ಡಿಎಂಕೆ ಆಡಳಿತದಲ್ಲಿ ತಮಿಳುನಾಡಿನಲ್ಲಿ ಕಾನೂನು, ಸುವ್ಯವಸ್ಥೆ ಹದಗೆಟ್ಟಿದೆ. ರಾಜ್ಯದಲ್ಲಿ ಡಿಎಂಕೆ ಪಕ್ಷವನ್ನು ಅಧಿಕಾರದಿಂದ ಕಿತ್ತೊಗೆಯುವವರೆಗೂ ಚಪ್ಪಲಿ ಧರಿಸುವುದಿಲ್ಲ ಅಂತ ತಮಿಳುನಾಡು ಬಿಜೆಪಿ ಘಟಕದ ಅಧ್ಯಕ್ಷ ಕೆ.ಅಣ್ಣಾಮಲೈ ಶಪಥ ಮಾಡಿದ್ದಾರೆ.
ಇನ್ನು ‘ಅಣ್ಣಾ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ಕಿರುಕುಳ ನಡೆದಿರುವುದನ್ನು ಖಂಡಿಸಿ ಪ್ರತಿಭಟನೆಯ ಭಾಗವಾಗಿ ಶುಕ್ರವಾರ ತಮ್ಮ ನಿವಾಸದ ಮುಂದೆ ಆರು ಬಾರಿ ಛಡಿಯೇಟು ಹೊಡೆದುಕೊಳ್ಳುತ್ತೇನೆ’ ಎಂದಿದ್ರು.
ಇನ್ನು ಕೊಯಮತ್ತೂರಿನಲ್ಲಿ ಶನಿವಾರ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿ, ಡಿಎಂಕೆಯನ್ನು ಅಧಿಕಾರದಿಂದ ಕಿತ್ತೊಗೆಯಲು ಇದೇ ಡಿ.26ರಿಂದ 48 ದಿನಗಳ ಕಾಲ ಉಪವಾಸ ಸತ್ಯಾಗ್ರಹ ನಡೆಸುತ್ತೇನೆ. ಈ ಕೆಲಸ ನೆರವೇರಿಸಲು ಹೆಚ್ಚಿನ ಶಕ್ತಿ ನೀಡಲಿ ಅಂತ ರಾಜ್ಯದಲ್ಲಿ ಆರು ಮುರುಗ ದೇವಾಲಯಗಳಿಗೂ ಭೇಟಿ ನೀಡುತ್ತೇನೆ’ ಎಂದರು.
ಅಣ್ಣಾ ವಿಶ್ವವಿದ್ಯಾಲಯದಲ್ಲಿ ನಡೆದ ಲೈಂಗಿಕ ಕಿರುಕುಳದಲ್ಲಿ ಸಂತ್ರಸ್ತೆಯ ಹೆಸರನ್ನು ಬಹಿರಂಗಗೊಳಿಸುವ ಮೂಲಕ ಎಫ್ಐಆರ್ ಸೋರಿಕೆ ಮಾಡಿದ್ದಕ್ಕೆ ಯಾರು ಹೊಣೆ? ನಿಜವಾದ ಆರೋಪಿ ಯಾರು ಎಂಬುದೇ ಅನುಮಾನ ಹುಟ್ಟಿಸಿದೆ. ಅತ್ಯಂತ ಕೆಟ್ಟದಾಗಿ ಎಫ್ಐಆರ್ ಬರೆದಿದ್ದು, ಸೋರಿಕೆಗೆ ಹೊಣೆಯಾದವರ ಬಗ್ಗೆ ಪೊಲೀಸರು ಈಗಲಾದರೂ ಮಾತನಾಡಬೇಕು’ ಅಂತ ಒತ್ತಾಯಿಸಿದರು.
ಇನ್ನು ಚಪ್ಪಲಿ ಧರಿಸಲ್ಲ ಅಂತ ಘೋಷಣೆ ಮಾಡಿದ ಅಣ್ಣಾಮಲೈ ಸುದ್ದಿಗೋಷ್ಠಿ ಬಳಿಕ ಶೂಗಳನ್ನು ಕಳಚಿಟ್ಟರು.