Political News: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು, ಹಾಸನಕ್ಕೆ ಆಗಮಿಸಿ, ಮತದಾನ ಮಾಡಿದ್ದಾರೆ. ದೇವೇಗೌಡರಿಗೆ ಅವರ ಪತ್ನಿ ಚೆನ್ನಮ್ಮ ಕೂಡ ಸಾಥ್ ಕೊಟ್ಟಿದ್ದಾರೆ. ಇದಕ್ಕೂ ಮುನ್ನ ದೇವಸ್ಥಾನಕ್ಕೆ ತೆರಳಿದ ದೇವೇಗೌಡರು, ರಾಾಜ್ಯದಲ್ಲಿ ಮೈತ್ರಿ ಸರ್ಕಾರ ಜಯಗಳಿಸಲಿ ಎಂದು ಪ್ರಾರ್ಥಿಸಿ, ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ ಮೈಸೂರಿನ ಸಿದ್ದರಾಮಯ್ಯನ ಹುಂಡಿ ಮತಗಟ್ಟೆಗೆ ಆಗಮಿಸಿ, ಮತ ಚಲಾಯಿಸಿದರು. ಮಗ ಡಾ.ಯತೀಂದ್ರ ಕೂಡ ಸಿಎಂ ಸಿದ್ದರಾಮಯ್ಯಗೆ ಸಾಥ್ ಕೊಟ್ಟಿದ್ದಾರೆ.
ರಾಮನಗರ ಜಿಲ್ಲೆಯ ಬಿಡದಿ ಸಮೀಪದ ಕೇತಿಗಾನಹಳ್ಳಿ ಗ್ರಾಮದ ಮತಗಟ್ಟೆಯಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಕುಟುಂಬ ಸಮೇತವಾಗಿ ಮತದಾನ ಮಾಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಕುಮಾರಸ್ವಾಮಿ, ಪ್ರಜಾಪ್ರಭುತ್ವದ ಗೆಲುವಿಗಾಗಿ ಮತದ ಹಕ್ಕು ಚಲಾಯಿಸಿದ್ದು ನನಗೆ ಬಹಳ ಸಂತೋಷ ತಂದಿದೆ. ಪ್ರತಿಯೊಬ್ಬರೂ ತಪ್ಪದೇ ಮತದಾನ ಮಾಡಬೇಕು ಎನ್ನುವುದು ನನ್ನ ಕಳಕಳಿ ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.
120 ದಿನದಲ್ಲಿ ನ್ಯಾಯ ಕೊಡಸ್ತಿವಿ, ನಿರಂಜನಯ್ಯ ಕುಟುಂಬದ ಜೊತೆಗಿದ್ದೇವೆ: ಸಿಎಂ ಸಿದ್ಧರಾಮಯ್ಯ