Saturday, July 27, 2024

Latest Posts

ರಾಜ್ಯದ ಸಾಮಾನ್ಯ ಜನರ ಬದಕು ಅಸುರಕ್ಷಿತವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ

- Advertisement -

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಾತನಾಡಿದ್ದು, ರಾಮೇಶ್ವರಂ ಕೆಫೆ ಬ್ಲಾಸ್ಟ್‌ನ್ನು ಕಾಂಗ್ರೆಸ್ ಸರ್ಕಾರ ಗಂಭೀರವಾಗಿ ತೆಗೆದುಕೊಂಡಿಲ್ಲವೆಂದು ಆರೋಪಿಸಿದ್ದಾರೆ.

ನಿನ್ನೆ ನಡೆದ ಘಟನೆಯನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿಲ್ಲ. ರಾಜ್ಯದಲ್ಲಿ ಇಸ್ಲಾಮಿಕ್ ಮೂಲಭೂತವಾದ ನಡೆಯುತ್ತಿದೆ. ಎಸ್ ಡಿಪಿ ಮತ್ತು ಪಿಎಫ್ ಐ ಮೇಲಿನ ಕೇಸ್ ವಾಪಸು ಪಡೆದು ಕಾಂಗ್ರೆಸ್ ಸರ್ಕಾರ ಅವರ ಪರವಾಗಿ ಇದೆ ಅಂತ ತೋರಿಸಿದ್ದರು. ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದವರ ಮೇಲೆ ಯಾವುದೇ ಕ್ರಮ ಇಲ್ಲ. ರಾಜ್ಯದ ಸಾಮಾನ್ಯ ಜನರ ಬದಕು ಅಸುರಕ್ಷಿತವಾಗಿದೆ. ಕಟರ್ ಇಸ್ಲಾಮಿಕ್ ಮೂಲಭೂತವಾದಿಗಳಿಗೆ ರಾಜ್ಯ ಸರ್ಕಾರ ಸಹಕಾರ ನೀಡುತ್ತಿದೆ. ಇದಕ್ಕೆ ನೇರವಾಗಿ ಸಿಎಂ ಸಿದ್ದರಾಮಯ್ಯ ಅವರೇ ಕಾರಣ ಎಂದು ಜೋಶಿ ಆರೋಪಿಸಿದ್ದಾರೆ.

ಎಲ್ಲಾ ಗಾಯಗಳುಗಳ ಆರೋಗ್ಯ ಬೇಗ ಸುಧಾರಿಸಲಿ. ಉಗ್ರರಿಗೆ ಕರ್ನಾಟಕ ಸ್ವರ್ಗವಾಗಿದೆ. ಮೂಲಭೂತವಾದಿಗಳಿಗೆ ಮತ್ತು ಉಗ್ರರಿಗೆ ಇದು ಸುರಕ್ಷಿತ ಅನ್ನಿಸುತ್ತಿದೆ. ಈ ನಾನ್ಸೆನ್ಸ್ ಅಪ್ರೋಚ್ ನನ್ನು ಸಿದ್ದರಾಮಯ್ಯ ನಿಲ್ಲಿಸಬೇಕು. ಕೆಲವು ಪೊಲೀಸ್ ಇಲಾಖೆ ರಾಜ್ಯಗಳಲ್ಲಿ ಉಗ್ರವಾದಿಗಳಿಗೆ ಸೇಫ್ ಹೆವೆನ್ ಕೊಟ್ಟಿದ್ದಾರೆ. ತುಷ್ಟಿಕರಣ ನೀತಿಯಿಂದ ಈ ರೀತಿಯಲ್ಲಿ ಘಟನೆ ಆಗುತ್ತಿವೆ. ನಾಸಿರ್ ಹುಸೇನ್ ಗೆ ನಾಚಿಕೆ ಆಗಬೇಕು. ಪ್ರಕರಣವನ್ನು ಎನ್ ಐಎ ತನಿಖೆ ನೀಡಲು ನನ್ನ ಆಗ್ರಹವಿದೆ ಎಂದು ಪ್ರಹ್ಲಾದ್ ಜೋಶಿ ಹೇಳಿದ್ದಾರೆ.

