ಹೋಳಿಗೆ ಮಾಡಲು ಹೋಗಿ ಕುಕ್ಕರ್ ಬ್ಲಾಸ್ಟ್, ಇಬ್ಬರಿಗೆ ಗಂಭೀರ ಗಾಯ

Belagavi News: ಬೆಳಗಾವಿ: ಬೆಳಗಾವಿಯಲ್ಲಿ ಕುಕ್ಕರ್ ಬ್ಲಾಸ್ಟ್ ಆಗಿ ಇಬ್ಬರಿಗೆ ಗಂಭೀರ ಗಾಯವಾಗಿದೆ. ಮತ್ತು ಆರು ಜನರಿಗೆ ಸಣ್ಣ ಪುಟ್ಟ ಗಾಯವಾಗಿದೆ.

ಬೆಳಗಾವಿ ಜಿಲ್ಲೆಯ ಸವದತ್ತಿ ಎಲ್ಲಮ್ಮನ ದರ್ಶನಕ್ಕೆ ಬಂದಿದ್ದ ಭಕ್ತರು, ಸವದತ್ತಿಯ ಹೊಟೇಲ್‌ ರೂಮ್‌ನಲ್ಲಿ ತಂಗಿದ್ದರು. ಬೆಂಗಳೂರಿನಿಂದ 5 ಜನ ಯಾದಗಿರಿ ಜಿಲ್ಲೆಯಿಂದ 3 ಜನ ದೇವಿಯ ದರ್ಶನಕ್ಕೆ ಬಂದಿದ್ದರು. ಈ ವೇಳೆ ಹೋಳಿಗೆ ಮಾಡಲು ಕುಕ್ಕರ್‌ನಲ್ಲಿ ಬೇಳೆ ಬೇಯಿಸಲು ಗ್ಯಾಸ್ ಹೊತ್ತಿಸಿದ್ದರು. ಎರಡು ಸಿಟಿ ಬಂದ ಬಳಿಕ, ಕುಕ್ಕರ್ ಸ್ಪೋಟಗೊಂಡಿದೆ.

ಈ ವೇಳೆ ಗಂಭೀರವಾಗಿ ಗಾಯಗೊಂಡ ಇಬ್ಬರು ಮಹಿಳೆಯರನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸಣ್ಣಪುಟ್ಟ ಗಾಯವಾಗಿದ್ದ 6 ಜನರನ್ನು ಸವದತ್ತಿ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗಿದೆ. ಇನ್ನು ಕುಕ್ಕರ್ ಬ್ಲಾಸ್ಟ್ ಆಗಿದ್ದ ಜಾಗದಲ್ಲಿ ಬೆಂಕಿಹೊತ್ತಿಕೊಂಡಿದ್ದು, ಸ್ಥಳಕ್ಕೆ ಬಂದಿದ್ದ ಅಗ್ನಿಶಾಮಕ ಸಿಬ್ಬಂದಿ, ಬೆಂಕಿ ನಂದಿಸಲು ಹರಸಾಹಸ ಪಟ್ಟಿದ್ದಾರೆ. ಬೆಳಗಾವಿ ಜಿಲ್ಲೆ ಸವದತ್ತಿ ಪೊಲೀಸ್ ಠಾಣೆ ವ್ಯಾಪ್ತಿ ಘಟನೆ ನಡೆದಿದೆ.

About The Author