Tuesday, April 15, 2025

Latest Posts

ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆಗೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಲೇವಡಿ..

- Advertisement -

Hubballi News: ಹುಬ್ಬಳ್ಳಿ: ಬಿಜೆಪಿಯ ಕೇಂದ್ರ ನಾಯಕರು ಅತ್ತು ಕರೆದು ಮಾಡಿರೋ ರೀತಿಯಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷರನ್ನು ಆಯ್ಕೆ ಮಾಡಿದ್ದಾರೆ ಎಂದು ಮಾಜಿ ಸಿಎಂ ಹಾಗೂ ವಿಪ ಸದಸ್ಯ ಜಗದೀಶ್ ಶೆಟ್ಟರ್ ಲೇವಡಿ ಮಾಡಿದ್ದಾರೆ.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಆರು ತಿಂಗಳಿಂದ ಬಿಜೆಪಿ ನಾಯಕನ ಆಯ್ಕೆ ಮಾಡಿರಲಿಲ್ಲ. ಇದೀಗ ಆಯ್ಕೆ ಮಾಡಿದ್ದಾರೆ. ರಾಜಕೀಯ ಪಕ್ಷ ಆಗಿ ತಕ್ಷಣವೇ ರಾಜ್ಯಾಧ್ಯಕ್ಷರ ಆಯ್ಕೆ ಮಾಡಬೇಕಿತ್ತು. ಬಿಜೆಪಿ ಫೇಲ್ ಆಗಿದೆ ಎಂದು ಹರಿಹಾಯ್ದರು.

ಇನ್ನು ಬಿಜೆಪಿಯವರು ಅಂತೂ ಆರು ತಿಂಗಳ ಮೇಲೆ ಅಧ್ಯಕ್ಷರನ್ನು ಮಾಡಿದ್ದಾರೆ. ನಾನು ಕಾಂಗ್ರೆಸ್ ನಲ್ಲಿ ಇದ್ದಿನಿ ಅಧ್ಯಕ್ಷರ ಆಯ್ಕೆ ಅವರ ಪಕ್ಷಕ್ಕೆ ಬಿಟ್ಟ ವಿಚಾರ. ಕಾಂಗ್ರೆಸ್ 136 ಸ್ಥಾನ ಬಂದು ಬಲಾಢ್ಯವಾಗಿ ಬೆಳೆದಿದೆ. ಉತ್ತಮವಾಗಿ ಕೆಲಸ ಮಾಡುತ್ತಿದೆ. ಹೀಗಿರುವಾಗ ಆಪರೇಷನ್ ಕಮಲದ ಭ್ರಮೆಯಲ್ಲಿ ಬಿಜೆಪಿಯವರಿದ್ದಾರೆ ಎಂದರು.

ಈಗಾಗಲೇ ಬೇರೆ ಕಡೆ ಆಪರೇಷನ್ ಕಮಲ ಮಾಡಲು ಹೋಗಿ ಕೈ ಸುಟ್ಟುಕೊಂಡಿದ್ದಾರೆ. 50-60 ರಿಂದ ಶಾಸಕರನ್ನು ಕರೆದುಕೊಂಡು ಬಂದು ಮತ್ತೆ ಸರ್ಕಾರ ರಚನೆ ಭ್ರಮೆ ಎಂದು ಕಿಡಿಕಾರಿದರು.

ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆ ಹಿಂದೆ ಏನೆ ಇರಲಿ ಅದಕ್ಕೆ ಜನ ಉತ್ತರ ನೀಡತ್ತಾರೆ. ಈಗ ಸಿದ್ದರಾಮಯ್ಯ ಮುಖ್ಯ ಮಂತ್ರಿ ಇದ್ದಾರೆ. ಪವರ್ ಶೇರಿಂಗ್ ಬಗ್ಗೆ ಯಾರೋ ಮಾತನಾಡುತ್ತಾರೆ ಚರ್ಚೆ ಮಾಡುವುದು ಸರಿಯಲ್ಲಾ. ಅದು ಬರೀ ಚರ್ಚೆ ಆಗುತ್ತೆ ಎಂದರು.

ಪಂಚ ರಾಜ್ಯದ ಚುನಾವಣೆ ಫಲಿತಾಂಶ ಕಾಂಗ್ರೆಸ್ ಪರವಾಗಿ ಇರುತ್ತದೆ. ಲೋಕಸಭೆಯಲ್ಲಿ ರಾಜ್ಯದಲ್ಲಿ ಕನಿಷ್ಠ 12-15 ಸ್ಥಾನಗಳು ಬರುತ್ತದೆ ಎಂದು ಶೆಟ್ಟರ್ ವಿಶ್ವಾಸ ವ್ಯಕ್ತಪಡಿಸಿದರು.

ಲಿಂಗಾಯತ ನಾಯಕರಿಗೆ ಮಣೆ ಹಾಕಿರೋ ವಿಚಾರವಾಗಿ ಮಾತನಾಡಿ, ಮುಂದಿನ ದಿನಗಳಲ್ಲಿ ಎಲ್ಲವೂ ಗೊತ್ತಾಗಲಿದೆ ಎಂದು ಜಗದೀಶ್ ಶೆಟ್ಟರ್ ಹೇಳಿದರು.

ಮಗಳನ್ನು ಹುಡುಕಿ ಕೊಟ್ಟರೆ 50 ಸಾವಿರ ಕೊಡುವುದಾಗಿ ಘೋಷಣೆ: 1 ದಿನದಲ್ಲೇ ಮನೆಗೆ ಬಂದ ಪೋರಿ

“ಯಡಿಯೂರಪ್ಪನವರ ಮಗ”ನಿಗೆ ಅಭಿನಂದನೆಗಳು: ವಿಜಯೇಂದ್ರಗೆ ವಿಶ್ ಮಾಡಿ ಕಾಲೆಳೆದ ಕಾಂಗ್ರೆಸ್

ಬಿಡದಿವರೆಗೆ ಮೆಟ್ರೋ ಸಂಚಾರ ವಿಸ್ತರಣೆಗೆ ಚಿಂತನೆ: ಡಿ.ಕೆ.ಶಿವಕುಮಾರ್‌

- Advertisement -

Latest Posts

Don't Miss