ಬೆಂಗಳೂರು: ಇಂದಿನಿಂದ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲಿದ್ದು, ಪದಗ್ರಹಣದ ಜೊತೆಗೆ ಶಕ್ತಿ ಪ್ರದರ್ಶನಕ್ಕೆ ಕಾಂಗ್ರೆಸ್ ಸಜ್ಜಾಗಿದೆ.. ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಇಂದು ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್, ಪದಗ್ರಹಣ ಮಾಡಲಿದ್ದಾರೆ. ಹಾಗಾಗಿ ರಾಜ್ಯದ ಮೂಲೆ ಮೂಲೆಯಿಂದ ಸಿದ್ದರಾಮಯ್ಯ ಮತ್ತು ಡಿಕೆಶಿ ಅಭಿಮಾನಿಗಳು ಕ್ರೀಡಾಂಗಣಕ್ಕೆ ಆಗಮಿಸಿದ್ದಾರೆ.
ಸಿದ್ದರಾಮಯ್ಯ ಮುಖವಾಡ ಧರಿಸಿದ, ಅವರ ಅಭಿಮಾನಿಗಳು ಸಿದ್ದರಾಮಯ್ಯ ಪರ ಜೈಕಾರ ಕೂಗಿದ್ದಾರೆ. ಡಿಕೆಶಿ ಅಭಿಮಾನಿಗಳು ಕೂಡ ಸ್ಥಳದಲ್ಲಿದ್ದು, ಶಾಂಘ್ರಿಲಾ ಹೊಟೇಲ್ನಿಂದ ಕಂಠೀರವಕ್ಕೆ ಆಗಮಿಸಿದ ಡಿಕೆಶಿ, ಅಭಿಮಾನಿಗಳತ್ತ ಕೈ ಬೀಸಿ, ನಗು ಬೀರಿದ್ದಾರೆ. ಕಾರ್ಯಕ್ರಮಕ್ಕೆ 8 ರಾಜ್ಯದ ಸಿಎಂ ಸೇರಿ, ಬೇರೆ ಬೇರೆ ಪಕ್ಷದ ನಾಯಕರು, ಕಾಂಗ್ರೆಸ್ ರಾಷ್ಟ್ರೀಯ ನಾಯಕರು ಕೂಡ ಆಗಮಿಸಿದ್ದು, ಅವರಿಗಾಗಿ ಸ್ಟೇಜ್ ಮೇಲೆ ಆಸನ ಸಿದ್ಧಪಡಿಸಲಾಗಿದೆ.
ಸಿದ್ದರಾಮಯ್ಯ, ಡಿಕೆಶಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಹಲವು ಕಾಂಗ್ರೆಸ್ ನಾಯಕರು ಶಾಂಘ್ರಿಲಾ ಹೊಟೇಲ್ನಿಂದ, ಕಂಠೀರವಕ್ಕೆ ಆಗಮಿಸುತ್ತಿದ್ದಾರೆ. ಸಿದ್ದು, ಡಿಕೆಶಿ ಪಟ್ಟಾಭಿಷೇಕ ಕಣ್ತುಂಬಿಕೊಳ್ಳಲು, ಜನ ಕಿಕ್ಕಿರಿದು ಆಗಮಿಸಿದ್ದು, ಸ್ಥಳದಲ್ಲಿ 1,500ಕ್ಕೂ ಹೆಚ್ಚು ಪೊಲೀಸ್ ಬಿಗಿ ಬಂದೋಬಸ್ತ್ ಏರ್ಪಡಸಲಾಗಿದೆ.
ಇನ್ನೂ ನಿಮ್ಮ ಬಳಿ 2 ಸಾವಿರ ರೂಪಾಯಿ ನೋಟ್ ಇದೆಯಾ..? ಹಾಗಾದ್ರೆ ಈ ಸ್ಟೋರಿ ನೋಡಿ..
‘ನೋಟು ನಿಷೇಧ ಎಂಬ ಅಸ್ತ್ರವನ್ನು ಪ್ರಧಾನಿ ರಾಜಕೀಯ ಲಾಭಕ್ಕಾಗಿ ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ’