ಸುಪ್ರೀಂಕೋರ್ಟ್ ಹಿರಿಯ ವಕೀಲ ಫಾಲಿ ನಾರಿಮನ್ ನಿಧನಕ್ಕೆ ಸಿಎಂ ಸಂತಾಪ

National News: ಸುಪ್ರೀಂಕೋರ್ಟ್ ಹಿರಿಯ ವಕೀಲ ಪಾಲಿ ನಾರಿಮನ್ ಇಂದು ನಿಧನರಾಗಿದ್ದು, ಸಿಎಂ ಸಿದ್ದರಾಮಯ್ಯ ಸಂತಾಾಪ ಸೂಚಿಸಿದ್ದಾರೆ.

95 ವರ್ಷದ ಫಾಲಿ ನಾರಿಮನ್, ದೆಹಲಿಯಲ್ಲಿ ಇಂದು ನಿಧನರಾಗಿದ್ದಾರೆ. 1971ರಿಂದ ಸುಪ್ರೀಂಕೋರ್ಟ್ ವಕೀಲರಾಗಿ ಸೇವೆ ಸಲ್ಲಿಸಲು ಪ್ರಾರಂಭಿಸಿದ ಫಾಲಿ ನಾರಿಮನ್‌ಗೆ, 1991ರಲ್ಲಿ ಕೇಂದ್ರ ಸರ್ಕಾರ ಪದ್ಮಭೂಷಣ, 2007ರಲ್ಲಿ ಪದ್ಮವಿಭೂಷಣ ಪ್ರಶಸ್ತಿ ನೀಡಿ ಗೌರವಿಸಿತ್ತು. ಇನ್ನು ಫಾಲಿ ನಾರಿಮನ್‌ ಕಾವೇರಿ ಹೋರಾಟದ ಸಂದರ್ಭದಲ್ಲಿ, ಕನ್ನಡಿಗರ ಪರ ವಾದ ಮಂಡಿಸಿದ್ದರು.

ಇನ್ನು ಪಾಲಿ ನಾರಿಮನ್‌ ನಿಧನಕ್ಕೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು, ಸಿಎಂ ಸಿದ್ದರಾಮಯ್ಯ ಸೇರಿ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.

ಫಾಲಿ ನಾರಿಮನ್ ನಿಧನದ ಸುದ್ದಿ ಕೇಳಿ ದುಃಖವಾಗಿದೆ. ಕೃಷ್ಣಾ ಮತ್ತು ಕಾವೇರಿ ನದಿ ನೀರಿನ ಸಮಸ್ಯೆ ವೇಳೆ, ದಶಕಗಳ ಕಾಲ ಕರ್ನಾಟಕದ ಹಿತಾಸಕ್ತಿಗಳನ್ನು ಪ್ರತಿನಿಧಿಸುವಲ್ಲಿ ಪ್ರಮುಖವಾಗಿದೆ. ಅವರ ಕುಟುಂಬಸ್ಥರಿಗೆ, ಹಿತೈಷಿಗಳಿಗೆ ಸಂತಾಪಗಳು. ನಾರಿಮನ್ ಸರ್ ನೀವು ಎಂದೆಂದಿಗೂ ಕನ್ನಡಿಗರ ಹೃದಯದಲ್ಲಿರುತ್ತೀರಿ.

ಜೂನಿಯರ್ ವಿರಾಟ್ ಆಗಮನ: ಅಕಾಯ್ ಎಂದು ನಾಮಕರಣ

ದಂತ ಚಿಕಿತ್ಸೆ ಪಡೆಯುವ ಸಂದರ್ಭದಲ್ಲಿ ಸಾವನ್ನಪ್ಪಿದ ಮಧುಮಗ..

ಕ್ಲಾಸಿನಲ್ಲಿ ಮೊಬೈಲ್ ಬಳಕೆ ನಿಷೇಧ ಮಾಡಿದ ಬ್ರಿಟನ್ ಪ್ರಧಾನಿ ರಿಷಿ ಸುನಕ್

About The Author