Wednesday, June 18, 2025

Latest Posts

ಇ.ಡಿ. ಇನ್ಮುಂದೆ ಕಾಂಗ್ರೆಸ್ ವಿರೋಧಿ ನಿರ್ದೇಶನಾಲಯ ಅಂತ ಹೆಸ್ರು ಬದಲಾಯಿಸಿಕೊಳ್ಳಲಿ : ದಿನೇಶ್ ಗುಂಡೂರಾವ್

- Advertisement -

Political News: ರಾಜ್ಯದಲ್ಲಿ ಕಾಂಗ್ರೆಸ್ ನಾಯಕರ ಮೇಲೆ ಜಾರಿ ನಿರ್ದೇಶನಾಯಲದ ಅಂದರೆ ಇ.ಡಿ ದಾಳಿಯನ್ನು ಖಂಡಿಸಿ ಕೈ ನಾಯಕರು ಕೇಂದ್ರ ಸರ್ಕಾರದ ಮೇಲೆ ಮುಗಿಬಿದ್ದು ತಮ್ಮ ಆಕ್ರೋಶವನ್ನು ಹೊರಹಾಕುತ್ತಿದ್ದಾರೆ.

ಇನ್ನೂ ಬುಧವಾರ ಬಳ್ಳಾರಿ ಸಂಸದ ಇ. ತುಕಾರಾಂ ಹಾಗೂ ಶಾಕರಾದ ನಾರಾ ಭರತ್ ರೆಡ್ಡಿ, ಗಣೇಶ್, ಎನ್.ಟಿ. ಶ್ರೀನಿವಾಸ ಹಾಗೂ ಬಿ. ನಾಗೇಂದ್ರ ಅವರ ಮನೆಗಳ ಮೇಲೆ ನಡೆದ ಇ.ಡಿ. ದಾಳಿಯ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಟೀಕಾ ಪ್ರಹಾರ ನಡೆಸಿದ್ದಾರೆ.

ಆದರೆ ಇದೀಗ ಇ.ಡಿ. ದಾಳಿಯ ವಿರುದ್ಧ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಖಂಡನೆ ವ್ಯಕ್ತಪಡಿಸಿದ್ದಾರೆ. ಜಾರಿ ನಿರ್ದೇಶನಾಲಯ ತನ್ನ ಹೆಸರನ್ನು ಕಾಂಗ್ರೆಸ್ ವಿರೋಧಿ ನಿರ್ದೇಶನಾಲಯ ಎಂದು ಬದಲಾಯಿಸಿಕೊಳ್ಳುವುದು ಸೂಕ್ತ ಎಂದು ಲೇವಡಿ ಮಾಡಿದ್ದಾರೆ.

ಬಿಜೆಪಿ ನಾಯಕರ ತಂಟೆಗೆ ಹೋಗದಿರುವುದು ವಿಸ್ಮಯ..!

ಕರ್ನಾಟಕದಲ್ಲಿ ಕಾಂಗ್ರೆಸ್ ನಾಯಕರನ್ನು ಗುರಿಯಾಗಿಸಿಕೊಂಡು ಜಾರಿ ನಿರ್ದೇಶನಾಲಯ ಮತ್ತೆ ದಾಳಿ ನಡೆಸಿದೆ. ಜಾರಿ ನಿರ್ದೇಶನಾಲಯದ ವೈಶಿಷ್ಟ್ಯವೇನೆಂದರೆ ಅದು ದಾಳಿ ಮಾಡುವುದು ಬಿಜೆಪಿಯೇತರ ನಾಯಕರ ಮೇಲೆ ಮಾತ್ರ. ಇಲ್ಲಿಯವರೆಗೂ ಇ.ಡಿ. ಬಿಜೆಪಿ ನಾಯಕರ ತಂಟೆಗೆ ಹೋಗಿಲ್ಲ. ಹೋಗುವುದು ಇಲ್ಲ. ಇದೊಂದು ವಿಸ್ಮಯ ಎಂದು ವ್ಯಂಗ್ಯವಾಡಿದ್ದಾರೆ.

