- Advertisement -
ಪ್ರಧಾನಿ ನರೇಂದ್ರ ಮೋದಿಯವರ ಹರ್ ಘರ್ ತಿರಂಗಾ ಕರೆಗೆ ದೇಶದ 40ಕೋಟಿ ಜನ ತಿರಂಗ ಹಾರಿಸಿದ್ದಾರೆ. ಸ್ವಾತಂತ್ರ್ಯ ಅಮೃತ ಮಹೋತ್ಸವ ಹಿನ್ನೆಲೆ ನಗರದ ಮಲ್ಲೇಶ್ವರಂನ 18ನೇ ಅಡ್ಡ ರಸ್ತೆಯ ಮೈದಾನದಲ್ಲಿ ಮಧ್ಯರಾತ್ರಿ 12 ಗಂಟೆಗೆ ಧ್ವಜಾರೋಹಣ ನೆರವೇರಿಸಿ ಸಿಎಂ ಬಸವರಾಜ ಬೊಮ್ಮಾಯಿ ಮಾತನಾಡಿದರು. ಈ ದೇಶದಲ್ಲಿ ಸ್ವಾತಂತ್ರ್ಯ ಕಿಚ್ಚು ಹಚ್ಚಿದ್ದು ಮೊದಲು ರೈತರು.
ಇವತ್ತಿನ ದಿನ ನಾಡಿನ ಜನ ಮಲಗೋದಿಲ್ಲ. ಎಲ್ಲೆಲ್ಲೂ ಸಂಭ್ರಮದ ವಾತಾವರಣ ಇದೆ. ರಾಜ್ಯದಲ್ಲಿ, ದೇಶದಲ್ಲಿ ಸಾವಿರಾರು ಜನ ಅನಾಮಧೇಯ ಹೋರಾಟಗಾರರಿದ್ದಾರೆ. ಅವರನ್ನೆಲ್ಲಾ ಈ ಸಂದರ್ಭದಲ್ಲಿ ಸ್ಮರಿಸುವುದು ನಮ್ಮ ಕರ್ತವ್ಯ ಎಂದು ಹೇಳಿದರು.
- Advertisement -