ಬೆಳಗಾವಿ: ಚೀನಾದಲ್ಲಿ ಕೊರೊನ ಪ್ರಕರಣಗಳು ಹೆಚ್ಚುತ್ತಿದ್ದು, ಕೋವಿಡ್ ನಿಯಂತ್ರಣಕ್ಕೆ ಎಲ್ಲೆಡೆ ಮುನ್ನೆಚ್ಚಿರಿಕೆ ಕ್ರಮವಹಿಸುತ್ತಿದ್ದಾರೆ. ಕೋವಿಡ್ ನಿಯಂತ್ರಣಕ್ಕೆ ಕ್ರಮ ವಹಿಸಿರುವುದು ವೈಜ್ಞಾನಿಕ ಹಿನ್ನೆಲೆಯಿಂದಲೇ ಹೊರತು, ರಾಜಕೀಯ ಕಾರಣಕ್ಕಲ್ಲ ಎಂದು ಆರೋಗ್ಯ ಸಚಿವ ಕೆ.ಸುಧಾಕರ್ ಹೇಳಿದ್ದಾರೆ. ಜೆಡಿಎಸ್ ನಾಯಕರಾದ ಎಚ್.ಡಿ.ಕುಮಾರಸ್ವಾಮಿಯವರು ಹಲವು ದಿನಗಳಿಂದ ಯಾತ್ರೆ ಮಾಡುತ್ತಿದ್ದಾರೆ. ರಾಹುಲ್ ಗಾಂಧಿಯುವರು ನೂರು ದಿನಕ್ಕೂ ಹೆಚ್ಚು ಕಾಲ ಯಾತ್ರೆ ಮಾಡಿದ್ದಾರೆ. ಆದರೆ ಇಷ್ಟು ದಿನಗಳಲ್ಲಿ ಕೋವಿಡ್ ಬಗ್ಗೆ ಸರ್ಕಾರ ಮಾತನಾಡಿಲ್ಲ. ಚೀನಾ, ಕೊರಿಯಾ ಮೊದಲಾದ ದೇಶಗಳಲ್ಲಿ ಪ್ರಕರಣ ಹೆಚ್ಚಿರುವುದರಿಂದ ಮಾತ್ರ ಈಗ ಜನರ ಆರೋಗ್ಯ ರಕ್ಷಣೆಗಾಗಿ ಕೋವಿಡ್ ನಿಯಂತ್ರಣಕ್ಕೆ ಕ್ರಮ ವಹಿಸಲಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿಯವರ ಉತ್ತಮ ಆಡಳಿತದಿಂದಾಗಿ ಕೋವಿಡ್ ನಿಯಂತ್ರಣಕ್ಕೆ ಬಂದಿದೆ ಎಂದು ಹೇಳಿದರು.
ಕೊರೊನಾಗೆ ಸಂಬಂಧಿಸಿದಂತೆ ಮುಂದಿನ 20 ರಿಂದ 35 ದಿನಗಳು ಭಾರತಕ್ಕೆ ಬಹಳ ಮುಖ್ಯ: ಆರೋಗ್ಯ ಸಚಿವಾಲಯ
ಕಾಂಗ್ರೆಸ್, ಜೆಡಿಎಸ್ನ ಯಾತ್ರೆಗಳು ಸಾಮಾನ್ಯ ರಾಜಕೀಯ ಪ್ರಚಾರವಾಗಿದೆ. ಇದು ಜನರ ಮನಸ್ಸಿನ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಜೆಡಿಎಸ್ನ ಕುಮಾರಸ್ವಾಮಿಯವರು ಹಳೆ ಮೈಸೂರು ಪ್ರದೇಶಗಳಲ್ಲಿ ಯಾತ್ರೆ ಮಾಡುತ್ತಿದ್ದಾರೆ. ಉಳಿದೆಡೆ ಜೆಡಿಎಸ್ ಇಲ್ಲ ಎಂದರು. ಕೋವಿಡ್ ಲಸಿಕೆಯನ್ನು ದಾಖಲೆಯ ಮಟ್ಟದಲ್ಲಿ ನೀಡಲಾಗಿದೆ. ರಾಜ್ಯದಲ್ಲಿ ಶೇ.100 ರಷ್ಟು ಲಸಿಕಾಕರಣ ಆಗಿದೆ. ಆದರೆ ಮೂರನೇ ಡೋಸ್ನ ಲಸಿಕೆಯನ್ನು ಕೂಡ ಎಲ್ಲರೂ ಪಡೆಯಬೇಕು. ಮೂಗಿಗೆ ಹಾಕುವ ಕೊರೊನ ಲಸಿಕೆಯಿಂದ ಮಕ್ಕಳಿಗೆ ಬಹಳ ಪ್ರಯೋಜನವಾಗಲಿದ ಎಂದರು ಎಂದು ಸುಧಾಕರ್ ಅವರು ಹೇಳಿದರು.
ಬೆಂಗಳೂರು ವಾಹನ ಸವಾರರಿಗೆ ಗುಡ್ ನ್ಯೂಸ್ : ಎಲೆಕ್ಟ್ರಾನಿಕ್ ಸಿಟಿ ಮೆಟ್ರೋ ಜೂನ್ 2023ಕ್ಕೆ ಆರಂಭ