ಲೋಕಸಭೆಯ ಮೊದಲ ಅಧಿವೇಶನ 4ನೇ ದಿನ ಲೋಕಸಭೆ ಮತ್ತು ರಾಜ್ಯಸಭೆಗಳ ಜಂಟಿ ಸದನವನ್ನು ಉದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಮಾತನಾಡಿದ್ರು.
ದೇಶದ ಯುವಜನತೆ ದೊಡ್ಡ ಕನಸು ಕಾಣಲು ಮತ್ತು ಅವುಗಳನ್ನು ಸಾಧಿಸಲು ಅನುವು ಮಾಡಿಕೊಡುವ ವಾತಾವರಣವನ್ನು ಸೃಷ್ಟಿಸಲು ಸರ್ಕಾರ ಕೆಲಸ ಮಾಡುತ್ತಿದೆ ಎಂದು ಹೇಳಿದರು.
ಸಂವಿಧಾನದ ಮೇಲಿನ ದಾಳಿಯ ಅತಿ ದೊಡ್ಡ ಕರಾಳ ಅಧ್ಯಾಯ ಎಂದು ಹೇಳಿದ ಅವರು, ಪ್ರಶ್ನೆ ಪತ್ರಿಕೆ ಸೋರಿಕೆ, ಗ್ರೆಸ್ ಮಾರ್ಕ್ ನೀಡುವ ಮೂಲಕ ವಿವಾದ ಎಬ್ಬಿಸಿದ ನೀಟ್ ಪರೀಕ್ಷೆ ಬಗ್ಗೆ ಪ್ರಸ್ತಾವಿಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ರು. ಪರೀಕ್ಷಾ ಪ್ರಕ್ರಿಯೆಯನ್ನು ಸುಧಾರಿಸುವತ್ತ ಸರ್ಕಾರದ ಗಮನ ಹರಿಸಲಿದೆ. ಭಾರತವನ್ನು ಮೂರನೇ ಅತಿದೊಡ್ಡ ಆರ್ಥಿಕತೆಯನ್ನಾಗಿ ಮಾಡುವ ಗುರಿಯತ್ತ ಸರ್ಕಾರ ಈಗ ಗಮನ ಹರಿಸಿದೆ ಎಂದು ಹೇಳಿದ್ರು.