ಅಯೋಧ್ಯೆ ಶ್ರೀರಾಮನ ದರ್ಶನದ ವೇಳೆ ಭಾವುಕರಾದ ಮಾಜಿ ಸಚಿವ ಸಿ.ಟಿ.ರವಿ

Political News: ಮಾಜಿ ಸಚಿವ ಸಿಟಿ ರವಿ ಇಂದು ಅಯೋಧ್ಯೆಯ ರಾಮಲಲ್ಲಾ ದರ್ಶನ ಮಾಡಿದರು. ಪತ್ನಿ ಜೊತೆ ಬಾಲಕರಾಮನ ದರ್ಶನ ಮಾಡಿದ ಸಿ.ಟಿ. ರವಿ ಈ ಬಗ್ಗೆ ಟ್ವೀಟ್ ಮಾಡಿದ್ದು, ಶ್ರೀರಾಮನ ದರ್ಶನ ಮಾಡಿ, ನನ್ನ ಕಂಗಳು ತೇವಗೊಂಡವು ಎಂದಿದ್ದಾರೆ.

ಭವ್ಯ ಮಂದಿರದ ಮುಂದೆ ನಿಂತುಕೊಂಡವನಿಗೆ ಮೈಯೆಲ್ಲಾ ರೋಮಾಂಚನ, ಜೀವನ ಪಾವನವಾದ ಭಾವ. ಅಯೋಧ್ಯಾ ರಾಮ ಜನ್ಮಭೂಮಿಯಲ್ಲಿ ಮರ್ಯಾದಾ ಪುರುಷೋತ್ತಮ ಪ್ರಭು ಶ್ರೀರಾಮ ಚಂದ್ರನ ಮಂದಿರ ನಿರ್ಮಾಣಕ್ಕಾಗಿ 500 ವರ್ಷಗಳ ಹೋರಾಟದ ನೆನಪಾಗಿ ಒಮ್ಮೆಗೆ ಕಣ್ಣಲ್ಲಿ ನೀರು ತುಂಬಿ ಬಂತು. ರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ಭವ್ಯ ರಾಮ ಮಂದಿರ ನಿರ್ಮಾಣವಾಗಿರುವ ಸಂತೋಷಕ್ಕೋ? ಅಥವಾ ಮಂದಿರ ನಿರ್ಮಾಣಕ್ಕೆ ತ್ಯಾಗ ಬಲಿದಾನ ಮಾಡಿದ ಲಕ್ಷಾಂತರ ಜನರಿಗಾಗಿ ಮೂಡಿದ ಅಶ್ರುತರ್ಪಣವೋ ನಾನರಿಯೆ.

ಯಾವ ಸರಯೂ ತೀರದಲ್ಲಿ ಗುಲಾಮಗಿರಿಯ ಪ್ರತೀಕವಾಗಿ ನಿಂತಿದ್ದ ವಿವಾದಿತ ಕಟ್ಟಡವನ್ನು ಕೆಡವಲು, ರಾಷ್ಟ್ರ ಪುರುಷ ರಾಮನಿಗೆ ಭವ್ಯ ರಾಷ್ಟ್ರ ಮಂದಿರವನ್ನು ಕಟ್ಟಲು ನಡೆಸಿದ ಎರಡು ಕರಸೇವೆ, ಜೊತೆಗಿದ್ದ ಕರಸೇವಕರು, ಸರಯೂ ನದಿಯಿಂದ ತಂದ ಮರಳಿನ ರಾಶಿ, ಮೈ ಮೇಲಿದ್ದ ಲಾಠಿಯೇಟಿನ ಬಾಸುಂಡೆಗಳು, ಗುಮ್ಮಟ ಪತನ, ತಾತ್ಕಾಲಿಕ ಮಂದಿರ ನಿರ್ಮಾಣಕ್ಕೆ ಇಟ್ಟಿಗೆ ಹೊತ್ತದ್ದು, ಹುತಾತ್ಮ ಕರಸೇವಕರ ದೇಹಗಳು, ನೋವಿನಿಂದ ನರಳುತ್ತಿದ್ದ ಕರಸೇವಕರು, ಕರಸೇವಕರನ್ನು ಮಕ್ಕಳ ಹಾಗೆ ನೋಡಿಕೊಂಡ ದೇಶದ ಮಾತೆಯರು, ಇವರೆಲ್ಲರೂ ನನ್ನ ಸ್ಮೃತಿ ಪಟಲದಲ್ಲಿ ಹಾದು ಹೋದರು.

