Sunday, September 8, 2024

Latest Posts

ಸ್ಪಾ ಮಾಲೀಕನಿಗೆ ದಿವ್ಯಾ ವಸಂತ ಗ್ಯಾಂಗ್ ಸುಲಿಗೆ: ಹನಿಟ್ರ್ಯಾಪ್ ಪ್ರಕರಣದಲ್ಲಿ ಕನ್ನಡದ ನಿರೂಪಕಿ!

- Advertisement -

Sandalwood News: ಸ್ಯಾಂಡಲ್‌ವುಡ್ ನಟಿ ಗರ್ಭಿಣಿಯಾಗಿದ್ದ ಸುದ್ದಿಯನ್ನು ಇಡೀ ರಾಜ್ಯವೇ ಖುಷಿ ಪಡುವ ಸುದ್ದಿ ಎಂದು ಹೇಳಿ, ಟ್ರೋಲ್ ಆಗಿದ್ದ ಕನ್ನಡದ ನ್ಯೂಸ್ ಆ್ಯಂಕರ್‌ ದಿವ್ಯಾ ವಂಸತಾ, ಇದೀಗ ಹನಿಟ್ರ್ಯಾಪ್ ಪ್ರಕರಣದಲ್ಲಿ ಸಿಲುಕಿದ್ದಾಳೆ.

ತಾನು ಅರೆಸ್ಟ್ ಆಗುತ್ತೇನೆಂದು ಗೊತ್ತಾಗುತ್ತಿದ್ದಂತೆ, ದಿವ್ಯಾವಂಸತ್ ಎಸ್ಕೇಪ್ ಆಗಿದ್ದಾಳೆ. ಈಕೆಯ ಸಹೋದರ ಕೂಡ ಈ ಕೇಸ್‌ನಲ್ಲಿದ್ದು, ಸಹೋದರ ಸಂದೇಶ್ ಮತ್ತು ರಾಜ್ ನ್ಯೂಸ್ ಸಿಇಓ ವೆಂಕಟೇಶ್ ಕೂಡ ಈ ಕೇಸ್‌ನಲ್ಲಿ ಬಾಗಿಯಾಗಿದ್ದು, ಇಬ್ಬರನ್ನೂ ಬಂಧಿಸಲಾಗಿದೆ. ಇಬ್ಬರಿಂದ ಮೂರು ಮೊಬೈಲ್ ಫೋನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಆಗಿದ್ದೇನು..?: ಇಂದಿರಾಗರದಲ್ಲಿರುವ ಸ್ಪಾವೊಂದರ ಮಾಲೀಕನಿಂದ 15 ಲಕ್ಷ ರೂಪಾಯಿ ಪೀಕಲು ದಿವ್ಯಾ ಗ್ಯಾಂಗ್ ಸ್ಕೆಚ್ ಹಾಕಿತ್ತು. ಇದಕ್ಕಾಗಿ ಇವರೆಲ್ಲ ಸೇರಿ ವಾಟ್ಸಪ್ ಗ್ರೂಪ್ ಮಾಡಿಕೊಂಡು, ಅದರಲ್ಲಿ ಯಾರ್ಯಾರಿಗೆ ಹನಿ ಟ್ರ್ಯಾಪ್ ಮಾಡಬೇಕು ಎಂದು ಚರ್ಚಿಸಲಾಗುತ್ತಿತ್ತು. ಹಲವರಿಗೆ ಹನಿಟ್ರ್ಯಾಪ್ ಮಾಡಿದ ಬಳಿಕ, ದಿವ್ಯಾ ಇಂದಿರಾನಗರದ ಸ್ಪಾ ಓನರ್‌ಗೆ ಹನಿಟ್ರ್ಯಾಪ್ ಮಾಡಬೇಕು ಎಂದು, ಪ್ರಯತ್ನಿಸಿದ್ದಾರೆ. ಆದರೆ ಸ್‌ಪಾ ಓನರರ್ ಎಚ್ಚೆತ್ತುಕೊಂಡು ಪೊಲೀಸರಿಗೆ ಈ ಬಗ್ಗೆ ದೂರು ನೀಡಿದ್ದಾರೆ. ಬಳಿಕ ದಿವ್ಯಾ ಗ್ಯಾಂಗ್‌ನ್ನು ಅರೆಸ್ಟ್ ಮಾಡಲಾಗಿದೆ. ಇದೀಗ ದಿವ್ಯಾಗಾಗಿ ಹುಡುಕಾಟ ನಡೆಸಲಾಗಿದೆ.

