Friday, June 20, 2025

Latest Posts

ಅಪ್ಪು ಹೆಸರಿನಲ್ಲಿ ಸ್ಮಾರಕಕ್ಕೆ ಸಿಎಂ ಗ್ರೀನ್ ಸಿಗ್ನಲ್..!

- Advertisement -

ಅಪ್ಪು ಹೆಸರಿನಲ್ಲಿ ಸ್ಮಾರಕಕ್ಕೆ ಸಿಎಂ ಗ್ರೀನ್ ಸಿಗ್ನಲ್

ಬೆಂಗಳೂರಿನ ರಿಂಗ್ ರಸ್ತೆಗೆ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಹೆಸರಿಡಲಾಗಿದೆ.
ಅಪ್ಪುಹೆಸರಲ್ಲಿ ಸ್ಮಾರಕ ಮಾಡಬೇಕು ಅನ್ನೋ ಎಲ್ಲರ ಆಸೆ. ಅವರ ಸಮಾಧಿ ಬಳಿಯೇ ಸ್ಮಾರಕ ಮಾಡುತ್ತೇವೆ. ಸಮಾಧಿ ಸ್ಥಳದಲ್ಲಿ ಅವರ ಮತ್ತು ಡಾ. ರಾಜ್​ಕುಮಾರ್​ ಜೀವನ ಚರಿತ್ರೆ ಹೇಳುವಂತಹ ಅದ್ಭುತವಾದ ಸ್ಮಾರಕವನ್ನು ನಮ್ಮ ಸರ್ಕಾರದ ವತಿಯಿಂದ ನಿರ್ಮಾಣ ಮಾಡುತ್ತೇವೆ.

ಈ ಕೆಲಸ ನಮ್ಮ ಸರ್ಕಾರದ ವತಯಿಂದ ನಾವು ಖಂಡಿತವಾಗಿ ಆಗುತ್ತದೆ ಎಂದರು. ವೇದಿಕೆಯಲ್ಲಿ ಅಪ್ಪು ಬಗ್ಗೆ ಹಾಡಿ ಹೊಗಳಿದ ಸಿಎಂ ಬಸವರಾಜ್ ಬೊಮ್ಮಾಯಿ

ಅಪ್ಪು ಬಹಳ ಚಿಕ್ಕ ವಯಸ್ಸಿನಲ್ಲೇ ಬಹಳಷ್ಟು ಸಾಧನೆ ಮಾಡಿದ. ಅಪಾರವಾದ ಜನರನ್ನು ಸಂಪಾದನೆ ಮಾಡಿದ್ದಾನೆ, ಅಪ್ಪು ಅನೇಕ ಜನರಿಗೆ ಸ್ಪೂರ್ತಿ ಎಂದು ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.

- Advertisement -

Latest Posts

Don't Miss