www.karnatakatv.net : ಬೆಂಗಳೂರು : ಕೊರೊನಾ ಮಹಾಮಾರಿ ರಾಜ್ಯದಲ್ಲಿ ಕಡಿಮೆಯಾಗುತ್ತಿದ್ದು, ಇದೀಗ ಶಾಲಾ ಕಾಲೇಜುಗಳನ್ನು ಆರಂಭಿಸಿರುವ ಹಿನ್ನಲೇ ಕೊರೊನಾ ಸೋಂಕು ಹೆಚ್ಚಾಗುವ ಆತಂಕವು ಇದೆ.
ಹೌದು, ಶಾಲಾ- ಕಾಲೇಜು ಆರಂಭದಿಂದ ಕೊರೊನಾ ಸೋಂಕು ಹೆಚ್ಚಾಗಿದ್ದು ಈಗ ಆನೇಕಲ್ ಬಳಿಯ ಒಂದೇ ಕಾಲೇಜಿನ 60 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ಕಂಡುಬಂದಿದೆ. ಚೈತನ್ಯ ರೆಸಿಡೆನ್ಶಿಯಲ್ ಕಾಲೇಜಿನ ಹಾಸ್ಟೆಲ್ ನಲ್ಲಿದ್ದ 60 ಮಂದಿಗಳಿಗೆ ಸೋಂಕು ಹರಡಿದೆ ಹಾಗೇ ತಾಲೂಕು ಆರೋಗ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡುತ್ತಿದ್ದಾರೆ.
ತರಗತಿಗಳನ್ನು ಮೊಟಕುಗೊಳಿಸಿದ ಕಾಲೇಜು ಆಡಳಿತ ಮಂಡಳಿ, 335 ವಿದ್ಯಾರ್ಥಿಗಳ ಪೈಕಿ 54 ಮಂದಿಯನ್ನು ಆಸ್ಪತ್ರೆಗೆ ಸೇರಿಸಿದರೆ, ಉಳಿದ ವಿದ್ಯಾರ್ಥಿಗಳು ಕ್ವಾರಂಟೈನ್ನಲ್ಲಿದ್ದಾರೆ. ಕೊರೊನಾ ಪಾಸಿಟಿವ್ ಬಂದ ವಿದ್ಯಾರ್ಥಿನಿಯರಲ್ಲಿ ಬಹುತೇಕರು ಕರ್ನಾಟಕದವರು, 8 ವಿದ್ಯಾರ್ಥಿಗಳಿಗೆ ಅತಿಯಾದ ವಾಂತಿ ಭೇದಿ ಕಾಣಿಸಿಕೊಂಡಿದೆ ಎಂದು ತಿಳಿದು ಬಂದಿದೆ.
ಕರ್ನಾಟಕ ಟಿವಿ – ಬೆಂಗಳೂರು