ಕೃತ್ಯ ಬೆಳಕಿಗೆ ಬಂದ ನಂತರ ನಾಪತ್ತೆಯಾಗಿರುವ ನಿರೂಪಕಿ ದಿವ್ಯಾ, ಸಚಿನ್ ಹಾಗೂ ಆಕಾಶ್ ಪತ್ತೆಗೆ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಇತ್ತೀಚೆಗೆ ಇಂದಿರಾನಗರದ 100 ಅಡಿ ರಸ್ತೆ 15ನೇ ಮುಖ್ಯರಸ್ತೆಯ ‘ಟ್ರಿ ಸ್ಟ್ರಾ ಅಂಡ್ ಬ್ಯೂಟಿ’ ಪಾರ್ಲ‌್ರನ ವ್ಯವಸ್ಥಾಪಕ ಶಿವಶಂಕ‌ ಅವರಿಗೆ ವೇಶ್ಯಾವಾಟಿಕೆ ನಡೆದಿದೆ ಎಂದು ಬೆದರಿಸಿ ಹಣ ಸುಲಿಗೆ ಮಾಡಲು ವೆಂಕಟೇಶ್ ತಂಡ ಯತ್ನಿಸಿತ್ತು. ಈ ಬಗ್ಗೆ ತನಿಖೆಗಿಳಿದ ಪೊಲೀಸರು, ತಾಂತ್ರಿಕ ಮಾಹಿತಿ ಆಧರಿಸಿ ಸಿಇಒ ಸೇರಿ ಇಬ್ಬರನ್ನು ಬಂಧಿಸಿದ್ದಾರೆ.

ಸಂತ್ರಸ್ತರಿಂದ 80 ಸಾವಿರ, 50 ಸಾವಿರ ಹಾಗೂ 1 ಲಕ್ಷ ರು.ವರೆಗೆ ಆನ್‌ಲೈನ್‌ ಮೂಲಕ ತಮ್ಮ ಖಾತೆಗಳಿಗೆ ವೆಂಕಟೇಶ್‌ ಹಾಗೂ ದಿವ್ಯಾ ಹಣ ವರ್ಗಾಯಿಸಿಕೊಂಡಿರುವುದು ತನಿಖೆಯಲ್ಲಿ ಪತ್ತೆ ಯಾಗಿದೆ ಎಂದು ಮೂಲಗಳು ಹೇಳಿವೆ.

ದಿವ್ಯಾ ಮನೆಗೆ ಪೊಲೀಸರ ದಾಳಿ: ಪ್ರಕರಣ ಸಂಬಂಧ ಲಗ್ಗೆರೆಯಲ್ಲಿರುವ ದಿವ್ಯಾ ಮನೆ ಮೇಲೆ ಪೊಲೀಸರು ದಾಳಿ ನಡೆಸಿ, ಕೆಲ ದಾಖಲೆಗಳನ್ನು ಜಪ್ತಿ ಮಾಡಿದ್ದಾರೆ. ಬಂಧನ ಭೀತಿಗೊಳಗಾದ ದಿವ್ಯಾ, ಮನೆಯಲ್ಲಿದ್ದ ಕ್ಯಾಮೆ ರಾ, ಲ್ಯಾಪ್‌ಟಾಪ್ ಸೇರಿ ಕೆಲ ವಸ್ತು ಗಳನ್ನು ತೆಗೆದುಕೊಂಡು ಕಾರಿನಲ್ಲಿ ಪರಾರಿಯಾ ಗಿದ್ದಾಳೆ ಎಂದು ಮೂಲಗಳು ತಿಳಿಸಿವೆ.

ಪೊಲೀಸರ ಮುಂದೆ ದಿವ್ಯಾ ತಾಯಿ ಕಣ್ಣೀರು: ಈ ಸುಲಿಗೆ ಯತ್ನ ಪ್ರಕರಣದಲ್ಲಿ ತಮ್ಮ ಮಕ್ಕಳು ಸಿಕ್ಕಿಬಿದ್ದರಿಂದ ತೀವ್ರವಾಗಿ ನೊಂದಿರುವ ದಿವ್ಯಾ ತಾಯಿ, ಜಿ.ಬಿ.ನಗರ ಠಾಣೆಗೆ ತೆರಳಿ ಕಣ್ಣೀರಿಟ್ಟಿದ್ದಾರೆ. ತಾನು ಮನೆಗಳಲ್ಲಿ ಕೆಲಸ ಮಾಡಿ ಮಕ್ಕಳನ್ನು ಸಾಕಿದ್ದೇನೆ. ವೆಂಕಟೇಶ್‌ನಿಂದಲೇ ದಿವ್ಯಾ ತಪ್ಪು ದಾರಿ ತುಳಿದಿದ್ದಾಳೆ ಎಂದು ಅವರು ಅಲವತ್ತುಕೊಂಡಿದ್ದಾಗಿ ತಿಳಿದು ಬಂದಿದೆ.

