- Advertisement -
ಬೆಂಗಳೂರು : ಡಿಜೆ ಹಳ್ಳಿ, ಕೆಜೆ ಹಳ್ಳಿ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ NIA ತನ್ನ ಚಾರ್ಜ್ ಶೀಟ್ ನ್ನು ಸಲ್ಲಿಸಿದೆ. ಪೊಲೀಸ್ ಠಾಣೆ ಮೇಲೆ ದಾಳಿ ನಡೆದಿದ್ದು ಹೇಗೆ ಎಂಬುದು ಈಗ ಎಲ್ಲರಿಗೂ ಗೊತ್ತಾಗಿದೆ. ಇದೇ ವಿಷಯವನ್ನು ನಾವು ವಿಧಾನಸಭೆಯಲ್ಲೂ ಹೇಳಿದ್ದೆವು.
ಅದನ್ನೇ ಎನ್ ಐ ಎ ತನ್ನ ವರದಿಯಲ್ಲಿ ಹೇಳಿದೆ. ಈ ಕೃತ್ಯ ಎಸಗಲು ಸಾಮಾಜಿಕ ಜಾಲತಾಣವನ್ನು ದುರುಪಯೋಗ ಮಾಡಿಕೊಳ್ಳಲಾಗಿದೆ. ಈ ಕುರಿತು ಕೋರ್ಟ್ ತನ್ನ ಆದೇಶ ನೀಡಲಿದೆ ಎಂದು ಗುರುವಾರ ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.
- Advertisement -