Tuesday, April 15, 2025

Latest Posts

ರಾಮದೇವ್ ಗೆ ದೆಹಲಿ ಹೈಕೋರ್ಟ್ ಸಮನ್ಸ್ ಜಾರಿ..!

- Advertisement -

www.karnatakatv.net: ಯೋಗ ಗುರು ರಾಮದೇವ್ ವಿರುದ್ಧ ಭಾರತೀಯ ವೈದ್ಯಕೀಯ ಸಂಘವು ಮೊಕದ್ದಮೆ ಹೂಡಿತ್ತು. ಇದಕ್ಕೆ ಸಂಬoಧಿಸಿದoತೆ ವಿಚಾರಣೆ ನಡೆಸಿರುವ ದೆಹಲಿ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ.

ಅಲೋಪಥಿ ಬಗ್ಗೆ ಸುಳ್ಳು ಮತ್ತು ಆಧಾರರಹಿತ ಮಾಹಿತಿಯನ್ನು ಹರಡಿದಕ್ಕಾಗಿ ರಾಮದೇವ್ ವಿರುದ್ಧ ಮೊಕದ್ದಮೆ ಹೂಡಿತ್ತು. ಇದು ಖಂಡಿತವಾಗಿಯೂ ಪ್ರಕರಣ ದಾಖಲಿಸುವಂತ ವಿಷಯ ಎಂದು ಕೋರ್ಟ್ ಹೇಳಿದೆ. ಈ ಸಮನ್ಸ್ ಗೆ ರಾಮ್ ದೇವ್ ಪ್ರತಿಕ್ರಿಯೆ ನೀಡಲು ನ್ಯಾಯಮೂರ್ತಿ ಸಿ ಹರಿ ಶಂಕರ್ ಅವರು ನಾಲ್ಕು ವಾರಗಳ ಕಾಲಾವಕಾಶ ನೀಡಿದ್ದಾರೆ. ಅಲ್ಲದೇ ಈ ಪ್ರಕರಣಕ್ಕೆ ಸಂಬoಧಿಸಿದoತೆ ಯಾವುದೇ ಅಭಿಪ್ರಾಯವನ್ನು ವ್ಯಕ್ತಪಡಿಸುವುದಿಲ್ಲ ಮತ್ತು ಯಾವುದೇ ಪರಿಹಾರ, ಮಧ್ಯಂತರ ಅಥವಾ ಇತರವುಗಳನ್ನು ನೀಡುವ ವಿಷಯವನ್ನು ನಂತರ ಪರಿಶೀಲಿಸಲಾಗುವುದು ಎಂದು ನ್ಯಾಯಾಧೀಶರು ಹೇಳಿದ್ದಾರೆ.

ನಾನು ರಾಮದೇವ್ ವಿಡಿಯೋ ತುಣುಕುಗಳನ್ನು ನೋಡಿದ್ದೇನೆ. ವೀಡಿಯೊ ಕ್ಲಿಪ್ ಗಳ ಪರಿಶೀಲನೆಯಿಂದ, ನಿಮ್ಮ ಕ್ಲೈಂಟ್ ಅಲೋಪತಿ ಚಿಕಿತ್ಸಾ ಪ್ರೋಟೋಕಾಲ್ ಅನ್ನು ತಿರಸ್ಕರಿಸುತ್ತಿದ್ದಾರೆ. ಅವರಿಗೆ ತಡೆಯಾಜ್ಞೆ ನೀಡಲು ಏನೂ ಇಲ್ಲದಿರಬಹುದು. ಆದರೆ ಪ್ರಕರಣವು ಕ್ಷುಲ್ಲಕವಲ್ಲ ಎಂದು ನ್ಯಾಯಾಧೀಶರು ರಾಮ್ ದೇವ್ ಪರ ಹಾಜರಾದ ಹಿರಿಯ ವಕೀಲ ರಾಜೀವ್ ನಾಯರ್ ಅವರಿಗೆ ತಿಳಿಸಿದರು.

- Advertisement -

Latest Posts

Don't Miss