Banglore News:
ಬೆಂಗಳೂರು,ಆ.20: ರೈತರನ್ನು ರೈತ ರಫ್ತುದಾರರನ್ನಾಗಿ ಮಾಡಿ ರೈತ ಶಕ್ತಿಶಾಲಿಯಾಗಿ ಲಾಭವನ್ನು ದ್ವಿಗುಣಗೊಳಿಸುವ ನಿಟ್ಟಿನಲ್ಲಿ ರೈತರು ರಫ್ತುದಾರರಾಗಲು ಎಕ್ಸ್ಪೋರ್ಟ್ ಲ್ಯಾಬ್ ಆರಂಭಿಸಲಾಗುತ್ತಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ತಿಳಿಸಿದರು.
ಕರ್ನಾಟಕ ರಾಜ್ಯ ಕೃಷಿ,ಉತ್ಪನ್ನಗಳ ಸಂಸ್ಕರಣೆ ಹಾಗು ರಫ್ತು ನಿಗಮ ಬೆಂಗಳೂರಿನಲ್ಲಿ ರೈತ ಉತ್ಪಾದಕರ ಸಂಸ್ಥೆಗಳು ಹಾಗು ರಪ್ತುದಾರರ ಸಮಾವೇಶದ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು,ಕರ್ನಾಟಕದಲ್ಲಿ ಮೊದಲ ಹಂತದಲ್ಲಿ ಐದು ರೈತರ ಎಕ್ಸ್ಪೋರ್ಟ್ ಲ್ಯಾಬ್ಗಳನ್ನು ಗುರುತಿಸಲಾಗಿದೆ.ಇಂಡಿ ಹನುಮನಮಟ್ಟಿ ನಾಗೇನಹಳ್ಳಿ ವರದಗೇರಾ ಬನವಾಸಿಗಳಲ್ಲಿ ರಫ್ತುದಾರರ ಲ್ಯಾಬ್ ಆರಂಭಿಸಲು ಗುರುತಿಸಲಾಗಿದೆ ಎಂದರು.
ಜೊತೆಗೆ ಜೀನಿ ಉತ್ಪನ್ನದ ಕುರಿತಾಗಿ ತಿಳಿಸಿದ ಸಚಿವರು ವಿದೇಶಕ್ಕೆ ಯಾಕೆ ಈ ಉತ್ಪನ್ನ ರಫ್ತು ಮಾಡಬಾರದು ಎಂಬುವುದಾಗಿ ಜೀನಿ ಉತ್ಪನ್ನವನ್ನು ಕೊಂಡಾಡಿದರು.
ಜಲಾನಯನ ಅಭಿವೃದ್ಧಿ ಇಲಾಖೆಯ ಆಯುಕ್ತರಾದ ಎಂ.ವಿ.ವೆಂಕಟೇಶ್ ಪ್ರಾಸ್ತಾವಿಕವಾಗಿ ಮಾತನಾಡಿ,ರೈತರಿಂದ ರೈತರಿಗಾಗಿ ರೈತರಿಗೋಸ್ಕರ ಇರುವ ಸಂಸ್ಥೆ ರೈತ ಉತ್ಪಾದಕ ಸಂಸ್ಥೆಯಾಗಿದೆ.ಕೃಷಿ ಸಚಿವರು ರೈತರಿಗೆ ಲಾಭಒದಗಿಸುವ ನಿಟ್ಟಿನಲ್ಲಿ ರೈತರನ್ನು ಎಂಟರ್ಪ್ರೈನರ್ಸ್ಗಳಾಗಿ ಮಾಡಿ ರೈತರುರೈತೋದ್ಯಮಿಗಳಾಗಬೇಕಂಬ ನಿಟ್ಟಿನಲ್ಲಿ ದೇಶದ ಹಲವು ರಾಜ್ಯಗಳಿಗೆ ಇಲಾಖಾಧಿಕಾರಿಗಳೊಂದಿಗೆ ಭೇಟಿ ನೀಡಿ ಅಧ್ಯಯನ ಮಾಡಿ ನಮ್ಮ ರಾಜ್ಯದ ರೈತರಆದಾಯ ದ್ವಿಗುಣಗೊಳಿಸುವ ನಿಟ್ಟಿನಲ್ಲಿ ಹಲವಾರು ಕಾರ್ಯಕ್ರಮಗಳನ್ನು ನೀಡುತ್ತಿದ್ದಾರೆ.ಈ ನಿಟ್ಟಿನಲ್ಲಿ ರೈತ ಉತ್ಪಾದಕರ ಸಂಸ್ಥೆಗಳ ಹಾಗೂ ರಫ್ತುದಾರರ ಸಮಾವೇಶ ಆಯೋಜಿಸಿ ರೈತರನ್ನು ಉತ್ತೇಜಿಸುತ್ತಿದ್ದಾರೆ ಎಂದರು.