ಯಾವುದಕ್ಕೆ ನಾವು ರಾಜ್ಯ ಸರ್ಕಾರಕ್ಕೆ ಸಹಕಾರ ನೀಡಬೇಕು. ಈ ಸರ್ಕಾರ ಭಯೋತ್ಪಾದಕತೆ ನಿಲ್ಲಿಸುತ್ತವೆ ಅಂದ್ರೆ ಮಾತ್ರ ಸಹಕಾರ ನೀಡುತ್ತೆವೆ. ಇವರು ನಮ್ಮಿಂದ ಏನು ಬಯಸುತ್ತಿದ್ದಾರೆ. ಇದು ಹೇಡಿ, ನಾಚಿಕೆಗೇಡಿನ ಕೃತ್ಯ. ನೀವು ಓಟ್ ಬ್ಯಾಂಕ್ ಗಾಗಿ ದೇಶವನ್ನು ಅಭದ್ರ ಮಾಡುತ್ತಿದ್ದಿರಿ. ಜಿಹಾದಿ ರಾಜಕೀಯಕ್ಕೆ ನಾವು ಬೆಂಬಲ ನೀಡಬೇಕಾ? ಅತ್ಯಂತ ಅಯೋಗ್ಯ ಸರ್ಕಾರ ಇದು. ಈ ರೀತಿಯ ಚಿಲ್ಲರೆ, ತುಷ್ಟ ರಾಜಕೀಯ ನಿಲ್ಲಿಸಬೇಕು ಎಂದು ಜೋಶಿ ಆಗ್ರಹಿಸಿದ್ದಾರೆ.

ಯಾವುದೇ ಪೂರ್ವ ತಯಾರಿಲ್ಲದೆ ಜಾತಿಗಣತಿ ಮಾಡಿದ್ದಾರೆ. ಮೊದಲು ಕಾಂಗ್ರೆಸ್ ನಿಲವು ಸ್ಪಷ್ಟ ಪಡಸಲಿ. ಆಮೇಲೆ ಬಿಜೆಪಿ ನಿಲವು ತಿಳಿಸುತ್ತವೆ. ನಾನು ಈಗಾಗಲೇ ನಾನು ಸಾಕಷ್ಟು ಚುನಾವಣಾ ತಯಾರಿ ಮಾಡಿದ್ದೆನೆ. ನನಗೆ ಎಲ್ಲಾ ವರ್ಗದ ಬೆಂಬಲ ಇದೆ ಎಂದು ಜೋಶಿ ಹೇಳಿದ್ದಾರೆ.

ಕಾಂಗ್ರೆಸ್‌ನ್ನು ಅಧಿಕಾರದಿಂದ ಕೆಳಗಿಳಿಸಿ, ವಿಧಾನಸೌಧದಿಂದ ಹೊರ ಕಳಿಸುವ ಹೋರಾಟ ಬಿಜೆಪಿ ಕೈಗೆತ್ತಿಕೊಳ್ಳಲಿದೆ: ವಿಜಯೇಂದ್ರ

ಮೋದಿ ಅಲೆಯಲ್ಲಿ ಯಾರೇ ನಿಂತರೂ ಸೋಲು ಗ್ಯಾರಂಟಿ: ಸಿ.ಟಿ.ರವಿ

ಅನಂತ್ ಅಂಬಾನಿ ಪ್ರಿವೆಡ್ಡಿಂಗ್ ಕಾರ್ಯಕ್ರಮದ ರಂಗು ಹೆಚ್ಚಿಸಿದ ಪಾಪ್ ಗಾಯಕಿ: ಸಂಭಾವನೆ ಎಷ್ಟು ಗೊತ್ತಾ..?

- Advertisement -

Latest Posts

Don't Miss