National Political News: ಕಾಂಗ್ರೆಸ್ ಎಸ್ಸಿ ಎಸ್ಟಿ ಮೀಸಲಾತಿ ತೆಗೆದುಕೊಂಡು ಮುಸ್ಲಿಂರಿಗೆ ನೀಡಿದೆ ಎಂದು ಪ್ರಧಾನಿ ಮೋದಿ ಆರೋಪಿಸಿದ್ದಾರೆ.
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅಧಿಕಾರದಲ್ಲಿದ್ದಾಗ, 2011ರಲ್ಲಿ ಕಾಂಗ್ರೆಸ್ ಸರ್ಕಾರ ಜಾಮಿಯಾ ಮಿಲಿಯಾ ವಿಶ್ವವಿದ್ಯಾಲಯವನ್ನು ಅಲ್ಪಸಂಖ್ಯಾತರ ವಿದ್ಯಾಸಂಸ್ಥೆ ಎಂದು ಘೋಷಿಸಿತು. ಇದಾದ ನಂತರ ಶೇ.50ರಷ್ಟು ಮೀಸಲಾತಿಯನ್ನು ಅಲ್ಪಸಂಖ್ಯಾತರಿಗೆ ನೀಡಲಾಗುತ್ತಿದೆ. ಆದರೆ ಈ ವಿಶ್ವವಿದ್ಯಾನಿಲಯದಲ್ಲಿ ಮೊದಲು ಎಸ್ಸಿ,ಎಸ್ಟಿ ವಿದ್ಯಾರ್ಥಿಗಳಿಗೂ ಅಲ್ಲಿ ಕಲಿಯಲು ಅವಕಾಶವಿತ್ತು ಎಂದು ಪ್ರಧಾನಿ ಮೋದಿ ಆರೋಪಿಸಿದ್ದಾರೆ.
ಅಲ್ಲದೇ ಇಂಡಿಯಾ ಮೈತ್ರಿಕೂಟ ಕ್ಯಾನ್ಸರ್ಗಿಂತಲೂ ಭಯಾನಕವಾಗಿದೆ. ಮತ ಜಿಹಾದ್ಗಾಗಿ ಸಮಾಜವನ್ನು ವಿಭಜಿಸುವುದೇ ಕಾಂಗ್ರೆಸ್ ಗುರಿಯಾಗಿದೆ. ಆದರೆ ಮೋದಿ ಎಲ್ಲಿಯವರೆಗೂ ಪ್ರಧಾನಿ ಸ್ಥಾನದಲ್ಲಿರುತ್ತಾನೋ, ಅಲ್ಲಿಯವರೆಗೂ ಬಡವರ, ದಲಿತರ ಮೀಸಲಾತಿ ಕಿತ್ತುಕೊಳ್ಳಲು ಯಾರಿಂದಲೂ ಸಾಧ್ಯವಿಲ್ಲವೆಂದು ಮೋದಿ ಹೇಳಿದ್ದಾರೆ.
ಮಮತಾ ಬ್ಯಾನರ್ಜಿ ಬಗ್ಗೆ ವಿವಾದಾತ್ಮಕ ಹೇಳಿಕೆ: ಬಿಜೆಪಿ ಅಭ್ಯರ್ಥಿಗೆ 1 ದಿನದ ಪ್ರಚಾರ ನಿಷೇಧ
Baby Death: ಮನೆಯಲ್ಲಿ ಒಬ್ಬಂಟಿಯಾಗಿ ಮಗುವನ್ನು ಬಿಟ್ಟು ಹೋದ ಪೋಷಕರು: ಮಗು ಸಾವು
National News: ಎಮಿರೇಟ್ಸ್ ವಿಮಾನ ಡಿಕ್ಕಿ: 35ಕ್ಕೂ ಹೆಚ್ಚು ರಾಜಹಂಸ ಪಕ್ಷಿಗಳ ಸಾವು..?