೋಪ ಹಿನ್ನೆಲೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ಸುಮಾರು 15-20 ನಿಮಿಷಗಳ ಕಾಲ ಪ್ರಧಾನಿ ಪಂಜಾಬ್‌ನ ಫ್ಲೈ ಓವರ್‌ನಲ್ಲಿ ಸಿಲುಕಿರುವ ಘಟನೆಯು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಈ ವಿಚಾರವು ರಾಜಕೀಯ ಬಣ್ಣವನ್ನು ಪಡೆಯುತ್ತಿದೆ.ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪಂಜಾಬ್‌ ಮುಖ್ಯಮಂತ್ರಿ ಚರಣ್‌ಜೀತ್‌ ಸಿಂಗ್‌ ಪ್ರಧಾನ ಮಂತ್ರಿಯ ರಕ್ಷಣೆಗಾಗಿ ನಾನು ನನ್ನ ಪ್ರಾಣವನ್ನೇ ಕೊಡುತ್ತೇನೆ ಎಂದು ತಿಳಿಸಿದ್ದಾರೆ. ಈ ಬಗ್ಗೆ ವಿಷಾದ ವ್ಯಕ್ತಪಡಿಸಿದ ಪಂಜಾಬ್‌ ಸಿಎಂ, “ಪ್ರಧಾನಿಯನ್ನು ರಕ್ಷಿಸಲು ನಾನು ನನ್ನ ಪ್ರಾಣವನ್ನು ತ್ಯಜಿಸುತ್ತೇನೆ. ಆದರೆ ನಿಜವಾಗಿಯೂ ಹೇಳುವುದಾದರೆ ಯಾವುದೇ ಭದ್ರತಾ ಲೋಪವಾಗಿಲ್ಲ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಸುರಕ್ಷಿತವಾಗಿದ್ದರು, ಅವರಿಗೆ ಯಾವುದೇ ಅಪಾಯವಾಗಿಲ್ಲ,” ಎಂದು ಸ್ಪಷ್ಟಪಡಿಸಿದ್ದಾರೆ. ಇನ್ನು ಈ ರ್‍ಯಾಲಿಯನ್ನು ಭದ್ರತೆ ವೈಫಲ್ಯ ಆರೋಪ ಮಾಡಿ ರದ್ದು ಮಾಡಿ ಪ್ರಧಾನಿ ವಾಪಾಸ್‌ ಹೋಗಿರುವುದಕ್ಕೆ ಚನ್ನಿ ಸೇರಿದಂತೆ ಕಾಂಗ್ರೆಸ್‌ ಮುಖಂಡರು ವ್ಯಂಗ್ಯವಾಡಿದ್ದಾರೆ. “70,000 ಕುರ್ಚಿಗಳನ್ನು ಜೋಡಿಸಲಾಗಿದೆ ಆದರೆ 700 ವ್ಯಕ್ತಿಗಳು ಮಾತ್ರ ಬಂದಿದ್ದರು. ಅದಕ್ಕೆ ಏನು ಮಾಡುವುದು,” ಎಂದು ವ್ಯಂಗ್ಯವಾಗಿ ಪ್ರಶ್ನಿಸಿದ್ದಾರೆ.

- Advertisement -

Latest Posts

Don't Miss