Banglore News : ಬೆಂಗಳೂರಿನ ಸೆಂಟ್ರಲ್ ಕಾಲೇಜಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಜುಲೈ 31ರಂದು ನಡೆದ ಬಿ.ಡಿ.ಎ ಪೆರಿಫೆರಲ್ ರಿಂಗ್ ರಸ್ತೆಯ ಯೋಜನೆಯಲ್ಲಿ ಭೂಸ್ವಾಧೀನಕ್ಕೆ ಒಳಗಾಗಿರುವ ರೈತರು ಮತ್ತು ಭೂಮಾಲೀಕರ ಕುಂದು ಕೊರತೆಗಳ ಬಗ್ಗೆ ಆಯೋಜಿಸಿದ ಸಭೆಯನ್ನು ಉದ್ದೇಶಿಸಿ ಡಿಸಿಎಂ ಡಿಕೆಶಿವಕುಮಾರ್ ಮಾತನಾಡಿದರು.
ಜಮೀನು ಕಳೆದುಕೊಂಡವರ ಸಮಸ್ಯೆ ನಮಗೆ ಅರ್ಥವಾಗುತ್ತದೆ. ರೈತನಿಗೆ ಸಂಬಳ, ಬಡ್ತಿ, ಪಿಂಚಣಿ, ನಿವೃತ್ತಿ, ಲಂಚ ಯಾವುದೂ ಇಲ್ಲ. ರೈತನ ರಕ್ಷಣೆ ನಮ್ಮ ಜವಾಬ್ದಾರಿ. ಜಮೀನು ಕಳೆದುಕೊಂಡ ರೈತರಿಗೆ ಸಹಾಯ ಮಾಡಲು ನಾವು ಸಿದ್ಧರಿದ್ದೇವೆ.
ನಿಮ್ಮ ಸಲಹೆ – ಸೂಚನೆಗಳನ್ನು ಆಧರಿಸಿ ಸರ್ಕಾರದ ಮಟ್ಟದಲ್ಲಿ ಚರ್ಚಿಸಲಾಗುವುದು. ಭೂಮಿಯನ್ನು ಕಳೆದುಕೊಂಡ ರೈತರಿಗೆ ಮತ್ತು ಸರ್ಕಾರಕ್ಕೆ ಅನುಕೂಲ ಆಗುವಂತೆ ಕಾನೂನು ತಜ್ಞರ ಸಲಹೆಯನ್ನು ಪಡೆಯಲಾಗುವುದು. ಭೂಮಿ ಕಳೆದುಕೊಂಡ ರೈತರಿಗೆ ಸರ್ಕಾರ ಸ್ಪಂದಿಸಲಿದೆ ಎಂಬ ಭರವಸೆಯನ್ನು ನೀಡಿದರು.
DK Shivakumar : ಡಿಸಿಎಂ ಡಿಕೆಶಿಗೆ ಬಿಗ್ ರಿಲೀಫ್ : ಸಿಬಿಐ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್
Auto strike: ಆಟೋ ಚಾಲಕರ ಮುಷ್ಕರ, ಸಚಿವರಿಗೆ ಮನವಿ ಸಲ್ಲಿಸಿದ ಆಟೋ ಚಾಲಕರು..!