- Advertisement -
Film news:
ಆಗಸ್ಟ್ 10ರಂದು ದೆಹಲಿಯ ಜಿಮ್ನಲ್ಲಿ ವರ್ಕೌಟ್ ಮಾಡುವಾಗ ರಾಜು ಶ್ರೀವಾತ್ಸವ್ ಗೆ ಹೃದಯಾಘಾತವಾಯಿತು. ನಂತರ ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಯಿತು. ನಿಜ ಹಾಸ್ಯ ನಟ, ಸ್ಟ್ಯಾಂಡಪ್ ಕಾಮಿಡಿಯನ್ ರಾಜು ಶ್ರೀವಾತ್ಸವ್ ಆಸ್ಪತ್ರೆ ಸೇರಿ ಒಂದು ವಾರ ಕಳೆದಿದೆ. ಆದರೆ, ಅವರ ಆರೋಗ್ಯ ಸ್ಥಿತಿ ಸುಧಾರಿಸುತ್ತಿಲ್ಲ. ಅವರು ದಿನ ಕಳೆದಂತೆ ಕುಗ್ಗುತ್ತಿದ್ದಾರೆ. ಈಗ ಅವರ ಮೆದುಳು ಕೆಲಸ ಮಾಡುವುದನ್ನು ನಿಲ್ಲಿಸಿದೆ ಎನ್ನಲಾಗುತ್ತಿದೆ. ಈ ವಿಚಾರ ಕೇಳಿ ರಾಜು ಶ್ರೀವಾತ್ಸವ್ ಫ್ಯಾನ್ಸ್ ಆತಂಕಗೊಂಡಿದ್ದಾರೆ. ಪವಾಡ ನಡೆದು ಅವರು ಬದುಕಿ ಬರಲಿ ಎಂದು ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ. ಅವರ ಆರೋಗ್ಯದ ಬಗ್ಗೆ ಅಧಿಕೃತ ಅಪ್ಡೇಟ್ ಸಿಗಲಿ ಎಂದು ಫ್ಯಾನ್ಸ್ ಬಯಸುತ್ತಿದ್ದಾರೆ.
‘ಕಂಬ್ಳಿಹುಳ’ ಸಿನಿಮಾದ ಮೊದಲ ಹಾಡು ಬಿಡುಗಡೆ: ಕೇಳುಗರ ಮೋಡಿ ಮಾಡಿದ ‘ಜಾರೀ ಬಿದ್ದರೂ ಯಾಕೀ ನಗು’ ಹಾಡು
- Advertisement -