- Advertisement -
ತಿಪಟೂರು ತಾಲೂಕಿನ ನೊಣವಿನಕೆರೆ ಹೋಬಳಿಯಲ್ಲಿ ಸಾಹಸಸಿಂಹ ಡಾ. ವಿಷ್ಣುವರ್ಧನ್ ರವರ ಅಭಿಮಾನಿಗಳು 75 ನೇ ಜನ್ಮದಿನ ಆಚರಣೆ ಮಾಡಿದರು.
ವಿಷ್ಣುವರ್ಧನ್ ಸೇನಾ ಸಮಿತಿಯ ಕಾರ್ಯಕರ್ತರು ಮಾತನಾಡಿ ವಿಷ್ಣುವರ್ಧನ್ ಅವರು ಚಿತ್ರರಂಗದ ಜತೆಗೆ ಕನ್ನಡ ಭಾಷೆ ಉಳಿಸಿ ಬೆಳೆಸಲು ಶ್ರಮಿಸಿದ್ದರು. ಯುವಜನತೆಗೆ ಆದರ್ಶವಾಗಿದ್ದ ಅವರು ನುಡಿದಂತೆ ನಡೆದಿದ್ದರು ಹಾಗೂ ವಿಷ್ಣುವರ್ಧನ್ ರವರ ಜೀವನ ಎಲ್ಲರಿಗೂ ಸ್ಪೂರ್ತಿದಾಯಕ ಎಂದರು.
ಈ ಕಾರ್ಯಕ್ರಮದಲ್ಲಿ ವಿಷ್ಣುವರ್ಧನ್ ಸೇನಾ ಸಮಿತಿಯ ಕಾರ್ಯಕರ್ತರು ಅಭಿಮಾನಿಗಳು ಸೇರಿದಂತೆ ಸಾರ್ವಜನಿಕರು ಭಾಗಿಯಾಗಿದ್ದರು.
- Advertisement -