ಇಂದು ಸಪತ್ನಿಕನಾಗಿ ಅಯೋಧ್ಯೆಯ ಭವ್ಯ ಮಂದಿರದಲ್ಲಿ ಪ್ರಭು ಶ್ರೀರಾಮ ಚಂದ್ರನ ದರ್ಶನ ಮಾಡುವಂತಾಗಿದ್ದು ನನ್ನ ಪಾಲಿನ ಸೌಭಾಗ್ಯ.

ರಾಮನಿಗೆ ಭವ್ಯ ಮಂದಿರವಾಗಬೇಕೆಂದು ಉತ್ಸುಕತೆ ಇತ್ತು ಆದರೆ ಇಂಥಹ ಸೌಭಾಗ್ಯ ನನ್ನ ಪಾಲಿಗೆ ಬರುತ್ತದೆ ಎಂಬ ಕನಸು ಕೂಡ ನಾನು ಕಂಡಿರಲಿಲ್ಲ. ಇಂದು ಅಯೋಧ್ಯೆ ರಾಮಮಂದಿರದಲ್ಲಿ ನಡೆಯುತ್ತಿರುವ ಮಂಡಲೋತ್ಸವದಲ್ಲಿ ಶ್ರೀರಾಮನ ಉತ್ಸವ ಮೂರ್ತಿಯನ್ನು ಹೊತ್ತ ಬೆಳ್ಳಿ ಪಲ್ಕಕ್ಕಿಯನ್ನು ಹೆಗಲಲ್ಲಿ ಹೊತ್ತು ಉತ್ಸವದಲ್ಲಿ ಭಾಗಿಯಾಗುವ ಭಾಗ್ಯ ನನ್ನದಾಯಿತು.

ಅಯೋಧ್ಯೆಯಲ್ಲಿ ಇಂದಿನ ಕಲಶಾರಾಧನೆ, ಕಲಶಾಭಿಷೇಕದ ಸೇವಾರ್ಥಿಯಾಗಿ ವಿಧಿಪೂರ್ವಕ ಸಂಕಲ್ಪ ನೆರವೇರಿಸಿ, ಪೇಜಾವರ ಶ್ರೀಗಳ ಮೂಲಕ ಬಾಲರಾಮನಿಗೆ ಕಲಶಾಭಿಷೇಕವನ್ನು ಸಪತ್ನಿಕನಾಗಿ ನೆರವೇರಿಸಿ ಶ್ರೀಗಳಿಂದ ರಜತಕಲಶಪ್ರಸಾದ ಸ್ವೀಕರಿಸಿದೆ ಎಂದು ಸಿ.ಟಿ.ರವಿ ಟ್ವೀಟ್ ಮಾಡಿದ್ದಾರೆ.

ಕ್ರಿಕೇಟಿಗ ರವಿಂದ್ರ ಜಡೇಜಾ ವಿರುದ್ಧ ಅಪ್ಪನ ಆರೋಪ: ಸೊಸೆ ರಿವಾಬ ಹೇಳಿದ್ದೇನು..?

ಬಾಲಕರಾಮನ ದರ್ಶನ ಪಡೆದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, ಪಂಜಾಬ್ ಸಿಎಂ ಭಗವಂತ್ ಮಾನ್

ಅಭಿಮಾನಿಯ ಮೊಬೈಲ್ ಕಸಿದು ಎಸೆದ ಬಾಲಿವುಡ್ ಗಾಯಕ ಆದಿತ್ಯ ನಾರಾಯಣ್

About The Author