www.karnatakatv.net : ಪಶ್ಚಿಮ ಬಂಗಾಳ, ಪಂಜಾಬ್ ಮತ್ತು ಆಸ್ಸಾಂನಲ್ಲಿ ಅಂತಾರಾಷ್ಟ್ರ ಗಡಿಯುದ್ದಕ್ಕೂ ಭದ್ರತಾ ಪಡೆಯ ಅಧಿಕಾರ ವ್ಯಾಪ್ತಿಯನ್ನು 50 ಕಿಲೋ ಮೀಟರ್ ವಿಸ್ತರಿಸಲಾಗಿದೆ.
ಹೌದು.. ಭದ್ರತಾ ಪಡೆಯ ಅಧಿಕಾರ ವ್ಯಾಪ್ತಿಯನ್ನು 50 ಕಿಲೋ ಮೀಟರ್ ವಿಸ್ತರಿಸಿ ಅಧಿಕಾರ ವ್ಯಾಪ್ತಿಯಲ್ಲಿ ಏಕರೂಪತೆ ತರಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಗಡಿ ಭದ್ರತಾ ಪಡೆ ಸ್ಪಷ್ಟಪಡಿಸಿದೆ. ಈ “ತಿದ್ದುಪಡಿ”ಯಿಂದ ಗಡಿಯನ್ನು ರಕ್ಷಿಸುವ ಪಡೆಗೆ ಗಡಿಯಾಚೆಗಿನ ಅಪರಾಧಗಳನ್ನು ಪರಿಣಾಮಕಾರಿಯಾಗಿ ತಡೆಯಲು ಸಹಾಯ ಮಾಡುತ್ತದೆ ಎಂದು ಬಿಎಸ್ ಎಫ್ ಹೇಳಿಕೆಯಲ್ಲಿ ಉಲ್ಲೇಖಿಸಿದೆ.
“ಗಡಿಯಾಚೆಗಿನ ಅಪರಾಧಗಳನ್ನು ಪರಿಣಾಮಕಾರಿಯಾಗಿ ತಡೆಯಲು ತಿದ್ದುಪಡಿಯು ಗಡಿ ಭದ್ರತಾ ಪಡೆಗೆ ಸಹಕಾರಿಯಾಗಿದೆ. ಹೊಸ ತಿದ್ದುಪಡಿಯಿಂದ ಗಡಿ ರಾಜ್ಯಗಳಾದ ಪಂಜಾಬ್, ಪಶ್ಚಿಮ ಬಂಗಾಳ, ಗುಜರಾತ್, ರಾಜಸ್ಥಾನ ಮತ್ತು ಅಸ್ಸಾಂನಲ್ಲಿ ಗಡಿಯಿಂದ 50 ಕಿಮೀ ಪ್ರದೇಶದಲ್ಲಿ ಕಾರ್ಯ ನಿರ್ವಹಿಸಲು ಏಕರೂಪತೆ ತಂದoತೆ ಆಗುತ್ತದೆ,” ಎಂದು ಬಿಎಸ್ಎಫ್ ಹೇಳಿದೆ. “ಕೇಂದ್ರ ಸರ್ಕಾರದ ಈ “ತಾರ್ಕಿಕವಲ್ಲದ” ನಿರ್ಧಾರವು ಗಡಿ ಭದ್ರತಾ ಪಡೆಗಳನ್ನು ಹೆಚ್ಚಿಸುವ ಮನೋಭಾವಕ್ಕೆ ವಿರುದ್ಧವಾಗಿದೆ,” ಎಂದು ಸುಖಜಿಂದರ್ ಸಿಂಗ್ ರಾಂಧವಾ ಹೇಳಿದ್ದಾರೆ. ಅವರು ಅಂತಾರಾಷ್ಟ್ರೀಯ ಗಡಿಯ ಮೇಲೆ ಗಮನ ಹರಿಸಬೇಕು ಮತ್ತು ರಕ್ಷಣೆಗೆ ಮೊದಲ ಸಾಲಿನಲ್ಲಿ ನಿಂತು ಕಾರ್ಯನಿರ್ವಹಿಸಬೇಕು. ಒಳನಾಡಿನಲ್ಲಿ ಪೊಲೀಸರ ಕೆಲಸ ಮಾಡುವುದು ಗಡಿ ಭದ್ರತಾ ಪಡೆಯ ಕಾರ್ಯವಲ್ಲ ಎಂದು ಅವರು ಹೇಳಿದ್ದಾರೆ.
ಭಾರತ ಗಡಿ ಭದ್ರತಾ ಪಡೆಯ ಅಧಿಕಾರ ವ್ಯಾಪ್ತಿಯನ್ನು ವಿಸ್ತರಿಸಿರುವುದಕ್ಕೆ ಸಂಬoಧಿಸಿದoತೆ ಕೇಂದ್ರ ಸರ್ಕಾರದ ಕ್ರಮವನ್ನು ರಾಜಕೀಯ ನಾಯಕರು ಪ್ರಶ್ನೆ ಮಾಡಿದ್ದಾರೆ. ಪಂಜಾಬ್ ಮುಖ್ಯಮಂತ್ರಿ ಚರಣಜಿತ್ ಸಿಂಗ್ ಚನ್ನಿ, ಉಪ ಮುಖ್ಯಮಂತ್ರಿ ಸುಖಜಿಂದರ್ ಸಿಂಗ್ ರಾಂಧಾವ ಬಿಜೆಪಿ ಸರ್ಕಾರವನ್ನು ಟೀಕಿಸಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ‘ಈ ನಿರ್ಧಾರವನ್ನು ತಕ್ಷಣವೇ ಹಿಂದಕ್ಕೆ ಪಡೆಯಿರಿ’ ಎಂದು ಪಂಜಾಬ್ ಮುಖ್ಯಮಂತ್ರಿ ಚರಣಜಿತ್ ಸಿಂಗ್ ಚನ್ನಿ ಟ್ವೀಟ್ ಮಾಡಿದ್ದಾರೆ. “ಅಂತಾರಾಷ್ಟ್ರೀಯ ಗಡಿಗಳಲ್ಲಿ 50 ಕಿ.ಮೀ ವ್ಯಾಪ್ತಿಯಲ್ಲಿ ಬಿಎಸ್ ಎಫ್ ಹೆಚ್ಚುವರಿ ಅಧಿಕಾರವನ್ನು ನೀಡುವ ಕೇಂದ್ರ ಸರ್ಕಾರದ ಏಕಪಕ್ಷೀಯ ನಿರ್ಧಾರವನ್ನು ನಾನು ಬಲವಾಗಿ ಖಂಡಿಸುತ್ತೇನೆ. ಇದು ಒಕ್ಕೂಟ ವ್ಯವಸ್ಥೆ ಮೇಲಿನ ನೇರ ದಾಳಿಯಾಗಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ತಕ್ಷಣವೇ ಈ ನಿರ್ಧಾರವನ್ನು ಹಿಂಪಡೆಯುವAತೆ ನಾನು ಒತ್ತಾಯಿಸುತ್ತೇನೆ,” ಎಂದು ಟ್ವೀಟ್ ಮಾಡಿದ್ದಾರೆ.