State News:
Feb:28:ರಾಜ್ಯದಲ್ಲಿ ಸರಕಾರಿ ನೌಕರರು 7ನೇ ವೇತನ ಆಯೋಗದ ವರದಿ ಜಾರಿಗೆ ಪಟ್ಟು ಹಿಡಿದು ನಾಳೆ ಅಂದರೆ ಮಾರ್ಚ್ 1ರಂದು ಮುಷ್ಕರ ನಡೆಸುತ್ತಿರುವುದಾಗಿ ಎಚ್ಚರಿಕೆ ನೀಡಿರುವುದರಿಂದ ಮುಖ್ಯ ಮಂತ್ರಿ ಬಸವರಾಜ್ ಬೊಮ್ಮಾಯಿ ತುರ್ತು ಸಭೆ ಕರೆದಿದ್ದಾರೆ. ಇಂದು ರಾತ್ರಿ ಮುಖ್ಯಮಂತ್ರಿ ಬೊಮ್ಮಾಯಿ ಅವರು ಅಧಿಕಾರಿಗಳ ತರ್ತು ಸಭೆ ಕರೆದಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ರಾತ್ರಿ 9.30ಕ್ಕೆ ಅಧಿಕಾರಿಗಳು ಹಾಗೂ ನೌಕರರ ಸಂಘದ ಪದಾಧಿಕಾರಿಗಳ ಸಭೆ ಕರೆಯಲಾಗಿದೆ.




