ರಾಮಲಲ್ಲಾ ಪ್ರಾಣಪ್ರತಿಷ್ಠಾಪನೆಗೆ ಶುಭಹಾರೈಸಿದ ಡಿಸಿಎಂ ಡಿ.ಕೆ.ಶಿವಕುಮಾರ್

Political News: ರಾಮಮಂದಿರ ಉದ್ಘಾಟನಾ ಸಮಾರಂಭಕ್ಕೆ ಕಾಂಗ್ರೆಸ್ ಗೈರಾಗಲು ನಿರ್ಧರಿಸಿದ್ದು ಎಲ್ಲರಿಗೂ ಗೊತ್ತು. ಆದರೆ ಡಿಸಿಎಂ ಡಿ.ಕೆ.ಶಿವಕುಮಾರ್ ತಮ್ಮ ಟ್ವಿಟರ್‌ನಲ್ಲಿ ಟ್ವೀಟ್ ಮಾಡುವ ಮೂಲಕ, ರಾಮಮಂದಿರದ ಶುಭಾಶಯ ತಿಳಿಸಿದ್ದಾರೆ.

ರಾಮರಾಜ್ಯದ ನಿರ್ಮಾಣ, ನಮ್ಮ ಕನಸು. ಅದನ್ನು ನನಸು ಮಾಡುವ ಉದ್ದೇಶದಿಂದ ಜಾರಿಗೊಳಿಸಿದ ಐದು ಗ್ಯಾರಂಟಿಗಳು ಇಂದು ಯಶಸ್ವಿಯಾಗಿವೆ. ರಾಮನ ಆದರ್ಶ, ಹನುಮನ ನಿಷ್ಠೆ ಇದ್ದರೆ ಅದೇ ಅರ್ಥಪೂರ್ಣ ಬದುಕು. ಅಯೋಧ್ಯೆಯ ಶ್ರೀ ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆಗೆ ಶುಭ ಹಾರೈಕೆಗಳು ಎಂದು ಡಿ.ಕೆ.ಶಿಕುಮಾರ್ ಟ್ವೀಟ್ ಮಾಡಿ, ಶುಭಹಾರೈಸಿದ್ದಾರೆ.

About The Author