ಐದು ಪ್ರಾಂತ್ಯಗಳಲ್ಲಿ ರಫ್ತುಉದ್ಯಮ ಕೇಂದ್ರಗಳನ್ನು ಆರಂಭಿಸುವ ಉದ್ದೇಶ ಹೊಂದಲಾಗಿದೆ.ನಮ್ಮ ಇಲಾಖೆ ಇಡೀ ದೇಶದಲ್ಲಿ ನಂ.1ಆಗಿದೆ.ಇದರ ಮುಂದಾಳತ್ವ ಕೃಷಿ ಸಚಿವ ಬಿ.ಸಿ.ಪಾಟೀಲರಾಗಿದೆ.ರೈತರು ಬೆಳೆದರಷ್ಟೇ ಅಲ್ಲ ಹೊಸಹೊಸ ತಂತ್ರಜ್ಞಾನಗಳನ್ನು ಅಳವಡಿಸಿಕೊಂಡು ಕಾಲಕ್ಕೆ ತಕ್ಕಂತೆ ಬದಲಾಗಿ ರೈತರು ನೇರವಾಗಿ ಮಾರುಕಟ್ಟೆ ನೇರವಾಗಿ ರಫ್ತುದಾರರಾಗಬೇಕು ನೇರವಾಗಿ ಗ್ರಾಹಕರನ್ನು ಮುಟ್ಟಬೇಕೆಂಬ ಎಂಬ ಉದ್ದೇಶ ನಮ್ಮದು ಎಂದರು.
ಕೃಷಿ ರಫ್ತು ಅಗತ್ಯತೆಗಳ ಬಗ್ಗೆ, ಕೃಷಿ ರಫ್ತಿಗ ಇರುವ ಅವಕಾಶಗಳು ಹಾಗೂ ಕೃಷಿ ರಫ್ತು ಯೋಜನೆಗಳು,ರಫ್ತಿದಾರರ ಅನಹಭವ ಹಂಚಿಕೆ,ಕೃಷಿ ರಫ್ತಿನಲ್ಲಿ ಎಫ್ಪಿಒಗಳು ಎದುರಿಸುತ್ತಿರುವ ಸವಾಲುಗಳು, ಕೃಷಿ ರಫ್ತಿನಲ್ಲಿ ವಿವಿಧ ನಿಗಮಮಂಡಳಿಗಳ ಪಾತ್ರ,ಕೃಷಿ ರಫ್ತಿಗೆ ಲಭ್ಯವಿರುವ ಮೂಲಭೂತ ಸೌಲಭ್ಯಗು,ರಫ್ತು ಕುರಿತಾದ ಯೋಜನೆ ಕುರಿತು ಸಮಾವೇಶದಲ್ಲಿ ಕಾರ್ಯಾಗಾರ ನಡೆಯಿತು.
ಕೃಷಿ ಇಲಾಖೆಯ ಕಾರ್ಯದರ್ಶಿ ಶಿವಯೋಗಿ ಕಳಸದ್, ಕೃಷಿ ಆಯುಕ್ತರಾದ ಶರತ್ ಕುಮಾರ್, ಜಲಾನಯನ ಅಭಿವೃದ್ಧಿ ಇಲಾಖೆಯ ಆಯುಕ್ತರಾದ ,ಜಿಕೆವಿಕೆ ಉಪಕುಲಪತಿ ಡಾ.ರಾಜೇಂದ್ರ ಪ್ರಸಾದ್,ತೋಟಗಾರಿಕಾ ನಿರ್ದೇಶಕ ನಾಗೇಂದ್ರ ಪ್ರಸಾದ್,ಕೃಷಿ ಇಲಾಖೆನಿರ್ದೇಶಕಿ ನಂದಿನಿಕುಮಾರಿ,ಕೆಪೆಕ್ ಸಂಸ್ಥೆ ನಬಾರ್ಡ್ನ ಪ್ರಮುಖರು ಅಂತರಗಂಗೆ ಇಲಾಖೆ ನಿರ್ದೇಶಕರು
ಕೃಷಿ ಇಲಾಖೆಯ ಅಪರ ಕೃಷಿನಿರ್ದೇಶಕರುಸೇರಿದಂತೆ ಮತ್ತಿತರ ಪ್ರಮುಖರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ನಿರ್ದೇಶಕ ಬಿ.ವೈ.ಶ್ರೀನಿವಾಸ್ ಸ್ವಾಗತಿಸಿ, ಕೆಪೆಕ್ ವ್ಯವಸ್ಥಾಪಕ ನಿರ್ದೇಶಕ ಎಂ.ಹೆಚ್.ಬಂಥನಾಳ ವಂದಿಸಿದರು.
ಮಾಜಿ ಸಿಎಂ ಸಿದ್ಧರಾಮಯ್ಯ ಕಾರಿನ ಮೇಲೆ ಮೊಟ್ಟ ಎಸೆದ ಕೇಸ್ ಗೆ ಬಿಗ್ ಟ್ವಿಸ್ಟ್: ಮೊಟ್ಟೆ ಎಸೆದಿದ್ದು ಯಾರು ಗೊತ್ತಾ.?
ಅರಸು ಜನಮನದಲ್ಲಿ ಶಾಶ್ವತ ಸ್ಥಾನ ಗಳಿಸಿರುವ ನಾಯಕರು – ಸಿಎಂ ಬಸವರಾಜ ಬೊಮ್ಮಾಯಿ