ಸಂಸದೆ ಸುಮಲತಾ ಅಂಬರೀಷ್ ಅವರಿಗೆ ಕೊರೊನಾ ಸೋಂಕು ತಗುಲಿದ್ದು , ಈ ಬಗ್ಗೆ ಸ್ವತಃ ಸುಮಲತಾ ಅಂಬರೀಷ್ ಅವರೇ, ತಮ್ಮ ಫೇಸ್ಬುಕ್ ಪೇಜ್ನಲ್ಲಿ ಬರೆದುಕೊಂಡಿದ್ದಾರೆ.

ಆತ್ಮೀಯರೇ,
ಶನಿವಾರ, ಜುಲೈ 4ರಂದು, ನನಗೆ ಸ್ವಲ್ಪ ತಲೆನೋವು ಮತ್ತು ಗಂಟಲು ನೋವು ಕಾಣಿಸಿಕೊಂಡಿತ್ತು. ನಿರಂತರವಾಗಿ ನನ್ನ ಕ್ಷೇತ್ರದ ಕಾರ್ಯಗಳಲ್ಲಿ ತೊಡಗಿದ್ದರಿಂದ ಮತ್ತು ಕೊರೊನಾ ಪೀಡಿತ ಪ್ರದೇಶಗಳಿಗೂ ಭೇಟಿ ಕೊಟ್ಟಿದ್ದರಿಂದ, ಕೋವಿಡ್ 19 ಪರೀಕ್ಷೆಗೆ ಒಳಗಾದೆ. ಇವತ್ತು ಪಾಸಿಟಿವ್ ಎಂದು ಫಲಿತಾಂಶ ಬಂದಿದೆ. ಹಾಗಾಗಿ ವೈದ್ಯರ ಸಲಹೆ ಪಡೆದುಕೊಂಡು ಅಗತ್ಯ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದೇನೆ. ಮನೆಯಲ್ಲಿಯೇ ಕ್ವಾರಂಟೈನ್ಗೆ ಒಳಪಟ್ಟಿದ್ದೀನಿ.
ರೋಗನಿರೋಧಕ ಶಕ್ತಿಯು ನನ್ನಲ್ಲಿ ಪ್ರಬಲವಾಗಿದೆ ಮತ್ತು ನಿಮ್ಮ ಆಶೀರ್ವಾದ ನನ್ನ ಮೇಲೆ ಇರುವುದರಿಂದ ಬೇಗ ಗುಣಮುಖ ಆಗುತ್ತೇನೆ. ಈಗಾಗಲೇ ನನ್ನನ್ನು ಭೇಟಿಯಾದ ವ್ಯಕ್ತಿಗಳ ವಿವರವನ್ನು ಸರಕಾರಿ ಅಧಿಕಾರಿಗಳಿಗೆ ಕೊಟ್ಟಿರುವೆ. ಆದರೂ ನನ್ನನ್ನು ಭೇಟಿಯಾದವರಲ್ಲಿ ಯಾರಿಗಾದರೂ ಕೋವಿಡ್ ಲಕ್ಷಣಗಳು ಕಂಡುಬಂದಲ್ಲಿ ಕೂಡಲೇ ಪರೀಕ್ಷೆ ಮಾಡಿಸಲು ವಿನಂತಿಸುತ್ತೇನೆ. ನಿಮ್ಮ ಹಾರೈಕೆ ಇರಲಿ.
ಸುಮಲತಾ ಅಂಬರೀಷ್
ಸದಸ್ಯೆ, ಮಂಡ್ಯ ಲೋಕಸಭಾ ಕ್ಷೇತ್ರ
ಹೀಗೆ ತಮ್ಮ ಫೇಸ್ಬುಕ್ ಮೂಲಕ ಸುಮಲತಾ ಅಂಬರೀಷ್ ತಮಗೆ ಕೋವಿಡ್ 19 ಇರುವುದನ್ನ ಸ್ಪಷ್ಟಪಡಿಸಿದ್ದಾರೆ.
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಒಂದು ದಿನಕ್ಕೆ ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಒಂದು ಸಾವಿರದ ಗಡಿ ದಾಟಿದೆ.
