Siddaramaiha : ಸಿದ್ದರಾಮಯ್ಯ ಮತ್ತು ಸುಳ್ಳು ಒಂದೇ ನಾಣ್ಯದ ಎರಡು ಮುಖಗಳು…!

Political news: ಬಜೆಟ್ ಮಂಡನೆ ನಂತರ ಇದೀಗ ಪ್ರತಿಪಕ್ಷೀಯರ ಮಾತುಗಳ ಸರಮಾಲೆಯೇ ಸುರಿದು ಬರುತ್ತಿದೆ.ಸಿಟಿ ರವಿ ಕೂಡಾ ಬಜೆಟ್ ವಿಚಾರವಾಗಿ ಕಾಂಗ್ರೆಸ್ ಗೆ ಕುಟುಕಿದ್ದಾರೆ.ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡುವಾಗ ಮುಖ್ಯಮಂತ್ರಿ ಸಿದ್ದರಾಮಯ್ಯ  ಮತ್ತು ಸುಳ್ಳು ಒಂದೇ ನಾಣ್ಯದ ಎರಡು ಮುಖಗಳು ಎಂದು ಹೇಳಿದರು.

ಸಿದ್ದರಾಮಯ್ಯ ಶುಕ್ರವಾರ ಮಂಡಿಸಿದ ಬಜೆಟ್ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಟಿ ರವಿ, ಅಂಕಿ ಅಂಶಗಳು ಯಾವತ್ತೂ ಸುಳ್ಳು ಹೇಳುವುದಿಲ್ಲ, ಆದರೆ ಸಿದ್ದರಾಮಯ್ಯ ಅಂಕಿ ಅಂಶಗಳನ್ನು ಪ್ರಸ್ತಾಪಿಸುತ್ತಲೇ ಸುಳ್ಳನ್ನು ಸತ್ಯದ ತಲೆ ಮೇಲೆ ಹೊಡೆದಂತೆ ಹೇಳುತ್ತಾರೆ ಎಂದು ಕುಟುಕಿದರು. ಕಾಂಗ್ರೆಸ್ ಸರ್ಕಾರ ಕೇಂದ್ರದಲ್ಲಿ ಅಧಿಕಾರದಲ್ಲಿದ್ದಾಗ ರಾಜ್ಯಕ್ಕೆ ಕೇವಲ 18,000-20,000 ಕೋಟಿ ರೂ.ಗಳಷ್ಟು ಸಹಾಯ ಧನ, ಅನುದಾನದ ರೂಪದಲ್ಲಿ ಬರುತಿತ್ತು ಆದರೆ ಈಗ 50,000 ಕೋಟಿ ರೂ.ಗಳಿಗಿಂತ ಜಾಸ್ತಿ ಬರುತ್ತಿದೆ ಎಂದರು.

political news:ಪಕ್ಷಬೇಧ ಮರೆತು ಕೆಲಸ ಮಾಡಬೇಕು- ಡಿಕೆ ಶಿವಕುಮಾರ್

ಬಸವಕಲ್ಯಾಣ ಬಿಜೆಪಿ ಶಾಸಕ ಶರಣು ಸಲಗರ್ ಸೇರಿ 9 ಜನರ ವಿರುದ್ಧ ಎಫ್ .ಐ.ಆರ್ .ದಾಖಲು

ತೆರಿಗೆ ಹಾಕದೇ, ಹೆಚ್ಚಿನ ಸಾಲ ಮಾಡದೇ ಗ್ಯಾರೆಂಟಿ ಜಾರಿಗೊಳಿಸಿ : ಬಸವರಾಜ ಬೊಮ್ಮಾಯಿ

About The Author