political story
ಫೆಬ್ರವರಿ 19 ರಂದು ರಾಜ್ಯ ಮಟ್ಟದ ಶಿವಾಜಿ ಜಯಂತಿಯ ನಿಮಿತ್ತ ಉತ್ತರಕನ್ನಡ ಜಿಲ್ಲೆಯ ಕಾರವಾರದಲ್ಲಿ ಕ್ಕೆ ಹೊಹಿರುವ ಸಂದರ್ಭ್ದಲ್ಲಿ ಅಲ್ಲಿರುವ ಬಿಜೆಪಿ ನಾಯಕರ ಮನೆಯಲ್ಲಿ ಮಾಂಸಹಾರ ಸೇವಿಸಿ ಅಲ್ಲಿಂದ ಕಾರವಾರದಿಂದ ತೆರಳಿದ ಸಿ.ಟಿ ರವಿ ಭಟ್ಕಳಕ್ಕೆ ತೆರಳಿ ಸ್ಥಳೀಯ ಶಾಸಕ ಸುನೀಲ್ ನಾಯ್ಕ ಅವರ ಮನೆಯಲ್ಲಿ ಊಟ ಮಾಡಿ ನಂತರ ಪಟ್ಟಣದ ನಾಗಭನ ಹಾಗೂ ಕರಿಭಂಟ ಹನುಮ ದೇವಸ್ಥಾನದಲ್ಲಿ ದೇವರ ದರ್ಶನ ಪಡೆದಿದ್ದರು. ಆದರೆ ಸಿಟಿ ರವಿಯವರು ಮಾಂಸಹಾರ ಸೇವಿಸಿತ್ತಿರುವ ಭಾವಚಿತ್ರ ಸಾಮಾಜಿಕ ಜಾಲತಾಣದಲ್ಲಿ ಬಹಳ ಚರ್ಚೆಗೆ ಕಾರಣವಾಗಿತ್ತು ಇದಕ್ಕೆ ಪ್ರತಿರೋದವೆಂಬಂತೆ ವಿಪಕ್ಷನಾಯಕ ಸಿದ್ದರಾಮಯ್ಯನವರು ವ್ಯಂಗ್ಯವಾಡಿದ್ದರು.
ಆದರೆ ಇದನ್ನು ಸಮರ್ಥಿಸಿಕೊಂಡ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿಯವರು ನಾನು ಮಅಂಸ ಸೇವಿಸಿದ್ದು ನಿಜ ಆದರೆ ಗರ್ಭಗುಡಿಯೊಳಗೆ ಹೋಗಿಲ್ಲ ಹೊರಾಂಗಣದಲ್ಲಿ ನಿಂತು ದೇವಸ್ಥಾನದ ಕಟ್ಟಡವನ್ನು ವಿಕ್ಷಿಸಿದ್ದೇನೆ
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಮಾಂಸಹಾರ ತಿಂದಿದ್ದೆ ಎನ್ನುವುದನ್ನು ಮರೆತಿದ್ದೆ. ಅಲ್ಲಿನ ಸ್ಥಳೀಯರ ಅಪೇಕ್ಷೆ ಮೇರೆಗೆ ಹೋಗಿದ್ದೆ. ಹೀಗಾಗಿ ನಾನು ದೇವಸ್ಥಾನದ ಗರ್ಭ ಗುಡಿಗೆ ಹೋಗಲಿಲ್ಲ. ದೇವಸ್ಥಾನದ ಆವರಣದ ಬಳಿ ಮಾತ್ರ ಹೋಗಿದ್ದೆ. ಎಲ್ಲವನ್ನೂ ಎದೆ ಬಗೆದು ತೋರಿಸಲು ನಾನು ಹನುಮಂತ ಅಲ್ಲ. ಕಾಂಗ್ರೆಸ್ನವರಂತೆ ನಾನು ತಿಂದು ಹೋಗಿದ್ದೆ ಏನ್ ಈಗ ಅಂತ ನಾನು ಹೇಳಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಪರೋಕ್ಷವಾಗಿ ಕಿಡಿಕಾರಿದರು.