Thursday, June 19, 2025

Latest Posts

‘ಇನ್ನು ಮುಂದೆ ಅಯೋಧ್ಯೆಯಲ್ಲಿ ಫೈರಿಂಗ್ ಸದ್ದು ಕೇಳುವುದಿಲ್ಲ, ರಾಮಕೀರ್ತನೆ ಕೇಳುತ್ತದೆ’

- Advertisement -

National Political News: ಅಯೋಧ್ಯೆ ರಾಮಮಂದಿರ ಉದ್ಘಾಟನಾ ಸಮಾರಂಭದ ಬಳಿಕ ಮಾತನಾಡಿರು ಉತ್ತರಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್, ಇನ್ನು ಮುಂದೆ ಅಯೋಧ್ಯೆ ಬೀದಿಯಲ್ಲಿ ಕರ್ಫ್ಯೂ ಇರುವುದಿಲ್ಲ. ಇಲ್ಲಿ ಗುಂಡಿನ ಸದ್ದು ಕೇಳುವುದಿಲ್ಲವೆಂದು ಹೇಳಿದ್ದಾರೆ.

ಈ ಮೊದಲು ಮುಲಾಯಂ ಸಿಂಗ್ ಯಾದವ್ ಸಿಎಂ ಆಗಿದ್ದಾಗ, ಆಗಾಗ ಅಯೋಧ್ಯೆಯಲ್ಲಿ ಫೈರಿಂಗ್, ಕರ್ಫ್ಯೂ ಆಗುತ್ತಲೇ ಇತ್ತು. ಎಷ್ಟೋ ಜನ ಸಾವನ್ನಪ್ಪಿದ್ದರು. ಆದರೆ ಈಆಗ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗಿದೆ. ಈಗ ಆ ಸ್ಥಳ ದೈವಿಕ ಸ್ಥಳವಾಗಿ ಬದಲಾಗಿದೆ. ಸದ್ಯ ಅಲ್ಲಿ ಯೋಗಿ ಆದಿತ್ಯನಾಥ್ ಆಡಳಿತವಿದೆ.

ಇನ್ನು ಮುಂದೆ ಅಯೋಧ್ಯೆಯಲ್ಲಿ ಫೈರಿಂಗ್ ಸದ್ದು ಕೇಳುವುದಿಲ್ಲ. ರಾಮೋತ್ಸವ, ದೀಪೋತ್ಸವ ನಡೆಯುತ್ತದೆ. ಗಲ್ಲಿ ಗಲ್ಲಿಗಳಲ್ಲಿ ಕೀರ್ತನೆಗಳು ನಡೆಯುತ್ತದೆ ಎಂದು ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ಅಯೋಧ್ಯೆಯ ಕಾರ್ಯಕ್ರಮದಲ್ಲಿ ಭಾಗಿಯಾದ ಏಕೈಕ ಬಿಜೆಪಿ ಸಿಎಂ ಅಂದ್ರೆ ಅದು ಯೋಗಿ ಆದಿತ್ಯನಾಥ್ ಆಗಿದ್ದಾರೆ. ಅವರು ಗರ್ಭಗುಡಿಯಲ್ಲಿ ರಾಮಲಲ್ಲಾನ ಪ್ರಾಣಪ್ರತಿಷ್ಠಾಪನೆಯಾಗುವ ಹೊತ್ತಿಲ್ಲೂ, ಪ್ರಧಾನಿ ಮೋದಿಯವರೊಂದಿಗೆ ಇದ್ದರು.

ಚೆನ್ನೈನಲ್ಲಿ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ ಅರ್ಜುನ್ ಸರ್ಜಾ

ಸಾಂಘವಾಗಿ ನೆರವೇರಿದ ರಾಮಲಲ್ಲಾ ಪ್ರಾಣಪ್ರತಿಷ್ಠಾಪನೆ: ನಮೋ ಸಾರಥ್ಯದಲ್ಲಿ ನೆರವೇರಿದ ಪೂಜೆ

ಅಯೋಧ್ಯೆ ರಾಮಮಂದಿರಕ್ಕೆ ಅಫ್ಘಾನಿಸ್ತಾನದಿಂದ ಬಂದಿದೆ ಉಡುಗೊರೆ

- Advertisement -

Latest Posts

Don't Miss