Saturday, July 27, 2024

Latest Posts

ತುರ್ತು ಕಾಮಗಾರಿ: ಧಾರವಾಡ ವ್ಯಾಪ್ತಿಯಲ್ಲಿ ನವೆಂಬರ್ 29ರಂದು ವಿದ್ಯುತ್ ವ್ಯತ್ಯಯ

- Advertisement -

Dharwad News: ಧಾರವಾಡ ಜಿಲ್ಲಾ (Dharwad) ವ್ಯಾಪಿಯಲ್ಲಿ ಬರುವ 110/11 ಕೆ.ವಿ ಕಲಘಟಗಿ ತಾಲೂಕಿನ ತಬಕದಹೊನ್ನಳ್ಳಿ ವಿದ್ಯುತ್ (Electricity) ವಿತರಣಾ ಕೇಂದ್ರದಲ್ಲಿ ನವೆಂಬರ್ 29 ರಂದು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (HESCOM) 3ನೇ ತ್ರೈಮಾಸಿಕ ತುರ್ತು ಪಾಲನಾ ಕಾಮಗಾರಿಯನ್ನು ಕೈಗೊಳ್ಳಲಿದೆ.

ಈ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜು ಆಗುವ ಎಲ್ಲಾ 11ಕೆವಿ ಮಾರ್ಗಗಳಲ್ಲಿ ನವೆಂಬರ್ 29 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ತಬಕದಹೊನ್ನಳ್ಳಿ, ಬಿರವಳ್ಳಿ, ಬೆಂಡಲಗಟ್ಟಿ, ಆಸ್ತಕಟ್ಟಿ, ನೆಲ್ಲಿಹರವಿ, ಮಲಕನಕೊಪ್ಪ, ಹುಣಸಿಕಟ್ಟಿ, ಬಿದರಗಡ್ಡಿ, ಗಂಜಿಗಟ್ಟಿ, ಸೊಲಾರಕೊಪ್ಪ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಸುತ್ತುಮುತ್ತಲಿನ ಗ್ರಾಮಗಳ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಧಾರವಾಡ ತಾಲೂಕಿನ ವ್ಯಾಪ್ತಿಯಲ್ಲಿ ಬರುವ 110/11 ಕೆ.ವಿ. ಶೇಡಬಾಳ ಖಾನಾಪುರ ವಿದ್ಯುತ್ ವಿತರಣಾ ಕೇಂದ್ರದಲ್ಲಿ ನವೆಂಬರ್ 29 ರಂದು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಇವರು 3ನೇ ತ್ರೈಮಾಸಿಕ ತುರ್ತುಪಾಲನಾ ಕಾಮಗಾರಿಯನ್ನು ಕೈಗೊಳ್ಳಲಿದೆ.

ಈ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜು ಆಗುವ ಎಲ್ಲಾ 11ಕೆವಿ ಮಾರ್ಗಗಳಲ್ಲಿ ನವೆಂಬರ್ 29 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಗರಗ, ಹಂಗರಕಿ, ದುಬ್ಬದಮರಡಿ, ಅಗಸನಹಳ್ಳಿ, ಶೇಡಬಾಳ ಖಾನಾಪುರ, ತಡಕೊಡ, ಮಾದನಭಾವಿ, ಮುಗಳಿ, ಹೋಸಟ್ಟಿ, ಬೋಗೂರು, ಜಿರಗಿವಾಡ ಮತ್ತು ಕೊಟಬಾಗಿ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಸುತ್ತುಮುತ್ತಲಿನ ಗ್ರಾಮಗಳ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಹೆಸ್ಕಾಂ ಪ್ರಕಟಣೆ ತಿಳಿಸಿದೆ.

‘ಚುನಾವಣಾ ಸಮಯದಲ್ಲಿ ಇನ್ನೂ ಏನೇನು ಆಗುತ್ತೆ ವೆಟ್ ಆ್ಯಂಡ್ ಸಿ’

40% ಕಮಿಷನ್ ಕುರಿತು ನ್ಯಾಯಮೂರ್ತಿಗಳಿಗೆ ದಾಖಲೆ ಸಲ್ಲಿಸಿದ ಕೆಂಪಣ್ಣ!

ಅಂಬಿಕಾಪತಿ ಸಾವಿಗೆ ಬಿಜೆಪಿ ಸರ್ಕಾರದ ಶಾಸಕರೇ ಕಾರಣ: ಕೆಂಪಣ್ಣ

- Advertisement -

Latest Posts

Don't Miss