ಮಸಾಜ್ ಪಾರ್ಲರ್ ಟ್ರ್ಯಾಪ್: ವೆಂಕಟೇಶ್‌ ಹಾಗೂ ದಿವ್ಯಾ ತಂಡ ಕೆಲ ದಿನಗಳ ಹಿಂದೆ ಇಂದಿರಾನಗರದ ಶ್ರೀ ಸ್ಪಾ ಆ್ಯಂಡ್ ಬ್ಯೂಟಿ ಪಾರ್ಲ‌್ರಗೆ ಈಶಾನ್ಯ ರಾಜ್ಯದ ಯುವತಿಯನ್ನು ಕೆಲಸಕ್ಕೆ ಸೇರಿಸಿತ್ತು. ಬಳಿಕ ಗ್ರಾಹಕನ ಸೋಗಿನಲ್ಲಿ ಸ್ವಾಗೆ ದಿವ್ಯಾ ಸೋದರ ಸಂದೇಶ್ ತೆರಳಿದ್ದ. ಈ ಮೊದಲೇ ಸ್ಥಾನಲ್ಲಿ ಕೆಲಸದಲ್ಲಿದ್ದ ತನ್ನ ಗ್ಯಾಂಗ್‌ನ ಯುವತಿ ಬಳಿಯೇ ಮಸಾಜ್‌ಗೆ ಗೊತ್ತುಪಡಿಸಿದ್ದ. ಆಗ ಕೊಠಡಿಯಲ್ಲಿ ರಹಸ್ಯ ಕ್ಯಾಮೆರಾವಿಟ್ಟು ಸಲುಗೆಯಿಂದಿರುವ ದೃಶ್ಯಾವಳಿಗಳನ್ನು ಸಂದೇಶ್ ಚಿತ್ರೀಕರಿಸಿಕೊಂಡಿದ್ದ. ಇದಾದ ಬಳಿಕ ತನ್ನ ನ್ಯೂಸ್ ಚಾನೆಲ್‌ನ ವರದಿಗಾರ್ತಿಯನ್ನು ಆ ಸ್ಪಾಗೆ ಕಳುಹಿಸಿ ವೆಂಕಟೇಶ್ ಹಣ ಸುಲಿಗೆಗೆ ಯತ್ನಿಸಿದ್ದನು.

ನಿಮ್ಮ ಸ್ಪಾನಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದೆ ಎಂದು ಸಂದೇಶ್ ಚಿತ್ರೀಕರಿಸಿದ್ದ ವಿಡಿಯೋವನ್ನು ಸ್ಪಾ ವ್ಯವಸ್ಥಾಪಕನಿಗೆ ತೋರಿಸಿ ವೆಂಕಟೇಶ್ ಬೆದರಿಸಿದ್ದ. ಮೊದಲು 15 ಲಕ್ಷ ರು. ಗೆ ಬೇಡಿಕೆ ಇಟ್ಟಿದ್ದ ಆರೋಪಿಗಳು, ಕೊನೆಗೆ 8 ಲಕ್ಷ ರು. ನೀಡುವಂತೆ ಒತ್ತಾಯಿಸಿದ್ದರು. ಈ ಬೆದರಿಕೆ ಸಹಿಸಲಾರದೆ ಸ್ಪಾ ವ್ಯವಸ್ಥಾಪಕ, ಜೆ.ಬಿ.ನಗರ ಠಾಣೆಗೆ ದೂರು ಕೊಟ್ಟಿದ್ದರು. ಅಂತೆಯೇ ತನಿಖೆಗಿಳಿದ ಪೊಲೀಸರು, ಮೊಬೈಲ್ ಕರೆಗಳನ್ನು ಪರಿಶೀಲಿಸಿದಾಗ ವೆಂಕಟೇಶ್ ತಂಡದ ಬಗ್ಗೆ ಮಾಹಿತಿ ಸಿಕ್ಕಿತು. ಈ ಸುಳಿವು ಆಧರಿಸಿ ವೆಂಕಟೇಶ್‌ ಹಾಗೂ ಸಂದೇಶ್‌ನನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

- Advertisement -

Latest Posts

Don't Miss