ಕೈ ನಾಯಕರೇ ಜಾರಿ ನಿರ್ದೇಶನಾಲಯದ ಪ್ರೈಮ್ ಟಾರ್ಗೆಟ್..

ಕಾಂಗ್ರೆಸ್ ನಾಯಕರನ್ನೇ ನಿರ್ದಿಷ್ಟವಾಗಿ ಗುರಿಯಾಗಿಸಿಕೊಂಡು ದಾಳಿ ನಡೆಸುವ ಇಡಿ ತನ್ನ ಹೆಸರನ್ನು ಬದಲಾಯಿಸಿಕೊಳ್ಳಲಿ, ಯಾಕೆಂದರೆ ಜಾರಿ ನಿರ್ದೇಶನಾಲಯದ ಪ್ರೈಮ್ ಟಾರ್ಗೆಟ್ ಕಾಂಗ್ರೆಸ್ ನಾಯಕರೆ‌ ಹೊರತು ಬಿಜೆಪಿಯವರಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

ಇತ್ತೀಚೆಗಷ್ಟೆ ತಮಿಳುನಾಡಿನ ಟಾಸ್ಮ್ಯಾಕ್ ಹಗರಣದಲ್ಲಿ ಇ.ಡಿ. ನಡೆಯನ್ನು ಸುಪ್ರೀಂ ಕೋರ್ಟ್ ಕಟು ಮಾತುಗಳಲ್ಲಿ ಟೀಕಿಸಿದೆ. ಇ.ಡಿ. ಎಲ್ಲಾ‌ ಮಿತಿಗಳನ್ನು ಮೀರುತ್ತಿದೆ ಎಂದು ಸುಪ್ರೀಂ ಎಚ್ಚರಿಕೆ ನೀಡಿದೆ. ಆದರೂ ಇ.ಡಿ. ಅಧಿಕಾರಿಗಳು ಬಿಜೆಪಿ ಕಾರ್ಯಕರ್ತರಂತೆ ವರ್ತಿಸುತ್ತಿದ್ದಾರೆ ಎಂದು ದಿನೇಶ್ ಗುಂಡೂರಾವ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮೋದಿ ಸರ್ಕಾರ ಇ.ಡಿ.ಯನ್ನ ರಾಜಕೀಯ ಅಸ್ತ್ರವಾಗಿ ಬಳಸಿಕೊಳ್ಳುತ್ತಿದೆ..

ಸಾಂವಿಧಾನಿಕ ತನಿಖಾ ಸಂಸ್ಥೆಯಾದ ಇ.ಡಿ. ಯನ್ನು ಮೋದಿ ಸರ್ಕಾರ ರಾಜಕೀಯ ಅಸ್ತ್ರವಾಗಿ ಬಳಸಿಕೊಳ್ಳುತ್ತಿದೆ. ಇ.ಡಿ. ರಾಜಕೀಯ ಪಕ್ಷವೊಂದರ ಆಜ್ಞಾಪಾಲಕರಾದರೆ ಆ ಸಂಸ್ಥೆಗೆ ಸಾಂವಿಧಾನಿಕ ಪಾವಿತ್ರ್ಯತೆ ಇರಲು ಹೇಗೆ ಸಾಧ್ಯ‌.? ಆ ಸಂಸ್ಥೆಯಿಂದ ಪ್ರಜಾಪ್ರಭುತ್ವದ ಮೌಲ್ಯ ಉಳಿಯಲು ಹೇಗೆ ಸಾಧ್ಯ.? ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಮ್ಮ ಟ್ವೀಟ್ಟರ್ ಖಾತೆಯಲ್ಲಿ ಪೋಸ್ಟ್ ಮಾಡುವ ಮೂಲಕ ಪ್ರಶ್ನಿಸಿದ್ದಾರೆ.

- Advertisement -

Latest Posts

Don't Miss