Political News: ಪ್ರಜ್ವಲ್ ಪೆನ್ಡ್ರೈವ್ ಕೇಸ್ಗೆ ಸಂಬಂಧಿಸಿದಂತೆ, ನಿನ್ನೆ ಸುದ್ದಿಗೋಷ್ಠಿ ನಡೆಸಿದ್ದ ಮಾಜಿ ಸಿಎಂ ಕುಮಾರಸ್ವಾಮಿ, ಡಿಸಿಎಂ ಡಿಕೆಶಿ ವಿರುದ್ಧ ಕಿಡಿಕಾರಿದ್ದರು. ಹಲವು ವಿಷಯಗಳ ಬಗ್ಗೆ ಆರೋಪಿಸಿದ್ದರು.
ಡಿಸಿಎಂ ಡಿ.ಕೆ.ಶಿವಕುಮಾರ್ ಈ ಬಗ್ಗೆ ಟ್ವೀಟ್ ಮಾಡಿದ್ದು, ಕುಮಾರಸ್ವಾಮಿ ವಿರುದ್ಧ ಹರಿಹಾಯ್ದಿದ್ದಾರೆ. ಕುಮಾರಸ್ವಾಮಿ ಅವರು ಹಿಟ್ ಅಂಡ್ ರನ್ ಗಿರಾಕಿ ಅನ್ನೋದು ರಾಜ್ಯದ ಜನತೆಗೆ ಚೆನ್ನಾಗಿ ಗೊತ್ತಿದೆ. ಅವರು ಈ ಹಿಂದಿನಿಂದಲೂ ಮಾಡಿದ ಆರೋಪಗಳು ಯಾವುದೂ ಸಾಬೀತಾಗಿಲ್ಲ, ಪ್ರಜ್ವಲ್ ರೇವಣ್ಣ ಸೆಕ್ಸ್ ಗೇಟ್ ಪ್ರಕರಣದಲ್ಲಿ ನನ್ನ ಹೆಸರು ಮುನ್ನಲೆಗೆ ತಂದರೆ ಇಡೀ ರಾಜ್ಯದ ಗಮನ ಸೆಳೆಯಬಹುದು ಎನ್ನುವ ಕಾರಣಕ್ಕೆ ಅವರು ಪದೇ ಪದೇ ನನ್ನ ಮೇಲೆ ಗೂಬೆ ಕೂರಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಡಿಸಿಎಂ ಡಿಕೆಶಿ ಆರೋಪಿಸಿದ್ದಾರೆ.
ಈ ಕೇಸಿನ ಹಿಂದೆ ಇರುವುದು ಬ್ಲಾಕ್ ಮೇಲ್ ಕಿಂಗ್ ಕುಮಾರಸ್ವಾಮಿ. ರಾಜಕಾರಣಿಗಳು, ಅಧಿಕಾರಿಗಳನ್ನು ಬ್ಲಾಕ್ ಮೇಲ್ ಮಾಡುವುದೇ ಅವರ ಕೆಲಸ. ಅವರಿಗೆ ದಿನಕ್ಕೊಮ್ಮೆ ನನ್ನ ಹೆಸರು ಎತ್ತದಿದ್ದರೆ ನಿದ್ದೆ ಬರಲ್ಲ. ಈಗಲೂ ನಾನು ಹೇಳುತ್ತಿದ್ದೇನೆ ಈ ಪ್ರಕರಣದ ಕಥಾನಾಯಕ, ಡೈರೆಕ್ಟರ್, ಪ್ರೋಡ್ಯೂಸರ್ ಎಲ್ಲಾ ಕುಮಾರಸ್ವಾಮಿ ಅವರೇ ಎಂದು ಡಿಕೆಶಿ ಆರೋಪಿಸಿದ್ದಾರೆ.
ನಮ್ಮದು ರೇವಣ್ಣ ಅವರದು ಬೇರೆ ಕುಟುಂಬ ಅಂತ ಹಿಂದೆ ಅವರೇ ಹೇಳಿದ್ದರು. ಉಪ್ಪು ತಿಂದವನು ನೀರು ಕುಡಿಯಬೇಕು ಅಂತ ಕೂಡ ಹೇಳಿದ್ರು, ಈಗ ಯಾಕೆ ಮತ್ತೆ ಹಿಟ್ ಅಂಡ್ ರನ್ ಮಾಡ್ತಿದ್ದಾರೆ? ಪ್ರಕರಣ ಇನ್ನೂ ತನಿಖೆ ಹಂತದಲ್ಲಿದೆ, ಈಗಲೇ ತೀರ್ಪು ಕೊಡೋಕೆ ಕುಮಾರಸ್ವಾಮಿ ಅವರೇನು ಲಾಯರೋ? ಜಡ್ಜೋ? ಚರ್ಚೆ ಮಾಡಲು ಇನ್ನೂ ಟೈಮ್ ಇದೆ, ವಿಧಾನಸಭೆ ಅಧಿವೇಶನ ಇದೆ, ಎಲ್ಲಾ ತೆಗೆದುಕೊಂಡು ಬರಲಿ ಚರ್ಚೆ ಮಾಡೋಣ ಎಂದು ಡಿಕೆಶಿ ಹೇಳಿದ್ದಾರೆ.
ಕುಮಾರಸ್ವಾಮಿ ಅವರು ಹಿಟ್ ಅಂಡ್ ರನ್ ಗಿರಾಕಿ ಅನ್ನೋದು ರಾಜ್ಯದ ಜನತೆಗೆ ಚೆನ್ನಾಗಿ ಗೊತ್ತಿದೆ. ಅವರು ಈ ಹಿಂದಿನಿಂದಲೂ ಮಾಡಿದ ಆರೋಪಗಳು ಯಾವುದೂ ಸಾಬೀತಾಗಿಲ್ಲ, ಪ್ರಜ್ವಲ್ ರೇವಣ್ಣ ಸೆಕ್ಸ್ ಗೇಟ್ ಪ್ರಕರಣದಲ್ಲಿ ನನ್ನ ಹೆಸರು ಮುನ್ನಲೆಗೆ ತಂದರೆ ಇಡೀ ರಾಜ್ಯದ ಗಮನ ಸೆಳೆಯಬಹುದು ಎನ್ನುವ ಕಾರಣಕ್ಕೆ ಅವರು ಪದೇ ಪದೇ ನನ್ನ ಮೇಲೆ ಗೂಬೆ…
— DK Shivakumar (@DKShivakumar) May 8, 2024
ಗೆಲ್ಲುವ ಭರವಸೆ ವ್ಯಕ್ತಪಡಿಸಿದ ಕೇಂದ್ರ ಸಚಿವ ಪ್ರಹ್ಲಾದ ಜೋಶಿ: ರಿಲ್ಯಾಕ್ಸ್ ಮೂಡ್ನಲ್ಲಿ..!
ಕಾಂಗ್ರೆಸ್ ನಾಯಕರ ವಿರುದ್ಧ ಬೆಂಗಳೂರಿನ ಬಸ್ಸ್ಟ್ಯಾಂಡ್ನಲ್ಲಿ ರಾರಾಜಿಸಿದ ಪೋಸ್ಟರ್ಗಳು




