Thursday, July 31, 2025

Latest Posts

Doddaballapura : ರಾಜ್ಯಮಾಹಿತಿ ಹಕ್ಕು ಹಾಗೂ ಸಾಮಾಜಿಕ ಕಾರ್ಯಕರ್ತರಿಗೆ ರಕ್ಷಣೆ ನೀಡಿ..!

- Advertisement -

ದೊಡ್ಡಬಳ್ಳಾಪುರ : ರಾಜ್ಯ ಮಾಹಿತಿ ಹಕ್ಕು (State Information Right) ಸಾಮಾಜಿಕ ಕಾರ್ಯಕರ್ತರ ವೇದಿಕೆಯ (Forum for Social Workers) ರಾಜ್ಯ ಉಪಾಧ್ಯಕ್ಷ ಶಿವಶಂಕರ್ (Shivshankar, State Vice President) ಹಾಗೂ ತಾಲೂಕು ಅಧ್ಯಕ್ಷ ಕೆ.ಹೆಚ್ ವೆಂಕಟೇಶ್ (KH Venkatesh) ಇವರ ನೇತೃತ್ವದಲ್ಲಿ ದೊಡ್ಡಬಳ್ಳಾಪುರ ನಗರದ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿಯನ್ನು ನಡೆಸಲಾಯಿತು. ಅಕ್ರಮವಾಗಿ ನಕಲಿ ದಾಖಲೆಗಳನ್ನು ಸೃಷ್ಟಿಮಾಡಿ (Creation of duplicate documents) ಕಡಿಮೆ ಬೆಲೆಗೆ ನಿವೇಶನಗಳನ್ನು ಬಡವರಿಗೆ ಹಾಗೂ ಅಮಾಯಕರಿಗೆ ಮಾರಾಟ ಮಾಡುತ್ತಿದ್ದು ಇಂತಹ ಕೃತ್ಯಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ರಾಜ್ಯ ಮಾಹಿತಿ ಹಕ್ಕು ಹಾಗೂ ಸಾಮಜಿಕ ಕಾರ್ಯಕರ್ತರ ವೇದಿಕೆಯಿಂದ ಹೋರಾಟ ಮಾಡಲು ತೀರ್ಮಾನಿಸಲಾಗಿದೆ ಹಾಗೂ ಮಾಹಿತಿಹಕ್ಕು ಹಾಗೂ ಸಾಮಾಜಿಕ ಕಾರ್ಯಕರ್ತರಿಗೆ ಸರ್ಕಾರದಿಂದ ರಕ್ಷಣೆಯನ್ನು ನೀಡಬೇಕು ಎಂದು ರಾಜ್ಯ ಮಾಹಿತಿ ಹಕ್ಕು ಹಾಗೂ ಸಾಮಾಜಿಕ ಕಾರ್ಯಕರ್ತರ ವೇದಿಕೆಯ ರಾಜ್ಯ ಉಪಾಧ್ಯಕ್ಷ ಶಿವಶಂಕರ್ ಮಾತನಾಡಿದರು. ನಂತರ ಮಾತನಾಡಿದ ರಾಜ್ಯ ಮಾಹಿತಿ ಹಕ್ಕು ಹಾಗೂ ಸಾಮಾಜಿಕ ಕಾರ್ಯಕರ್ತರ ವೇದಿಕೆಯ ತಾಲೂಕು ಅಧ್ಯಕ್ಷ ಕೆ.ಹೆಚ್ ವೆಂಕಟೇಶ್ ಮಾತನಾಡಿ ತಾಲೂಕಿನಲ್ಲಿ ನಕಲಿ ವೈದ್ಯರು ಹೆಚ್ಚಾಗಿದ್ದು ಮಾತ್ರೆ ಹಾಗೂ ಚುಚ್ಚುಮದ್ದು ಬಡಜನರಿಗೆ ನೀಡುತ್ತಿದ್ದು ಬಡವರ ಜೀವನದ ಜೊತೆ ಆಟವಾಡುತ್ತಿದ್ದಾರೆ ಅಂತಹ ವೈದ್ಯರ ವಿರುದ್ದ ಸೂಕ್ತ ಕ್ರಮತೆಗೆದುಕೊಂಡು ಕ್ಲಿನಿಕ್ ಗಳನ್ನು ಮುಚ್ಚಿಸಬೇಕು ಎಂದು ವೇದಿಕೆಯ ತಾಲೂಕು ಅಧಕ್ಷ ಕೆ.ಹೆಚ್ ವೆಂಕಟೇಶ್ ಮಾತನಾಡಿದರು.

ಅಭಿಜಿತ್, ಕರ್ನಾಟಕ ಟಿವಿ, ದೊಡ್ಡಬಳ್ಳಾಪುರ.

- Advertisement -

Latest Posts

Don't Miss