Hubballi News: ಹುಬ್ಬಳ್ಳಿ: ಅಂಗವಿಕಲರು ರೋಗವನ್ನು ತಪಾಸಣೆ ಮಾಡಿಸಿಕೊಂಡು ಸೂಕ್ತ ವೈದ್ಯಕೀಯ ಸೌಲಭ್ಯ ಪಡೆದು ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ಪ್ರಾಥಮಿಕ ಆರೋಗ್ಯ ಕೇಂದ್ರ ಅಧಿಕಾರಿ ಡಾ. ಹುಲಗಣ್ಣ ಇಂಜಗನವರ ಹೇಳಿದರು.
ತಾಲೂಕಿನ ಅದರಗುಂಚಿ ಗ್ರಾಮದಲ್ಲಿ ತಾಲೂಕು ಪಂಚಾಯತಿ, ಹುಬ್ಬಳ್ಳಿ ಗ್ರಾಮ ಪಂಚಾಯತಿ, ಅದರಗುಂಚಿ ಇವರ ಸಹಯೋಗದಲ್ಲಿ ಗ್ರಾಮದ ವಿಕಲಚೇತನರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಿ ಅವರು, ಮಾತನಾಡಿದರು.
ಖಾಯಿಲೆಗಳು ವಿಪರೀತವಾಗಿ ಹರಡುತ್ತಿರುವುದರಿಂದ ಅಂಗವಿಕಲರು ಆರೋಗ್ಯ ರಕ್ಷಿಸಿಕೊಳ್ಳುವುದು ಪ್ರಮುಖ ಆದ್ಯತೆಯಾಗಿರುತ್ತದೆ. ಆದ್ದರಿಂದ ಅಂಗವಿಕಲರು ಆರೋಗ್ಯ ತಪಾಸಣೆ ಮಾಡಿಕೊಂಡು ಆರೋಗ್ಯದ ಬಗ್ಗೆ ಕಾಳಜಿವಹಿಸಬೇಕು ಎಂದರು.
ತಾಲೂಕು ವಿವಿದೋದ್ದೇಶ ಪುನರ್ವಸತಿ ಕಾರ್ಯಕರ್ತ ಮಹಾಂತೇಶ ಕುರ್ತಕೋಟಿ ಮಾತನಾಡಿ, ಗ್ರಾಮದ ಎಲ್ಲ ವಿಕಲಚೇತನರು ಆರೋಗ್ಯ ಶಿಬಿರ ಸದುಪಯೋಗ ಪಡೆಯಲು ಎಂದು ತಿಳಿಸಿದರು.
ಗ್ರಾಮದ ವಿಕಲಚೇತನರು ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ವಿಕಲಚೇತನರಿಗೆ ಬಿಪಿ, ಶುಗರ್, ರಕ್ತಹೀನತೆ, ಟಿಬಿ ರೋಗಗಳ ಬಗ್ಗೆ ತಪಾಸಣೆಯನ್ನು ಮಾಡಲಾಯಿತು. ಸದರಿ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತಿ ವ್ಯಾಪ್ತಿಯ 60 ವಿಕಲಚೇತನರು ಭಾಗವಹಿಸಿ, ಸದರಿ ಕಾರ್ಯಕ್ರಮದ ಸದುಪಯೋಗ ಪಡೆದುಕೊಂಡರು.
ಕಾರ್ಯಕ್ರಮದಲ್ಲಿ ಅಧ್ಯಕ್ಷ ಮೆಹರುಬಿ ದಾವಲ್ ಸಾಬ್ ನದಾಫ್ ಉಪಾಧ್ಯಕ್ಷ ಶಂಕರಗೌಡ ನೀಲಪ್ಪ ಗೌಡ್ರು, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಅಮೃತ್ ಹಡಪದ, ವಿ.ಆರ್.ಡಬ್ಲ್ಯೂ ಬಸವರಾಜ ಸೋಮಕ್ಕನವರ, ಗ್ರಾ.ಪಂ ಸಿಬ್ಬಂದಿ, ಆರೋಗ್ಯ ಸಿಬ್ಬಂದಿ ಇದ್ದರು.
ಬಗೆದಷ್ಟು ಬಯಲಾಗುತ್ತಲೇ ಇದೆ KEA ಪರೀಕ್ಷೆ ಅಕ್ರಮ: ಅಭ್ಯರ್ಥಿಗಳಿಗೆ ಬ್ಲೂಟೂತ್ ಕೊಟ್ಟಿದ್ದ ಪಾಟೀಲ್




