Sunday, September 8, 2024

Latest Posts

Aquatic life mission ಪೂರ್ಣಗೊಳಿಸಿ : ‌ಸಚಿವ ಖೂಬಾ ಸೂಚನೆ

- Advertisement -

ಕಲಬುರಗಿ: 2023ರ ಒಳಗಾಗಿ ಜಲಜೀವನ ಮಿಷನ್ ಅಡಿ ಜಿಲ್ಲೆಯ ಎಲ್ಲ ಕುಡಿಯುವ ನೀರಿನ ಯೋಜನೆಯನ್ನು ಪೂರ್ಣಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ಕೇಂದ್ರ ನವೀಕರಿಸಬಹುದಾದ ಇಂಧನ ಮೂಲ, ರಸಗೊಬ್ಬರ, ರಾಸಾಯನಿಕ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ಅಧಿಕಾರಿಗಳಿಗೆ ತಾಕೀತು ಮಾಡಿದರು.

ನಗರದ ಜಿಲ್ಲಾಧಿಕಾರಿ ‌ಕಚೇರಿಯಲ್ಲಿ ನಡೆದ ದಿಶಾ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಒಂದು ಮನೆಗೆ ನೀರು ಪೂರೈಕೆ ಇಲ್ಲವಾದರೂ ಪ್ರಗತಿ ‌ಕಡಿಮೆಯಾದಂತೆ. ಹೀಗಾಗಿ, ಎಲ್ಲ ಮನೆಗಳಿಗೂ ನೀರು ಪೂರೈಕೆಯಾಗುವಂತೆ ಗಮನ ಹರಿಸಬೇಕು. ಜಲಜೀವನ ಮಿಷನ್ ಕೇಂದ್ರದ ಮಹತ್ವಾಕಾಂಕ್ಷಿ ಯೋಜನೆಯಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರೇ ಇದರ ಮೇಲ್ವಿಚಾರಣೆ ವಹಿಸಿದ್ದಾರೆ. ಆದ್ದರಿಂದ ಎಚ್ಚರಿಕೆಯಿಂದ ಕೆಲಸ ನಿರ್ವಹಿಸಬೇಕು ಎಂದರು.

ಕುಡಿಯುವ ನೀರಿನ ಯೋಜನೆಗಳ ಬಗ್ಗೆ ನಿತ್ಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮೇಲ್ವಿಚಾರಣೆ ‌ನಡೆಸಬೇಕು ಎಂದು ಸಚಿವರು ಜಿಲ್ಲಾ ಪಂಚಾಯಿತಿ ಸಿಇಒ ಡಾ. ದಿಲೀಷ್ ಶಶಿ ಅವರಿಗೆ ಸೂಚಿಸಿದರು.

ಇಲಾಖೆಯಿಂದ ಕೈಗೆತ್ತಿಕೊಂಡ ಕಾಮಗಾರಿಗಳ ಕುರಿತು ಮಾಹಿತಿ ನೀಡಿದ ಗ್ರಾಮೀಣ ಕುಡಿಯುವ ‌ನೀರು ವಿಭಾಗದ ಕಾರ್ಯನಿರ್ವಾಹಕ ‌ಎಂಜಿನಿಯರ್ ಅಜೀಜುದ್ದೀನ್, ಒಟ್ಟಾರೆ 386 ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. 126 ಕಾಮಗಾರಿಗಳ ಸರ್ವೆ ಕಾರ್ಯ ಮುಗಿದಿದೆ ಎಂದರು.

- Advertisement -

Latest Posts

Don't Miss